Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

- Advertisement -
- Advertisement -

ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ ಬೇಡಿಕೆಯಿಡುವುದನ್ನು ಕೇಳಬಹುದಾಗಿದೆ.

ಇದನ್ನು ನ್ಯೂಸ್18 ಕನ್ನಡ ವರದಿ ಮಾಡಿದ್ದು, “ನಾನು ಸರ್ಕಾರಿ ಉದ್ಯೋಗಿಯಾಗಿದ್ದರಿಂದ ನನ್ನ ಡಿಮ್ಯಾಂಡ್ ಗಳು ಇವತ್ತೇ ಈಡೇರಬೇಕೆಂದು ವರ ಹೇಳಿದ್ದಾನೆ. ಇಲ್ಲವಾದ್ರೆ ನಾವು ವಾಪಸ್ ಹೋಗುತ್ತೇವೆ. ವರದಕ್ಷಿಣೆ ನೀಡಲು ಆಗದಿದ್ರೆ, ನಿಮ್ಮ ಯೋಗ್ಯತೆಗೆ ಹೊಂದುವ ಜನರ ಜೊತೆ ಸಂಬಂಧ ಬೆಳೆಸಬೇಕು ಎಂದು ಸೊಕ್ಕಿನ ಮಾತುಗಳನ್ನು ಆಡಿದ್ದಾನೆ” ತನ್ನ ವೆಬ್‌ಸೈಟ್‌ನಲ್ಲಿ ವರದಿ ಮಾಡಿದೆ.

ನ್ಯೂಸ್ 18 ಕನ್ನಡದ ಟ್ವಿಟರ್ ಮತ್ತು ಲೇಖನದ ಆರ್ಕೈವ್ ಲಿಂಕ್‌ಅನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವಿಡಿಯೊದಲ್ಲಿ ಮಾತನಾಡಿರುವ ವರನೂ, “ನನಗೆ ಇದುವರೆಗೂ ಕ್ಯಾಶ್ ಸಿಕ್ಕಿಲ್ಲ. ಮಾತುಕತೆಯಂತೆ ತೀರ್ಮಾನಿಸಿದ್ದ ಯಾವ ವಸ್ತುಗಳು ಇನ್ನು ನಮಗೆ ಸೇರಿಲ್ಲ. ಒಂದು ಚೈನ್ ಸಹ ಕೊಡ್ತೀವಿ ಅಂತ ಹೇಳಿದ್ದರು. ಅದನ್ನು ಸಹ ಕೊಟ್ಟಿಲ್ಲ. ಕೊಟ್ಟ ಮಾತನ್ನು ತಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ವಿಡಿಯೋ ಮಾಡುತ್ತಿರುವ ವ್ಯಕ್ತಿ, “ನೀವೆಲ್ಲ ಓದಿದವರು. ಹೀಗೆ ಬಹಿರಂಗವಾಗಿ ವರದಕ್ಷಿಣೆ ಕೇಳೋದು ಎಷ್ಟು ಸರಿ” ಎಂದು ಪ್ರಶ್ನೆ ಮಾಡುತ್ತಾರೆ. ಆದರೆ ವರ ಮಾತ್ರ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳುತ್ತಾನೆ. ಅದಕ್ಕೆ, ನಿಮಗೆ ಹಣ ಬೇಕಿದ್ರೆ ಇಲ್ಲಿಗೆ ಯಾಕೆ ಬರಬೇಕಿತ್ತು ಎಂದು ವ್ಯಕ್ತಿ ಪ್ರಶ್ನೆ ಮಾಡುತ್ತಾರೆ. ಈ ವೇಳೆ ವರನೂ ಫೋನ್‌ ಮಾಡಿದಾಗ ಎಲ್ಲವೂ ರೆಡಿ ಇದೆ ಬನ್ನಿ ಅಂತ  ಹೇಳಿದ್ದಾರೆ. ಆದ್ರೆ ಈಗ ಇಲ್ಲ ಅಂತ ಹೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮನವೊಲಿಸಲು ಮುಂದಾದ ವಧು

ಈ ವೇಳೆ ಪಕ್ಕದಲ್ಲಿ ನಿಂತಿದ್ದ ವಧು, ನಿಮಗೆ ಒಂದು ಲಕ್ಷ ನಗದು ಮತ್ತು ಚಿನ್ನ ಸಹ ಸಿಗುತ್ತೆ ಎಂದು ಮನವೊಲಿಸಲು ಪ್ರಯತ್ನ ಮಾಡೋದನ್ನು ಕಾಣಬಹುದು. ಕೊನೆಗೆ ವರ ನಾನು ನಮ್ಮ ತಂದೆ ಜೊತೆ ಮಾತನಾಡಬೇಕು ಎಂದು ವೇದಿಕೆಯಿಂದ ಕೆಳಗೆ ಇಳಿಯುತ್ತಾನೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಕೂಡ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಸುದ್ದಿಯನ್ನು ಹಲವು ಮುಖ್ಯವಾಹಿನಿಯ ಮಾಧ್ಯಮಗಳೂ ಕೂಡ ವೀಡಿಯೊ ಬಗ್ಗೆ ವರದಿಗಳನ್ನು ಪ್ರಕಟಿಸಿವೆ.

ತಾನು ಕೇಳಿದ್ದಕಿಂತ ಕಡಿಮೆ ವರದಕ್ಷಿಣೆ ನೀಡಿದ ಕಾರಣಕ್ಕೆ ವರನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಪ್ರತಿಪಾದಿಸಿ The Indian ExpressZee NewsNDTVDNA IndiaTimes of IndiaLokmatIndia.comIBC 24News18 Kannada ಕೂಡ ವೀಡಿಯೊ ಬಗ್ಗೆ ವರದಿ ಮಾಡಿವೆ.

 

 

ಅಂತರಾಷ್ಟ್ರೀಯ ಮಹಿಳಾ ದಿನದ ದಿನದಂದು The Times of India ಕೂಡ ವರದಿಯನ್ನು ಮಾಡಿದ್ದು, “ನೀವು ಅವರಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೀರಾ” ಎಂಬ ಪ್ರಶ್ನೆಯನ್ನು ಹಾಕಿದೆ. “ತನ್ನ ಮದುವೆಗಾಗಿ ಅಲಂಕೃತಗೊಂಡ ವರನ ಪಕ್ಕದಲ್ಲಿ ಕುಳಿತು ಹಸನ್ಮುಖಿಯಾಗಿ ಕಂಗೊಳಿಸಬೇಕಿದ್ದ ಅವಳು, ವರದಕ್ಷಿಣೆಯ ಸಾಧನವಾಗಿದ್ದಾಳೆ. ಹಾಗಾಗಿ ಅವನು ಅವಳನ್ನು ತನ್ನ ಹೆಂಡತಿಯಾಗಿ ಸ್ವೀಕರಿಸುತ್ತಾನೆ. ಆತ ತಾನು ಗಂಡು ಎನ್ನುವ ಅಹಂನಿಂದಾಗಿ ದರ್ಪ ತೋರಿಸುತ್ತಿದ್ದಾನೆ. ಇದು 2022 ರಲ್ಲಿ ಭಾರತದ ಕೆಲವು ಮಹಿಳೆಯರ ಸ್ಥಿತಿಯಾಗಿದೆ. ಇದನ್ನು ನೀವು ಸಮ್ಮತಿಸುವಿರಾ?” ಎಂದು ವರದಿ ಮಾಡಿದೆ.

 

ಈ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿರುವ ಕಾರಣ ಮತ್ತುಸುದ್ದಿ ಮಾಧ್ಯಮಗಳು ವರದಿ ಮಾಡಿವೆ, ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ವರದಿಯಲ್ಲಿ ಹೇಳಿಲ್ಲ. ಈ ಹಿನ್ನಲೆಯಲ್ಲಿ ಇದರ ಸತ್ಯಾಸತ್ಯೆಗಳನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಕೀ ವರ್ಡ್ ಸಹಾಯದ ಮೂಲಕ ಸುದ್ದಿಯ ವಿವರಗಳನ್ನು ಸರ್ಚ್ ಮಾಡಲಾಗಿದ್ದು, ಈ ವೀಡಿಯೊವನ್ನು ಫೆಬ್ರವರಿ 25 ರಂದು ‘ದಿವ್ಯ ವಿಕ್ರಮ್‘ ಎಂಬ ಫೇಸ್‌ಬುಕ್ ಪುಟದಿಂದ ಪೋಸ್ಟ್ ಮಾಡಲಾಗಿದೆ ಮತ್ತು 70 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ . ಈ ಫೇಸ್‌ಬುಕ್ ಅಕೌಂಟ್‌ನಿಂದ ಇಂತಹ ಅನೇಕ ವೀಡಿಯೊಗಳನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದೆ.

‘ವಿಕ್ರಮ್ ಮಿಶ್ರಾ’ ಎಂಬ ವ್ಯಕ್ತಿಯು ಈ ವಿಡಿಯೊವನ್ನು ಕ್ರಿಯೇಟ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ನಂತರ ಅವರನ್ನು ಸಂಪರ್ಕಿಸಲಾಗಿದ್ದು, ಅವರು ತಮ್ಮ ತಂಡದೊಂದಿಗೆ ‘ಜೈ ಮಿಥಿಲಾ’ ಎಂಬ ಚಾನಲ್ ಅನ್ನು ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮದುವೆಯ ವಿಡಿಯೋದಲ್ಲಿ ಕಾಣುತ್ತಿರುವ ವಧು ಮತ್ತು ವರ ಇಬ್ಬರೂ ಕಲಾವಿದರು (ನಟರು). ಅವರ ಹೆಸರು ಅಮಿತ್ ಮತ್ತು ರಾಣಿ ಎಂದು ತಿಳಿಸಿದ್ದಾರೆ.

ವಿಕ್ರಮ್ ಮಿಶ್ರಾ ಅವರ ಸಹಾಯದಿಂದ ಅಮಿತ್ ಮತ್ತು ರಾಣಿ ಅವರನ್ನು ಸಂಪರ್ಕಿಸಿದಾಗ, ತಾವು ನಟರಾಗಿದ್ದು, ಅಂತಹ ಅನೇಕ ವೀಡಿಯೊಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದೇವೆ ಎಂದು ದೃಢಪಡಿಸಿದ್ದಾರೆ.

ಈ ವಿಡಿಯೋವನ್ನು ಕೇವಲ ತಮ್ಮ ನಟನೆಯ ಸಾಮರ್ಥ್ಯವನ್ನು ನಿರೂಪಿಸಲು ತಾವೇ ಸ್ವತಃ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಅವರ ವೀಡಿಯೊವನ್ನು ನೈಜ ಘಟನೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ನಿಜವಲ್ಲ. ಅಮಿತ್ ಮತ್ತು ರಾಣಿ ಪರಸ್ಪರ ಮದುವೆಯಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಲ್ಟ್‌ ನ್ಯೂಸ್‌ ತನ್ನ ವರದಿಯಲ್ಲಿ ಹೇಳಿದೆ.

ವಿಡಿಯೊವನ್ನುಮಾಡಿದ್ದು ನಟನೆಗಾಗಿ 

ಮಾರ್ಚ್ 8 ರಂದು ‘ದಿವ್ಯ ವಿಕ್ರಮ್’ ಫೇಸ್‌ಬುಕ್ ಅಕೌಂಟ್‌ನಿಂದ ಅಮಿತ್ ಮತ್ತು ರಾಣಿಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಮೊದಲ ವೀಡಿಯೊದಲ್ಲಿ, ವರನು  ಮದುವೆ ಮಂಟಪಕ್ಕೆ ಕುಡಿದ ಅಮಲಿನಲ್ಲಿ ಬರುತ್ತಾನೆ ಆಗ ವಧು ಮದುವೆಯಾಗಲು  ನಿರಾಕರಿಸುತ್ತಾಳೆ. ಎರಡನೇ ವಿಡಿಯೊದಲ್ಲಿ ವಧು ಮತ್ತು ವರ ಪರಸ್ಪರ ಸಂತೋಷದಿಂದ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆ ಆಗುವುದನ್ನು ಕಾಣಬಹುದು. ಇದೊಂದು ನಟನೆಯ ವಿಡಿಯೊ ಆಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಕೇವಲ ತಮ್ಮ ನಟನೆಯ ಹವ್ಯಾಸಕ್ಕಾಗಿ ಮಾಡಲಾದ ವಿಡಿಯೊವನ್ನು ಸಾಮಾಜಿಕ ಮಾದ್ಯಗಳಲ್ಲಿ ವೈರಲ್ ಮಾಡುವ ಮೂಲಕ ನೈಜ ಘಟನೆ ಎಂದು ಬಿಂಬಿಸಲಾಗಿದೆ. ಅದೂ ಸಾಲದು ಎಂಬಂತೆ ಇದನ್ನು ನ್ಯೂಸ್‌18 ಕನ್ನಡದಂತಹ ಮುಖ್ಯವಾಹಿನಿಗಳು ಕೂಡ ಗಂಭೀರ ಸ್ವರೂಪದ ಸುದ್ದಿ ಎಂಬಂತೆ ವರದಿ ಮಾಡಿವೆ. ಆದರೆ ಇದು ಸತ್ಯ ಘಟನೆಯಲ್ಲ ಇದೊಂದು ನಟನೆಯ ವಿಡಿಯೊ ಆಗಿದೆ.

ಕೃಪೆ : ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...