Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರ ಆಕ್ಸಿಜನ್ ಪ್ಲಾಂಟ್ ಹಾಕದೆ ಹಣ ಪೋಲು ಮಾಡಿದ್ದಾರೆ ಎಂಬ ಕಂಗನಾ ರಣಾವತ್, ಬಿ.ಎಲ್ ಸಂತೋಷ್‌ರವರ ಆರೋಪ ಸುಳ್ಳಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಹಣ ನೀಡಿದರೂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ 8 ಆಕ್ಸಿಜನ್ ಪ್ಲಾಂಟ್‌ಗಳನ್ನು, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 10 ಪ್ಲಾಂಟ್‌ಗಳನ್ನು ನಿರ್ಮಿಸಿಲ್ಲ. ಹಣವೆಲ್ಲಾ ನುಂಗಿ ನೀರು ಕುಡಿದಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಸೇರಿದಂತೆ ಬಿಜೆಪಿಯ ಹಲವು ಸಚಿವರು, ನಾಯಕರು ಮತ್ತು ಅನುಯಾಯಿಗಳು ಆರೋಪಿಸಿದ್ದಾರೆ.

ಅವರು ಆಮ್ಲಜನಕ ಘಟಕಗಳ ಸ್ಥಾಪನೆ ಕುರಿತಂತೆ ದಾರಿ ತಪ್ಪಿಸುವ ಗ್ರಾಫಿಕ್ ಹಂಚಿಕೊಂಡಿದ್ದಾರೆ. ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಪಿಎಂ-ಕೇರ್ಸ್‌ ನಿಧಿ ಅಡಿ ಹಂಚಿಕೆ ಮಾಡಿದ ಹಣ ಎಲ್ಲಿದೆ? ದೆಹಲಿಗೆ ಎಂಟು ಸ್ಥಾವರಗಳಿಗೆ ಹಣ ನೀಡಿದ್ದು ಒಂದನ್ನು ಮಾತ್ರ ಸ್ಥಾಪಿಸಿದೆ. ಮಹಾರಾಷ್ಟ್ರದಲ್ಲಿ ಕೂಡ ಒಂದು ಆಮ್ಲಜನಕ ಸ್ಥಾವರವನ್ನು ಮಾತ್ರ ಸ್ಥಾಪಿಸಲಾಗಿದೆ. ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸುಮ್ಮನೇ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯನ್ನು ದೂರುತ್ತಿವೆ……. ಎಂಬುದು ಅವರ ಪ್ರಶ್ನೆಯ ಸಾರಾಂಶ.

ಫ್ಯಾಕ್ಟ್: ರಾಜ್ಯಗಳಿಗೆ ನಯಾಪೈಸೆ ನೀಡಿಲ್ಲ!

ಈ ಮೇಲಿನ ಆರೋಪಗಳು ಸಂಪೂರ್ಣ ಸುಳ್ಳಾಗಿವೆ. ಏಕೆಂದರೆ ಆಮ್ಲಜನಕ ಘಟಕಗಳ ಸ್ಥಾಪನೆಗೆ ಪಿಎಂ ಕೇರ್ಸ್‌ನಿಂದ ಕೇಂದ್ರ ಸರ್ಕಾರ ಹಣ ನೀಡಿಲ್ಲ. ಬದಲಿಗೆ ದೇಶಾದ್ಯಂತ 162 ಆಮ್ಲಜನಕ ಘಟಕಗಳ ಸ್ಥಾಪನೆಯ ಹೊಣೆ ಹೊತ್ತಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಆರೋಗ್ಯ ಸೇವೆಗಳ ಸೊಸೈಟಿ. ಹೀಗಾಗಿ ಇದು ಕೇಂದ್ರ ಸರ್ಕಾರ ಮತ್ತು ಮೋದಿಯವರ ವೈಫಲ್ಯವೇ ಹೊರತು, ದೆಹಲಿ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ವೈಫಲ್ಯ ಅಲ್ಲವೇ ಅಲ್ಲ.

ಜನವರಿ 5 ರ ಕೇಂದ್ರ ಸರ್ಕಾರದ ಪತ್ರಿಕಾ ಪ್ರಕಟಣೆಯಲ್ಲಿ, ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ 162 ಪಿಎಸ್‌ಎ (ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್) ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪಿಎಂ ಕೇರ್ಸ್ ಫಂಡ್ ಟ್ರಸ್ಟ್ 201.58 ಕೋಟಿ ರೂ. ಮೀಸಲಿರಿಸಿದೆ ಎಂದು ಹೇಳಲಾಗಿದೆ. ಈ ಸ್ಥಾವರಗಳನ್ನು ಸ್ಥಾಪಿಸಬೇಕಾದ ಸರ್ಕಾರಿ ಆಸ್ಪತ್ರೆಗಳನ್ನು ಸಂಬಂಧಪಟ್ಟ ರಾಜ್ಯಗಳೊಂದಿಗೆ ಸಮಾಲೋಚಿಸಿ ಗುರುತಿಸಲಾಗಿದೆ ಎಂದು ಕೇಂದ್ರ ಹೇಳಿತ್ತು.

ಸ್ಥಾವರಗಳ ಸ್ಥಾಪನೆಯನ್ನು ಕೇಂದ್ರದ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಸಿಎಂಎಸ್‌ಎಸ್ ಮಾಡಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಬಿಡ್ ಕರೆದು ಕಂಪನಿಗಳನ್ನು ಗುರುತಿಸಿ ಹಣ ಪೂರೈಕೆ ಮಾಡುವುದು ಅದರ ಜವಾಬ್ದಾರಿ. ದೆಹಲಿ ಸೇರಿದಂತೆ ಇತರ ರಾಜ್ಯಗಳ ಜವಾಬ್ದಾರಿ ಕೇವಲ ಆಸ್ಪತ್ರೆಗಳಲ್ಲಿ ವಿದ್ಯುತ್ ಮತ್ತು ಸಿವಿಲ್ ಸೌಲಭ್ಯಗಳನ್ನು ಒದಗಿಸುವುದಾಗಿದೆ. ಹಾಗಾಗಿ ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಪಿಎಂ ಕೇರ್ಸ್ ಹಣ ಹೋಗುವ ಸಾಧ್ಯತೆಯೇ ಇಲ್ಲ. ಇನ್ನು ಇದೇ ಯೋಜನೆಯಡಿಯಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೂ 14 ಪ್ಲಾಂಟ್‌ಗಳನ್ನು ನೀಡಲಾಗಿದ್ದು ಅದರಲ್ಲಿ ಕೇವಲ 1 ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಕ್ರೋಲ್ ವರದಿ ಮಾಡಿದೆ.

162 ಆಕ್ಸಿಜನ್ ಪ್ಲಾಂಟ್‌ಗಳ ಟೆಂಡರ್ 20 ಅಕ್ಟೋಬರ್ 2020 ರಂದು ಜೀವ ಪಡೆಯಿತು. ಅಂದರೆ ಕೊರನಾ ಕಾಣಿಸಿಕೊಂಡ ನಂತರ 8 ತಿಂಗಳು ತಡವಾಗಿತ್ತು. ಅದಾಗಿ ಆರು ತಿಂಗಳ ನಂತರ ದಿ ಸ್ಕ್ರೋಲ್ ವರದಿಗಾರರು ಈ ಬಗ್ಗೆ ಅಧ್ಯಯನ ನಡೆಸಿ, ದೇಶದ 60 ಆಸ್ಪತ್ರೆಗಳಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿ ಕೇವಲ 13 ಆಕ್ಸಿಜನ್ ಪ್ಲಾಂಟ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕೇವಲ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಪ್ರಕಟಿಸಿತು. ಆಗ ಎಚ್ಚೆತ್ತುಕೊಂಡು ಆರೋಗ್ಯ ಸಚಿವಾಲಯ ಸರಣಿ ಟ್ವೀಟ್‌ಗಳನ್ನು ಮಾಡಿ “162 ಪಿಎಸ್ಎ ಆಕ್ಸಿಜನ್ ಸ್ಥಾವರಗಳಲ್ಲಿ 33 ಅನ್ನು ಸ್ಥಾಪಿಸಲಾಗಿದೆ. 2021 ರ ಏಪ್ರಿಲ್ ಅಂತ್ಯದ ವೇಳೆಗೆ 59 ಸ್ಥಾಪಿಸಲಾಗುವುದು ಮತ್ತು 2021 ರ ಮೇ ಅಂತ್ಯದ ವೇಳೆಗೆ 80 ಸ್ಥಾಪಿಸಲಾಗುವುದು” ಎಂದು ತಿಳಿಸಿದೆ. ಅಂದರೆ ವರ್ಷವಾದರೂ ಘೋಷಿಸಿರುವುದರಲ್ಲಿ ಅರ್ಧದಷ್ಟನ್ನು ಸ್ಥಾಪಿಸಿಲ್ಲ ಎಂದು ಅದು ಒಪ್ಪಿಕೊಂಡಿದೆ. ಇನ್ನು ಸ್ಥಾಪಿಸಿರುವುದರಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಅದು ಖಚಿತಪಡಿಸಿಲ್ಲ.

ಇನ್ನು ದೆಹಲಿ ಸರ್ಕಾರ ಸೈಟ್ ಸಿದ್ಧತೆ ಮಾಡಿಕೊಂಡಿರಲಿಲ್ಲ ಎನ್ನುವುದು ದಾರಿ ತಪ್ಪಿಸುವ ವಿಷಯವೇ ಆಗಿದೆ. ‘ದೆಹಲಿ ಸರ್ಕಾರಿ ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಇತ್ತೀಚಿನ ದಾಖಲೆಗಳ ಪ್ರಕಾರ, ಐದು ಆಸ್ಪತ್ರೆಗಳಿಂದ ಸೈಟ್ ಸಿದ್ಧತೆ ಪ್ರಮಾಣಪತ್ರಗಳನ್ನು ನೀಡಲಾಗಿದೆ’” ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ತಿಳಿಸಿದೆ.

ಕೇವಲ 45 ದಿನಗಳಲ್ಲಿ ಸ್ಥಾಪಿಸಬಹುದಾದ ಈ ಆಕ್ಸಿಜನ್ ಪ್ಲಾಂಟ್‌ಗಳನ್ನು ವರ್ಷ ಕಳೆದರೂ ಏಕೆ ಸ್ಥಾಪಿಸಿಲ್ಲ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಿಲ್ಲ. 2020 ರ ಡಿಸೆಂಬರ್ ವೇಳೆಗೆ ಸ್ಥಾವರಗಳನ್ನು ಸ್ಥಾಪಿಸಬೇಕಿತ್ತು ಮತ್ತು “ರಾಜ್ಯ ಸರ್ಕಾರಗಳಿಗೆ ಹಸ್ತಾಂತರಿಸಬೇಕು” ಎಂದು ಸರ್ಕಾರ ಟೆಂಡರ್‌ನಲ್ಲಿ ಹೇಳಿತ್ತು.

ಒಬ್ಬ ಗುತ್ತಿಗೆದಾರನಿಗೆ 140 ಪ್ಲಾಂಟ್‌ಗಳಿಗೆ ಗುತ್ತಿಗೆ ನೀಡಲಾಗಿದೆ ಎಂದು ದೆಹಲಿ ಸರ್ಕಾರ ಕೋರ್ಟಿನಲ್ಲಿ ಹೇಳಿದೆ. ಆತ ಆ ಕೆಲಸವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಆರೋಪಿಸಲಾಗಿದೆ.

‘ಆಮ್ಲಜನಕ ಘಟಕವನ್ನು ಕೇಂದ್ರದ ಅಧೀನದಲ್ಲಿರುವ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಹ ಕಾರ್ಯಗತಗೊಳಿಸಲಾಗಿಲ್ಲ ಎಂಬ ಅಂಶವು ಕೇಂದ್ರವು ತನ್ನದೇ ಆದ ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ತೋರಿಸುತ್ತದೆ” ಎಂದು ದೆಹಲಿ ಸರ್ಕಾರ ಹೇಳಿದೆ.

ಸಾರಾಂಶ

ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಲ್ಲಿ 162 ಆಮ್ಲಜನಕ ಸ್ಥಾವರ ಸ್ಥಾಪನೆ ಕುರಿತು ಮಾರ್ಚ್‌ನಲ್ಲಿ ಘೋಷಿಸಿತ್ತು. ನಂತರ ಅಕ್ಟೋಬರ್ 2020ರಲ್ಲಿ ಟೆಂಡರ್ ಕರೆದಿತ್ತು. ಇದಕ್ಕಾಗಿ ಮೀಸಲಿಟ್ಟ ಹಣವನ್ನು ಅದು ಯಾವುದೇ ರಾಜ್ಯ ಸರ್ಕಾರಕ್ಕೂ ಹಂಚಿಲ್ಲ. ಇದನ್ನು ಕೇಂದ್ರ ಆರೋಗ್ಯ ಸಚಿವಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಯೆಟ್‌ನಲ್ಲಿ ಒಪ್ಪಿಕೊಂಡಿದೆ.

ಇದರಿಂದ ಕಂಗನಾ, ಬಿ.ಎಲ್ ಸಂತೋಷ್ ಮತ್ತು ಸಾವಿರಾರು ಮೋದಿ ಅನುಯಾಯಿಗಳು ಈ ಬಿಕ್ಕಟ್ಟಿನ ಸಂದರ್ಭದಲ್ಲೂ ದಾರಿ ತಪ್ಪಿಸುವ ಮಾಹಿತಿ ನೀಡಿ ರಾಜಕೀಯ ಮಾಡುತ್ತಿರುವುದು ಸ್ಪಷ್ಟವಾಗಿದೆ.

(ಆಧಾರ: ದಿ ಸ್ಕ್ರೋಲ್, ದಿ ಕ್ವಿಂಟ್ ಮತ್ತು ಇತರ ಫ್ಯಾಕ್ಟ್‌ಚೆಕ್ ಪೋರ್ಟಲ್‌ಗಳು)


ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...