Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

- Advertisement -
- Advertisement -

ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ ಬೇಡಿಕೆಯಿಡುವುದನ್ನು ಕೇಳಬಹುದಾಗಿದೆ.

ಇದನ್ನು ನ್ಯೂಸ್18 ಕನ್ನಡ ವರದಿ ಮಾಡಿದ್ದು, “ನಾನು ಸರ್ಕಾರಿ ಉದ್ಯೋಗಿಯಾಗಿದ್ದರಿಂದ ನನ್ನ ಡಿಮ್ಯಾಂಡ್ ಗಳು ಇವತ್ತೇ ಈಡೇರಬೇಕೆಂದು ವರ ಹೇಳಿದ್ದಾನೆ. ಇಲ್ಲವಾದ್ರೆ ನಾವು ವಾಪಸ್ ಹೋಗುತ್ತೇವೆ. ವರದಕ್ಷಿಣೆ ನೀಡಲು ಆಗದಿದ್ರೆ, ನಿಮ್ಮ ಯೋಗ್ಯತೆಗೆ ಹೊಂದುವ ಜನರ ಜೊತೆ ಸಂಬಂಧ ಬೆಳೆಸಬೇಕು ಎಂದು ಸೊಕ್ಕಿನ ಮಾತುಗಳನ್ನು ಆಡಿದ್ದಾನೆ” ತನ್ನ ವೆಬ್‌ಸೈಟ್‌ನಲ್ಲಿ ವರದಿ ಮಾಡಿದೆ.

ನ್ಯೂಸ್ 18 ಕನ್ನಡದ ಟ್ವಿಟರ್ ಮತ್ತು ಲೇಖನದ ಆರ್ಕೈವ್ ಲಿಂಕ್‌ಅನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವಿಡಿಯೊದಲ್ಲಿ ಮಾತನಾಡಿರುವ ವರನೂ, “ನನಗೆ ಇದುವರೆಗೂ ಕ್ಯಾಶ್ ಸಿಕ್ಕಿಲ್ಲ. ಮಾತುಕತೆಯಂತೆ ತೀರ್ಮಾನಿಸಿದ್ದ ಯಾವ ವಸ್ತುಗಳು ಇನ್ನು ನಮಗೆ ಸೇರಿಲ್ಲ. ಒಂದು ಚೈನ್ ಸಹ ಕೊಡ್ತೀವಿ ಅಂತ ಹೇಳಿದ್ದರು. ಅದನ್ನು ಸಹ ಕೊಟ್ಟಿಲ್ಲ. ಕೊಟ್ಟ ಮಾತನ್ನು ತಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ವಿಡಿಯೋ ಮಾಡುತ್ತಿರುವ ವ್ಯಕ್ತಿ, “ನೀವೆಲ್ಲ ಓದಿದವರು. ಹೀಗೆ ಬಹಿರಂಗವಾಗಿ ವರದಕ್ಷಿಣೆ ಕೇಳೋದು ಎಷ್ಟು ಸರಿ” ಎಂದು ಪ್ರಶ್ನೆ ಮಾಡುತ್ತಾರೆ. ಆದರೆ ವರ ಮಾತ್ರ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳುತ್ತಾನೆ. ಅದಕ್ಕೆ, ನಿಮಗೆ ಹಣ ಬೇಕಿದ್ರೆ ಇಲ್ಲಿಗೆ ಯಾಕೆ ಬರಬೇಕಿತ್ತು ಎಂದು ವ್ಯಕ್ತಿ ಪ್ರಶ್ನೆ ಮಾಡುತ್ತಾರೆ. ಈ ವೇಳೆ ವರನೂ ಫೋನ್‌ ಮಾಡಿದಾಗ ಎಲ್ಲವೂ ರೆಡಿ ಇದೆ ಬನ್ನಿ ಅಂತ  ಹೇಳಿದ್ದಾರೆ. ಆದ್ರೆ ಈಗ ಇಲ್ಲ ಅಂತ ಹೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮನವೊಲಿಸಲು ಮುಂದಾದ ವಧು

ಈ ವೇಳೆ ಪಕ್ಕದಲ್ಲಿ ನಿಂತಿದ್ದ ವಧು, ನಿಮಗೆ ಒಂದು ಲಕ್ಷ ನಗದು ಮತ್ತು ಚಿನ್ನ ಸಹ ಸಿಗುತ್ತೆ ಎಂದು ಮನವೊಲಿಸಲು ಪ್ರಯತ್ನ ಮಾಡೋದನ್ನು ಕಾಣಬಹುದು. ಕೊನೆಗೆ ವರ ನಾನು ನಮ್ಮ ತಂದೆ ಜೊತೆ ಮಾತನಾಡಬೇಕು ಎಂದು ವೇದಿಕೆಯಿಂದ ಕೆಳಗೆ ಇಳಿಯುತ್ತಾನೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಕೂಡ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಸುದ್ದಿಯನ್ನು ಹಲವು ಮುಖ್ಯವಾಹಿನಿಯ ಮಾಧ್ಯಮಗಳೂ ಕೂಡ ವೀಡಿಯೊ ಬಗ್ಗೆ ವರದಿಗಳನ್ನು ಪ್ರಕಟಿಸಿವೆ.

ತಾನು ಕೇಳಿದ್ದಕಿಂತ ಕಡಿಮೆ ವರದಕ್ಷಿಣೆ ನೀಡಿದ ಕಾರಣಕ್ಕೆ ವರನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಪ್ರತಿಪಾದಿಸಿ The Indian ExpressZee NewsNDTVDNA IndiaTimes of IndiaLokmatIndia.comIBC 24News18 Kannada ಕೂಡ ವೀಡಿಯೊ ಬಗ್ಗೆ ವರದಿ ಮಾಡಿವೆ.

 

 

ಅಂತರಾಷ್ಟ್ರೀಯ ಮಹಿಳಾ ದಿನದ ದಿನದಂದು The Times of India ಕೂಡ ವರದಿಯನ್ನು ಮಾಡಿದ್ದು, “ನೀವು ಅವರಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೀರಾ” ಎಂಬ ಪ್ರಶ್ನೆಯನ್ನು ಹಾಕಿದೆ. “ತನ್ನ ಮದುವೆಗಾಗಿ ಅಲಂಕೃತಗೊಂಡ ವರನ ಪಕ್ಕದಲ್ಲಿ ಕುಳಿತು ಹಸನ್ಮುಖಿಯಾಗಿ ಕಂಗೊಳಿಸಬೇಕಿದ್ದ ಅವಳು, ವರದಕ್ಷಿಣೆಯ ಸಾಧನವಾಗಿದ್ದಾಳೆ. ಹಾಗಾಗಿ ಅವನು ಅವಳನ್ನು ತನ್ನ ಹೆಂಡತಿಯಾಗಿ ಸ್ವೀಕರಿಸುತ್ತಾನೆ. ಆತ ತಾನು ಗಂಡು ಎನ್ನುವ ಅಹಂನಿಂದಾಗಿ ದರ್ಪ ತೋರಿಸುತ್ತಿದ್ದಾನೆ. ಇದು 2022 ರಲ್ಲಿ ಭಾರತದ ಕೆಲವು ಮಹಿಳೆಯರ ಸ್ಥಿತಿಯಾಗಿದೆ. ಇದನ್ನು ನೀವು ಸಮ್ಮತಿಸುವಿರಾ?” ಎಂದು ವರದಿ ಮಾಡಿದೆ.

 

ಈ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿರುವ ಕಾರಣ ಮತ್ತುಸುದ್ದಿ ಮಾಧ್ಯಮಗಳು ವರದಿ ಮಾಡಿವೆ, ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ವರದಿಯಲ್ಲಿ ಹೇಳಿಲ್ಲ. ಈ ಹಿನ್ನಲೆಯಲ್ಲಿ ಇದರ ಸತ್ಯಾಸತ್ಯೆಗಳನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಕೀ ವರ್ಡ್ ಸಹಾಯದ ಮೂಲಕ ಸುದ್ದಿಯ ವಿವರಗಳನ್ನು ಸರ್ಚ್ ಮಾಡಲಾಗಿದ್ದು, ಈ ವೀಡಿಯೊವನ್ನು ಫೆಬ್ರವರಿ 25 ರಂದು ‘ದಿವ್ಯ ವಿಕ್ರಮ್‘ ಎಂಬ ಫೇಸ್‌ಬುಕ್ ಪುಟದಿಂದ ಪೋಸ್ಟ್ ಮಾಡಲಾಗಿದೆ ಮತ್ತು 70 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ . ಈ ಫೇಸ್‌ಬುಕ್ ಅಕೌಂಟ್‌ನಿಂದ ಇಂತಹ ಅನೇಕ ವೀಡಿಯೊಗಳನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದೆ.

‘ವಿಕ್ರಮ್ ಮಿಶ್ರಾ’ ಎಂಬ ವ್ಯಕ್ತಿಯು ಈ ವಿಡಿಯೊವನ್ನು ಕ್ರಿಯೇಟ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ನಂತರ ಅವರನ್ನು ಸಂಪರ್ಕಿಸಲಾಗಿದ್ದು, ಅವರು ತಮ್ಮ ತಂಡದೊಂದಿಗೆ ‘ಜೈ ಮಿಥಿಲಾ’ ಎಂಬ ಚಾನಲ್ ಅನ್ನು ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮದುವೆಯ ವಿಡಿಯೋದಲ್ಲಿ ಕಾಣುತ್ತಿರುವ ವಧು ಮತ್ತು ವರ ಇಬ್ಬರೂ ಕಲಾವಿದರು (ನಟರು). ಅವರ ಹೆಸರು ಅಮಿತ್ ಮತ್ತು ರಾಣಿ ಎಂದು ತಿಳಿಸಿದ್ದಾರೆ.

ವಿಕ್ರಮ್ ಮಿಶ್ರಾ ಅವರ ಸಹಾಯದಿಂದ ಅಮಿತ್ ಮತ್ತು ರಾಣಿ ಅವರನ್ನು ಸಂಪರ್ಕಿಸಿದಾಗ, ತಾವು ನಟರಾಗಿದ್ದು, ಅಂತಹ ಅನೇಕ ವೀಡಿಯೊಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದೇವೆ ಎಂದು ದೃಢಪಡಿಸಿದ್ದಾರೆ.

ಈ ವಿಡಿಯೋವನ್ನು ಕೇವಲ ತಮ್ಮ ನಟನೆಯ ಸಾಮರ್ಥ್ಯವನ್ನು ನಿರೂಪಿಸಲು ತಾವೇ ಸ್ವತಃ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಅವರ ವೀಡಿಯೊವನ್ನು ನೈಜ ಘಟನೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ನಿಜವಲ್ಲ. ಅಮಿತ್ ಮತ್ತು ರಾಣಿ ಪರಸ್ಪರ ಮದುವೆಯಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಲ್ಟ್‌ ನ್ಯೂಸ್‌ ತನ್ನ ವರದಿಯಲ್ಲಿ ಹೇಳಿದೆ.

ವಿಡಿಯೊವನ್ನುಮಾಡಿದ್ದು ನಟನೆಗಾಗಿ 

ಮಾರ್ಚ್ 8 ರಂದು ‘ದಿವ್ಯ ವಿಕ್ರಮ್’ ಫೇಸ್‌ಬುಕ್ ಅಕೌಂಟ್‌ನಿಂದ ಅಮಿತ್ ಮತ್ತು ರಾಣಿಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಮೊದಲ ವೀಡಿಯೊದಲ್ಲಿ, ವರನು  ಮದುವೆ ಮಂಟಪಕ್ಕೆ ಕುಡಿದ ಅಮಲಿನಲ್ಲಿ ಬರುತ್ತಾನೆ ಆಗ ವಧು ಮದುವೆಯಾಗಲು  ನಿರಾಕರಿಸುತ್ತಾಳೆ. ಎರಡನೇ ವಿಡಿಯೊದಲ್ಲಿ ವಧು ಮತ್ತು ವರ ಪರಸ್ಪರ ಸಂತೋಷದಿಂದ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆ ಆಗುವುದನ್ನು ಕಾಣಬಹುದು. ಇದೊಂದು ನಟನೆಯ ವಿಡಿಯೊ ಆಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಕೇವಲ ತಮ್ಮ ನಟನೆಯ ಹವ್ಯಾಸಕ್ಕಾಗಿ ಮಾಡಲಾದ ವಿಡಿಯೊವನ್ನು ಸಾಮಾಜಿಕ ಮಾದ್ಯಗಳಲ್ಲಿ ವೈರಲ್ ಮಾಡುವ ಮೂಲಕ ನೈಜ ಘಟನೆ ಎಂದು ಬಿಂಬಿಸಲಾಗಿದೆ. ಅದೂ ಸಾಲದು ಎಂಬಂತೆ ಇದನ್ನು ನ್ಯೂಸ್‌18 ಕನ್ನಡದಂತಹ ಮುಖ್ಯವಾಹಿನಿಗಳು ಕೂಡ ಗಂಭೀರ ಸ್ವರೂಪದ ಸುದ್ದಿ ಎಂಬಂತೆ ವರದಿ ಮಾಡಿವೆ. ಆದರೆ ಇದು ಸತ್ಯ ಘಟನೆಯಲ್ಲ ಇದೊಂದು ನಟನೆಯ ವಿಡಿಯೊ ಆಗಿದೆ.

ಕೃಪೆ : ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...