Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

- Advertisement -
- Advertisement -

ಒಂದು ತಿಂಗಳೊಳಗೆ 12,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೆಸರು ಇರುವ ಟ್ವಿಟರ್ ಖಾತೆ ಜೂನ್ 20 ರಂದು ಟ್ವೀಟ್ ಮಾಡಿ, ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕಲು ನಿರ್ಧರಿಸಿದ್ದಾರೆ ಎಂದು ಬರೆದಿದೆ.

ಈ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಟ್ವೀಟ್ 10,000 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಮತ್ತು 50,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಕೇವಲ ಅದೊಂದೆ ಅಲ್ಲದೆ ಮುಕೇಶ್ ಅಂಬಾನಿ ಹೆಸರಿನ ಹಲವಾರು ಟ್ವಿಟ್ಟರ್‌ ಅಕೌಂಟ್‌ಗಳು ”ನಾನು ಜಿಯೊ ಸಿಮ್‌ ಕಾರ್ಡ್‌ನಿಂದ ಶಾರುಖ್ ಖಾನ್‌ನನ್ನು ತೆಗೆದು ಹಾಕುತ್ತಿದ್ದೇನೆ, ನಿಮ್ಮ ಅಭಿಪ್ರಾಯವೇನು?” ಎಂದು ಅದೇ ಪೋಸ್ಟನ್ನು ಬರೆದಿದೆ.

ಫ್ಯಾಕ್ಟ್ ಚೆಕ್

ಮೊದಲನೆಯದಾಗಿ ಮುಖೇಶ್ ಅಂಬಾನಿ ಅವರ ಹಸರಿರುವ ಈ ಖಾತೆಯನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಯಾಕೆಂದರೆ ಈ ಹ್ಯಾಂಡಲ್‌ನಲ್ಲಿ ‘ಬ್ಲೂ ಟಿಕ್’ ಇಲ್ಲ.

ಎರಡನೆಯದಾಗಿ, ಹ್ಯಾಂಡಲ್ ತನ್ನನ್ನು ‘ರಿಯಲ್‌ಮುಕೇಶಂಬನ್’ (Realmukeshamban) ಎಂದು ಉಲ್ಲೇಖಿಸಿದೆ, ಇದರಲ್ಲಿ ‘ಅಂಬಾನಿ’ ಎಂಬೂದನ್ನು ತಪ್ಪಾಗಿ ಬರೆಯಲಾಗಿದೆ.

ಇದಲ್ಲದೆ, ಈ ಖಾತೆಯ ಟ್ವೀಟ್‌ಗಳನ್ನು ಗಾಯಕ ಸೋನು ನಿಗಮ್ ಮತ್ತು ನಟಿ ಕಂಗನಾ ರಾಣಾವತ್ ಅವರ ಹೆಸರಿರುವ ನಕಲಿ ಖಾತೆಗಳು ರಿಟ್ವೀಟ್ ಮಾಡುತ್ತಿರುವುದನ್ನು ಗಮನಿಸಬಹುದಾಗಿದೆ

ಕಂಗನಾ ರನೌತ್ ಅವರ ನಕಲಿ ಖಾತೆ ಅಂಬಾನಿಯನ್ನು ಜಿಯೋ ಜಾಹೀರಾತಿನಿಂದ ಶಾರುಖ್ ಖಾನ್ ಅವರನ್ನು ತೆಗೆದುಹಾಕುವಂತೆ ಕೇಳಿಕೊಂಡಿತ್ತು.

ಈ ಎರಡೂ ಖಾತೆಗಳು ಶಾರುಖ್ ಖಾನ್ ಅವರನ್ನು ಜಿಯೋ ಜಾಹೀರಾತಿನಿಂದ ತೆಗೆದುಹಾಕುವಂತೆ ಅಂಬಾನಿಯನ್ನು ಒತ್ತಾಯಿಸಿದ್ದವು.

ಅಲ್ಲದೆ ಶಾರುಖ್ ಖಾನ್ ಅವರನ್ನು ತೆಗೆದು ಹಾಕಲಾಗಿದೆ ಎಂದು ಬರೆದಿರುವ ಖಾತೆಯ ಬಯೋದಲ್ಲಿ “ಈ ಖಾತೆಯು ಮುಖೇಶ್ ಅಂಬಾನಿ ಅವರ ಮೀಡಿಯಾ ಪ್ಯಾನೆಲ್ ತಂಡ ನಿರ್ವಹಿಸುತ್ತಿದೆ.” ಎಂದು ಬರೆದಿದೆ.

ಖಾತೆಯ ಸ್ಥಳ ನವದೆಹಲಿ ಎಂದು ಉಲ್ಲೇಖಿಸಿದೆ ಆದರೆ ಅಂಬಾನಿ ಮುಂಬೈನಲ್ಲಿ ವಾಸಿಸುತ್ತಿದ್ದಾರೆ.

ಒಟ್ಟಿನಲ್ಲಿ ತಿಳಿದು ಬರುವುದೇನೆಂದರೆ ಪ್ರಸ್ತುತ ಟ್ವಿಟ್ಟರ್ ಖಾತೆ ಹಾಗೂ ಟ್ವೀಟ್ ನಕಲಿಯಾಗಿದ್ದು, ಅಂಬಾನಿ ಅಥವಾ ಅವರ ಕುಟುಂಬದ ಸದಸ್ಯರು ಅಧಿಕೃತ ಟ್ವಿಟರ್ ಖಾತೆಗಳನ್ನು ಹೊಂದಿಲ್ಲ ಎಂದು ”ದಿ ಕ್ವಿಂಟ್ಗೆ” ವರದಿ ಮಾಡಿದೆ.


ಓದಿ: ವಿಶ್ವದ 9ನೇ ಶ್ರೀಮಂತ ವ್ಯಕ್ತಿಯಾಗಿ ಮುಖೇಶ್ ಅಂಬಾನಿ; ಅವರು ಈ ಸ್ಥಾನಕ್ಕೆ ಬಂದಿದ್ದು ಹೇಗೆ ಗೊತ್ತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...