Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರ ಆಕ್ಸಿಜನ್ ಪ್ಲಾಂಟ್ ಹಾಕದೆ ಹಣ ಪೋಲು ಮಾಡಿದ್ದಾರೆ ಎಂಬ ಕಂಗನಾ ರಣಾವತ್, ಬಿ.ಎಲ್ ಸಂತೋಷ್‌ರವರ ಆರೋಪ ಸುಳ್ಳಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಹಣ ನೀಡಿದರೂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ 8 ಆಕ್ಸಿಜನ್ ಪ್ಲಾಂಟ್‌ಗಳನ್ನು, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 10 ಪ್ಲಾಂಟ್‌ಗಳನ್ನು ನಿರ್ಮಿಸಿಲ್ಲ. ಹಣವೆಲ್ಲಾ ನುಂಗಿ ನೀರು ಕುಡಿದಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಸೇರಿದಂತೆ ಬಿಜೆಪಿಯ ಹಲವು ಸಚಿವರು, ನಾಯಕರು ಮತ್ತು ಅನುಯಾಯಿಗಳು ಆರೋಪಿಸಿದ್ದಾರೆ.

ಅವರು ಆಮ್ಲಜನಕ ಘಟಕಗಳ ಸ್ಥಾಪನೆ ಕುರಿತಂತೆ ದಾರಿ ತಪ್ಪಿಸುವ ಗ್ರಾಫಿಕ್ ಹಂಚಿಕೊಂಡಿದ್ದಾರೆ. ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಪಿಎಂ-ಕೇರ್ಸ್‌ ನಿಧಿ ಅಡಿ ಹಂಚಿಕೆ ಮಾಡಿದ ಹಣ ಎಲ್ಲಿದೆ? ದೆಹಲಿಗೆ ಎಂಟು ಸ್ಥಾವರಗಳಿಗೆ ಹಣ ನೀಡಿದ್ದು ಒಂದನ್ನು ಮಾತ್ರ ಸ್ಥಾಪಿಸಿದೆ. ಮಹಾರಾಷ್ಟ್ರದಲ್ಲಿ ಕೂಡ ಒಂದು ಆಮ್ಲಜನಕ ಸ್ಥಾವರವನ್ನು ಮಾತ್ರ ಸ್ಥಾಪಿಸಲಾಗಿದೆ. ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸುಮ್ಮನೇ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯನ್ನು ದೂರುತ್ತಿವೆ……. ಎಂಬುದು ಅವರ ಪ್ರಶ್ನೆಯ ಸಾರಾಂಶ.

ಫ್ಯಾಕ್ಟ್: ರಾಜ್ಯಗಳಿಗೆ ನಯಾಪೈಸೆ ನೀಡಿಲ್ಲ!

ಈ ಮೇಲಿನ ಆರೋಪಗಳು ಸಂಪೂರ್ಣ ಸುಳ್ಳಾಗಿವೆ. ಏಕೆಂದರೆ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪಿಎಂ ಕೇರ್ಸ್‌ನಿಂದ ಕೇಂದ್ರ ಸರ್ಕಾರ ಹಣ ನೀಡಿಲ್ಲ. ಬದಲಿಗೆ ದೇಶಾದ್ಯಂತ 162 ಆಮ್ಲಜನಕ ಘಟಕಗಳ ಸ್ಥಾಪನೆಯ ಹೊಣೆ ಹೊತ್ತಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಆರೋಗ್ಯ ಸೇವೆಗಳ ಸೊಸೈಟಿ. ಹೀಗಾಗಿ ಇದು ಕೇಂದ್ರ ಸರ್ಕಾರ ಮತ್ತು ಮೋದಿಯವರ ವೈಫಲ್ಯವೇ ಹೊರತು, ದೆಹಲಿ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ವೈಫಲ್ಯ ಅಲ್ಲವೇ ಅಲ್ಲ.

ಜನವರಿ 5 ರ ಕೇಂದ್ರ ಸರ್ಕಾರದ ಪತ್ರಿಕಾ ಪ್ರಕಟಣೆಯಲ್ಲಿ, ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ 162 ಪಿಎಸ್‌ಎ (ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್) ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್ ಫಂಡ್ ಟ್ರಸ್ಟ್ 201.58 ಕೋಟಿ ರೂ. ಮೀಸಲಿರಿಸಿದೆ ಎಂದು ಹೇಳಲಾಗಿದೆ. ಈ ಸ್ಥಾವರಗಳನ್ನು ಸ್ಥಾಪಿಸಬೇಕಾದ ಸರ್ಕಾರಿ ಆಸ್ಪತ್ರೆಗಳನ್ನು ಸಂಬಂಧಪಟ್ಟ ರಾಜ್ಯಗಳೊಂದಿಗೆ ಸಮಾಲೋಚಿಸಿ ಗುರುತಿಸಲಾಗಿದೆ ಎಂದು ಕೇಂದ್ರ ಹೇಳಿತ್ತು.

ಸ್ಥಾವರಗಳ ಸ್ಥಾಪನೆಯನ್ನು ಕೇಂದ್ರದ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಸಿಎಂಎಸ್‌ಎಸ್ ಮಾಡಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಬಿಡ್ ಕರೆದು ಕಂಪನಿಗಳನ್ನು ಗುರುತಿಸಿ ಹಣ ಪೂರೈಕೆ ಮಾಡುವುದು ಅದರ ಜವಾಬ್ದಾರಿ. ದೆಹಲಿ ಸೇರಿದಂತೆ ಇತರ ರಾಜ್ಯಗಳ ಜವಾಬ್ದಾರಿ ಕೇವಲ ಆಸ್ಪತ್ರೆಗಳಲ್ಲಿ ವಿದ್ಯುತ್ ಮತ್ತು ಸಿವಿಲ್ ಸೌಲಭ್ಯಗಳನ್ನು ಒದಗಿಸುವುದಾಗಿದೆ. ಹಾಗಾಗಿ ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಪಿಎಂ ಕೇರ್ಸ್ ಹಣ ಹೋಗುವ ಸಾಧ್ಯತೆಯೇ ಇಲ್ಲ. ಇನ್ನು ಇದೇ ಯೋಜನೆಯಡಿಯಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೂ 14 ಪ್ಲಾಂಟ್‌ಗಳನ್ನು ನೀಡಲಾಗಿದ್ದು ಅದರಲ್ಲಿ ಕೇವಲ 1 ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಕ್ರೋಲ್ ವರದಿ ಮಾಡಿದೆ.

162 ಆಕ್ಸಿಜನ್ ಪ್ಲಾಂಟ್‌ಗಳ ಟೆಂಡರ್ 20 ಅಕ್ಟೋಬರ್ 2020 ರಂದು ಜೀವ ಪಡೆಯಿತು. ಅಂದರೆ ಕೊರನಾ ಕಾಣಿಸಿಕೊಂಡ ನಂತರ 8 ತಿಂಗಳು ತಡವಾಗಿತ್ತು. ಅದಾಗಿ ಆರು ತಿಂಗಳ ನಂತರ ದಿ ಸ್ಕ್ರೋಲ್ ವರದಿಗಾರರು ಈ ಬಗ್ಗೆ ಅಧ್ಯಯನ ನಡೆಸಿ, ದೇಶದ 60 ಆಸ್ಪತ್ರೆಗಳಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿ ಕೇವಲ 13 ಆಕ್ಸಿಜನ್ ಪ್ಲಾಂಟ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕೇವಲ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಪ್ರಕಟಿಸಿತು. ಆಗ ಎಚ್ಚೆತ್ತುಕೊಂಡು ಆರೋಗ್ಯ ಸಚಿವಾಲಯ ಸರಣಿ ಟ್ವೀಟ್‌ಗಳನ್ನು ಮಾಡಿ “162 ಪಿಎಸ್ಎ ಆಕ್ಸಿಜನ್ ಸ್ಥಾವರಗಳಲ್ಲಿ 33 ಅನ್ನು ಸ್ಥಾಪಿಸಲಾಗಿದೆ. 2021 ರ ಏಪ್ರಿಲ್ ಅಂತ್ಯದ ವೇಳೆಗೆ 59 ಸ್ಥಾಪಿಸಲಾಗುವುದು ಮತ್ತು 2021 ರ ಮೇ ಅಂತ್ಯದ ವೇಳೆಗೆ 80 ಸ್ಥಾಪಿಸಲಾಗುವುದು” ಎಂದು ತಿಳಿಸಿದೆ. ಅಂದರೆ ವರ್ಷವಾದರೂ ಘೋಷಿಸಿರುವುದರಲ್ಲಿ ಅರ್ಧದಷ್ಟನ್ನು ಸ್ಥಾಪಿಸಿಲ್ಲ ಎಂದು ಅದು ಒಪ್ಪಿಕೊಂಡಿದೆ. ಇನ್ನು ಸ್ಥಾಪಿಸಿರುವುದರಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಅದು ಖಚಿತಪಡಿಸಿಲ್ಲ.

ಇನ್ನು ದೆಹಲಿ ಸರ್ಕಾರ ಸೈಟ್ ಸಿದ್ಧತೆ ಮಾಡಿಕೊಂಡಿರಲಿಲ್ಲ ಎನ್ನುವುದು ದಾರಿ ತಪ್ಪಿಸುವ ವಿಷಯವೇ ಆಗಿದೆ. ‘ದೆಹಲಿ ಸರ್ಕಾರಿ ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಇತ್ತೀಚಿನ ದಾಖಲೆಗಳ ಪ್ರಕಾರ, ಐದು ಆಸ್ಪತ್ರೆಗಳಿಂದ ಸೈಟ್ ಸಿದ್ಧತೆ ಪ್ರಮಾಣಪತ್ರಗಳನ್ನು ನೀಡಲಾಗಿದೆ’” ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಕೇವಲ 45 ದಿನಗಳಲ್ಲಿ ಸ್ಥಾಪಿಸಬಹುದಾದ ಈ ಆಕ್ಸಿಜನ್ ಪ್ಲಾಂಟ್‌ಗಳನ್ನು ವರ್ಷ ಕಳೆದರೂ ಏಕೆ ಸ್ಥಾಪಿಸಿಲ್ಲ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಿಲ್ಲ. 2020 ರ ಡಿಸೆಂಬರ್ ವೇಳೆಗೆ ಸ್ಥಾವರಗಳನ್ನು ಸ್ಥಾಪಿಸಬೇಕಿತ್ತು ಮತ್ತು “ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಬೇಕು” ಎಂದು ಸರ್ಕಾರ ಟೆಂಡರ್‌ನಲ್ಲಿ ಹೇಳಿತ್ತು.

ಒಬ್ಬ ಗುತ್ತಿಗೆದಾರನಿಗೆ 140 ಪ್ಲಾಂಟ್‌ಗಳಿಗೆ ಗುತ್ತಿಗೆ ನೀಡಲಾಗಿದೆ ಎಂದು ದೆಹಲಿ ಸರ್ಕಾರ ಕೋರ್ಟಿನಲ್ಲಿ ಹೇಳಿದೆ. ಆತ ಆ ಕೆಲಸವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಲಾಗಿದೆ.

‘ಆಮ್ಲಜನಕ ಘಟಕವನ್ನು ಕೇಂದ್ರದ ಅಧೀನದಲ್ಲಿರುವ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಹ ಕಾರ್ಯಗತಗೊಳಿಸಲಾಗಿಲ್ಲ ಎಂಬ ಅಂಶವು ಕೇಂದ್ರವು ತನ್ನದೇ ಆದ ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ತೋರಿಸುತ್ತದೆ” ಎಂದು ದೆಹಲಿ ಸರ್ಕಾರ ಹೇಳಿದೆ.

ಸಾರಾಂಶ

ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಲ್ಲಿ 162 ಆಮ್ಲಜನಕ ಸ್ಥಾವರ ಸ್ಥಾಪನೆ ಕುರಿತು ಮಾರ್ಚ್‌ನಲ್ಲಿ ಘೋಷಿಸಿತ್ತು. ನಂತರ ಅಕ್ಟೋಬರ್ 2020ರಲ್ಲಿ ಟೆಂಡರ್ ಕರೆದಿತ್ತು. ಇದಕ್ಕಾಗಿ ಮೀಸಲಿಟ್ಟ ಹಣವನ್ನು ಅದು ಯಾವುದೇ ರಾಜ್ಯ ಸರ್ಕಾರಕ್ಕೂ ಹಂಚಿಲ್ಲ. ಇದನ್ನು ಕೇಂದ್ರ ಆರೋಗ್ಯ ಸಚಿವಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಯೆಟ್‌ನಲ್ಲಿ ಒಪ್ಪಿಕೊಂಡಿದೆ.

ಇದರಿಂದ ಕಂಗನಾ, ಬಿ.ಎಲ್ ಸಂತೋಷ್ ಮತ್ತು ಸಾವಿರಾರು ಮೋದಿ ಅನುಯಾಯಿಗಳು ಈ ಬಿಕ್ಕಟ್ಟಿನ ಸಂದರ್ಭದಲ್ಲೂ ದಾರಿ ತಪ್ಪಿಸುವ ಮಾಹಿತಿ ನೀಡಿ ರಾಜಕೀಯ ಮಾಡುತ್ತಿರುವುದು ಸ್ಪಷ್ಟವಾಗಿದೆ.

(ಆಧಾರ: ದಿ ಸ್ಕ್ರೋಲ್, ದಿ ಕ್ವಿಂಟ್ ಮತ್ತು ಇತರ ಫ್ಯಾಕ್ಟ್‌ಚೆಕ್ ಪೋರ್ಟಲ್‌ಗಳು)


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...