Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

- Advertisement -
- Advertisement -

ತ್ರಿಪುರ ಹಿಂಸಾಚಾರದ ವೇಳೆ ಮುಸ್ಲಿಮರಿಗೆ ಜಿಹಾದ್‌ಗೆ ಕರೆ ನೀಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊವೊಂದನ್ನು ಹಂಚಿಕೊಳ್ಳಲಾಗಿದೆ. ಭಾರತೀಯ ಮುಸ್ಲಿಮರ ವಿರುದ್ಧ ಅಪಪ್ರಚಾರ ಮಾಡುವಂತೆ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ವಿಡಿಯೊ ಎಲ್ಲಿನದ್ದು?

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಫೆಬ್ರವರಿ 2020ರಲ್ಲಿ ಟರ್ಕಿಶ್ ಸೇನೆಯ ವಿರುದ್ಧ ಜಿಹಾದ್ ಘೋಷಿಸುವ ಇಡ್ಲಿಬ್‌ನಲ್ಲಿರುವ ಮಸೀದಿಗಳ ಹಳೆಯ ದೃಶ್ಯಗಳನ್ನು ತೋರಿಸುತ್ತದೆ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ಹಳೆಯದಾಗಿದೆ ಮತ್ತು ತ್ರಿಪುರಾದಲ್ಲಿ ಇತ್ತೀಚಿನ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಆಧಾರ

ವಿಡಿಯೊದ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಸರ್ಚ್ ಮಾಡಿದಾಗ, ಇದೇ ರೀತಿಯ ವಿಡಿಯೊವನ್ನು ಯೂಟ್ಯೂಬ್ ಬಳಕೆದಾರರು 07 ಫೆಬ್ರವರಿ 2020ರಂದು ಪೋಸ್ಟ್ ಮಾಡಿರುವುದು ಕಂಡುಬಂದಿದೆ. ಈ ಯೂಟ್ಯೂಬ್ ಚಾನೆಲ್ ಇದನ್ನು ಇಡ್ಲಿಬ್‌ನಲ್ಲಿರುವ ಮಸೀದಿಯು ಜಿಹಾದ್‌‌ಗೆ (ಪವಿತ್ರ ಯುದ್ಧಕ್ಕೆ) ಕರೆ ನೀಡುತ್ತಿರುವುದು ಎಂದು ವರದಿ ಮಾಡಿದೆ.

ಈ ಕೀವರ್ಡ್‌ಗಳನ್ನು ಬಳಸಿಕೊಂಡು ವಿಶ್ವಾಸಾರ್ಹ ಮೂಲಗಳನ್ನು ಹುಡುಕಿದಾಗ, 07 ಫೆಬ್ರವರಿ 2020ರಂದು ಟರ್ಕಿಶ್ ಸುದ್ದಿ ವೆಬ್‌ಸೈಟ್ ‘ಯೆನಿಯಾಕಿಟ್’ ಪ್ರಕಟಿಸಿದ ಲೇಖನದಲ್ಲಿ ಇದೇ ರೀತಿಯ ವೀಡಿಯೊ ಕಂಡುಬಂದಿದೆ. ಈ ಲೇಖನವನ್ನು “ಮಸೀದಿಗಳಿಂದ ಸಿರಿಯನ್ನರಿಗೆ ಕರೆ: ಜಿಹಾದ್‌ಗೆ ನಾವು ಹೋಗೋಣ, ಯುವಜನರೇ, ಜಿಹಾದ್‌ಗೆ” ಎಂಬ ಶೀರ್ಷಿಕೆಯೊಂದಿಗೆ ಪ್ರಕಟಿಸಲಾಗಿದೆ.

ಹಸನ್ ಸಿವ್ರಿ ಎಂಬ ಪತ್ರಕರ್ತ 07 ಫೆಬ್ರವರಿ 2020ರಂದು ಅದೇ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ವೀಡಿಯೊವನ್ನು ಹಂಚಿಕೊಂಡ ಹಸನ್ ಸಿವ್ರಿ, ಇಡ್ಲಿಬ್‌ನಲ್ಲಿನ ವಿರೋಧಿಬಣದ ನಿಯಂತ್ರಣದಲ್ಲಿರುವ ಮಸೀದಿಗಳು, ಇಡ್ಲಿಬ್‌ನ ಕಡೆಗೆ ಸಾಗುತ್ತಿರುವ ಟರ್ಕಿಶ್ ಸೇನಾ ಬೆಂಗಾವಲಿನ ವಿರುದ್ಧ ಹೋರಾಡಲು ಜಿಹಾದ್‌ಗಾಗಿ ಜನರಿಗೆ ಕರೆ ನೀಡಿವೆ ಎಂದು ವರದಿ ಮಾಡಿದ್ದಾರೆ. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊ ಹಳೆಯದು ಮತ್ತು ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿಲ್ಲ ಎಂದು ತೀರ್ಮಾನಿಸಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತದ ಘಟನೆಗೆ ಸಂಬಂಧವಿಲ್ಲದ ಸಿರಿಯಾದ ಹಳೆಯ ವೀಡಿಯೊವನ್ನು, “ತ್ರಿಪುರಾದಲ್ಲಿ ಮುಸ್ಲಿಮರ ವಿರುದ್ಧದ ಹಿಂಸಾಚಾರದಲ್ಲಿ ಹೋರಾಡಲು ಜಿಹಾದ್‌ಗೆ ಕರೆ ನೀಡುವ ಮಸೀದಿಯ ದೃಶ್ಯಗಳು” ಎಂದು ಹಂಚಿಕೊಳ್ಳಲಾಗಿದೆ. ಇದು ಮುಸ್ಲಿಮರ ವಿರುದ್ಧ ಕೋಮು ಭಾವನೆಗಳನ್ನು ಪ್ರಚೋದಿಸಲೆಂದೇ ಮಾಡಿದ ದೃಷ್ಕೃತವೆಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...