Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

- Advertisement -
- Advertisement -

ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ ಬೇಡಿಕೆಯಿಡುವುದನ್ನು ಕೇಳಬಹುದಾಗಿದೆ.

ಇದನ್ನು ನ್ಯೂಸ್18 ಕನ್ನಡ ವರದಿ ಮಾಡಿದ್ದು, “ನಾನು ಸರ್ಕಾರಿ ಉದ್ಯೋಗಿಯಾಗಿದ್ದರಿಂದ ನನ್ನ ಡಿಮ್ಯಾಂಡ್ ಗಳು ಇವತ್ತೇ ಈಡೇರಬೇಕೆಂದು ವರ ಹೇಳಿದ್ದಾನೆ. ಇಲ್ಲವಾದ್ರೆ ನಾವು ವಾಪಸ್ ಹೋಗುತ್ತೇವೆ. ವರದಕ್ಷಿಣೆ ನೀಡಲು ಆಗದಿದ್ರೆ, ನಿಮ್ಮ ಯೋಗ್ಯತೆಗೆ ಹೊಂದುವ ಜನರ ಜೊತೆ ಸಂಬಂಧ ಬೆಳೆಸಬೇಕು ಎಂದು ಸೊಕ್ಕಿನ ಮಾತುಗಳನ್ನು ಆಡಿದ್ದಾನೆ” ತನ್ನ ವೆಬ್‌ಸೈಟ್‌ನಲ್ಲಿ ವರದಿ ಮಾಡಿದೆ.

ನ್ಯೂಸ್ 18 ಕನ್ನಡದ ಟ್ವಿಟರ್ ಮತ್ತು ಲೇಖನದ ಆರ್ಕೈವ್ ಲಿಂಕ್‌ಅನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವಿಡಿಯೊದಲ್ಲಿ ಮಾತನಾಡಿರುವ ವರನೂ, “ನನಗೆ ಇದುವರೆಗೂ ಕ್ಯಾಶ್ ಸಿಕ್ಕಿಲ್ಲ. ಮಾತುಕತೆಯಂತೆ ತೀರ್ಮಾನಿಸಿದ್ದ ಯಾವ ವಸ್ತುಗಳು ಇನ್ನು ನಮಗೆ ಸೇರಿಲ್ಲ. ಒಂದು ಚೈನ್ ಸಹ ಕೊಡ್ತೀವಿ ಅಂತ ಹೇಳಿದ್ದರು. ಅದನ್ನು ಸಹ ಕೊಟ್ಟಿಲ್ಲ. ಕೊಟ್ಟ ಮಾತನ್ನು ತಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ವಿಡಿಯೋ ಮಾಡುತ್ತಿರುವ ವ್ಯಕ್ತಿ, “ನೀವೆಲ್ಲ ಓದಿದವರು. ಹೀಗೆ ಬಹಿರಂಗವಾಗಿ ವರದಕ್ಷಿಣೆ ಕೇಳೋದು ಎಷ್ಟು ಸರಿ” ಎಂದು ಪ್ರಶ್ನೆ ಮಾಡುತ್ತಾರೆ. ಆದರೆ ವರ ಮಾತ್ರ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳುತ್ತಾನೆ. ಅದಕ್ಕೆ, ನಿಮಗೆ ಹಣ ಬೇಕಿದ್ರೆ ಇಲ್ಲಿಗೆ ಯಾಕೆ ಬರಬೇಕಿತ್ತು ಎಂದು ವ್ಯಕ್ತಿ ಪ್ರಶ್ನೆ ಮಾಡುತ್ತಾರೆ. ಈ ವೇಳೆ ವರನೂ ಫೋನ್‌ ಮಾಡಿದಾಗ ಎಲ್ಲವೂ ರೆಡಿ ಇದೆ ಬನ್ನಿ ಅಂತ  ಹೇಳಿದ್ದಾರೆ. ಆದ್ರೆ ಈಗ ಇಲ್ಲ ಅಂತ ಹೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮನವೊಲಿಸಲು ಮುಂದಾದ ವಧು

ಈ ವೇಳೆ ಪಕ್ಕದಲ್ಲಿ ನಿಂತಿದ್ದ ವಧು, ನಿಮಗೆ ಒಂದು ಲಕ್ಷ ನಗದು ಮತ್ತು ಚಿನ್ನ ಸಹ ಸಿಗುತ್ತೆ ಎಂದು ಮನವೊಲಿಸಲು ಪ್ರಯತ್ನ ಮಾಡೋದನ್ನು ಕಾಣಬಹುದು. ಕೊನೆಗೆ ವರ ನಾನು ನಮ್ಮ ತಂದೆ ಜೊತೆ ಮಾತನಾಡಬೇಕು ಎಂದು ವೇದಿಕೆಯಿಂದ ಕೆಳಗೆ ಇಳಿಯುತ್ತಾನೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಕೂಡ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಸುದ್ದಿಯನ್ನು ಹಲವು ಮುಖ್ಯವಾಹಿನಿಯ ಮಾಧ್ಯಮಗಳೂ ಕೂಡ ವೀಡಿಯೊ ಬಗ್ಗೆ ವರದಿಗಳನ್ನು ಪ್ರಕಟಿಸಿವೆ.

ತಾನು ಕೇಳಿದ್ದಕಿಂತ ಕಡಿಮೆ ವರದಕ್ಷಿಣೆ ನೀಡಿದ ಕಾರಣಕ್ಕೆ ವರನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಪ್ರತಿಪಾದಿಸಿ The Indian ExpressZee NewsNDTVDNA IndiaTimes of IndiaLokmatIndia.comIBC 24News18 Kannada ಕೂಡ ವೀಡಿಯೊ ಬಗ್ಗೆ ವರದಿ ಮಾಡಿವೆ.

 

 

ಅಂತರಾಷ್ಟ್ರೀಯ ಮಹಿಳಾ ದಿನದ ದಿನದಂದು The Times of India ಕೂಡ ವರದಿಯನ್ನು ಮಾಡಿದ್ದು, “ನೀವು ಅವರಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೀರಾ” ಎಂಬ ಪ್ರಶ್ನೆಯನ್ನು ಹಾಕಿದೆ. “ತನ್ನ ಮದುವೆಗಾಗಿ ಅಲಂಕೃತಗೊಂಡ ವರನ ಪಕ್ಕದಲ್ಲಿ ಕುಳಿತು ಹಸನ್ಮುಖಿಯಾಗಿ ಕಂಗೊಳಿಸಬೇಕಿದ್ದ ಅವಳು, ವರದಕ್ಷಿಣೆಯ ಸಾಧನವಾಗಿದ್ದಾಳೆ. ಹಾಗಾಗಿ ಅವನು ಅವಳನ್ನು ತನ್ನ ಹೆಂಡತಿಯಾಗಿ ಸ್ವೀಕರಿಸುತ್ತಾನೆ. ಆತ ತಾನು ಗಂಡು ಎನ್ನುವ ಅಹಂನಿಂದಾಗಿ ದರ್ಪ ತೋರಿಸುತ್ತಿದ್ದಾನೆ. ಇದು 2022 ರಲ್ಲಿ ಭಾರತದ ಕೆಲವು ಮಹಿಳೆಯರ ಸ್ಥಿತಿಯಾಗಿದೆ. ಇದನ್ನು ನೀವು ಸಮ್ಮತಿಸುವಿರಾ?” ಎಂದು ವರದಿ ಮಾಡಿದೆ.

 

ಈ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿರುವ ಕಾರಣ ಮತ್ತುಸುದ್ದಿ ಮಾಧ್ಯಮಗಳು ವರದಿ ಮಾಡಿವೆ, ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ವರದಿಯಲ್ಲಿ ಹೇಳಿಲ್ಲ. ಈ ಹಿನ್ನಲೆಯಲ್ಲಿ ಇದರ ಸತ್ಯಾಸತ್ಯೆಗಳನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಕೀ ವರ್ಡ್ ಸಹಾಯದ ಮೂಲಕ ಸುದ್ದಿಯ ವಿವರಗಳನ್ನು ಸರ್ಚ್ ಮಾಡಲಾಗಿದ್ದು, ಈ ವೀಡಿಯೊವನ್ನು ಫೆಬ್ರವರಿ 25 ರಂದು ‘ದಿವ್ಯ ವಿಕ್ರಮ್‘ ಎಂಬ ಫೇಸ್‌ಬುಕ್ ಪುಟದಿಂದ ಪೋಸ್ಟ್ ಮಾಡಲಾಗಿದೆ ಮತ್ತು 70 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ . ಈ ಫೇಸ್‌ಬುಕ್ ಅಕೌಂಟ್‌ನಿಂದ ಇಂತಹ ಅನೇಕ ವೀಡಿಯೊಗಳನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದೆ.

‘ವಿಕ್ರಮ್ ಮಿಶ್ರಾ’ ಎಂಬ ವ್ಯಕ್ತಿಯು ಈ ವಿಡಿಯೊವನ್ನು ಕ್ರಿಯೇಟ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ನಂತರ ಅವರನ್ನು ಸಂಪರ್ಕಿಸಲಾಗಿದ್ದು, ಅವರು ತಮ್ಮ ತಂಡದೊಂದಿಗೆ ‘ಜೈ ಮಿಥಿಲಾ’ ಎಂಬ ಚಾನಲ್ ಅನ್ನು ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮದುವೆಯ ವಿಡಿಯೋದಲ್ಲಿ ಕಾಣುತ್ತಿರುವ ವಧು ಮತ್ತು ವರ ಇಬ್ಬರೂ ಕಲಾವಿದರು (ನಟರು). ಅವರ ಹೆಸರು ಅಮಿತ್ ಮತ್ತು ರಾಣಿ ಎಂದು ತಿಳಿಸಿದ್ದಾರೆ.

ವಿಕ್ರಮ್ ಮಿಶ್ರಾ ಅವರ ಸಹಾಯದಿಂದ ಅಮಿತ್ ಮತ್ತು ರಾಣಿ ಅವರನ್ನು ಸಂಪರ್ಕಿಸಿದಾಗ, ತಾವು ನಟರಾಗಿದ್ದು, ಅಂತಹ ಅನೇಕ ವೀಡಿಯೊಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದೇವೆ ಎಂದು ದೃಢಪಡಿಸಿದ್ದಾರೆ.

ಈ ವಿಡಿಯೋವನ್ನು ಕೇವಲ ತಮ್ಮ ನಟನೆಯ ಸಾಮರ್ಥ್ಯವನ್ನು ನಿರೂಪಿಸಲು ತಾವೇ ಸ್ವತಃ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಅವರ ವೀಡಿಯೊವನ್ನು ನೈಜ ಘಟನೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ನಿಜವಲ್ಲ. ಅಮಿತ್ ಮತ್ತು ರಾಣಿ ಪರಸ್ಪರ ಮದುವೆಯಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಲ್ಟ್‌ ನ್ಯೂಸ್‌ ತನ್ನ ವರದಿಯಲ್ಲಿ ಹೇಳಿದೆ.

ವಿಡಿಯೊವನ್ನುಮಾಡಿದ್ದು ನಟನೆಗಾಗಿ 

ಮಾರ್ಚ್ 8 ರಂದು ‘ದಿವ್ಯ ವಿಕ್ರಮ್’ ಫೇಸ್‌ಬುಕ್ ಅಕೌಂಟ್‌ನಿಂದ ಅಮಿತ್ ಮತ್ತು ರಾಣಿಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಮೊದಲ ವೀಡಿಯೊದಲ್ಲಿ, ವರನು  ಮದುವೆ ಮಂಟಪಕ್ಕೆ ಕುಡಿದ ಅಮಲಿನಲ್ಲಿ ಬರುತ್ತಾನೆ ಆಗ ವಧು ಮದುವೆಯಾಗಲು  ನಿರಾಕರಿಸುತ್ತಾಳೆ. ಎರಡನೇ ವಿಡಿಯೊದಲ್ಲಿ ವಧು ಮತ್ತು ವರ ಪರಸ್ಪರ ಸಂತೋಷದಿಂದ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆ ಆಗುವುದನ್ನು ಕಾಣಬಹುದು. ಇದೊಂದು ನಟನೆಯ ವಿಡಿಯೊ ಆಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಕೇವಲ ತಮ್ಮ ನಟನೆಯ ಹವ್ಯಾಸಕ್ಕಾಗಿ ಮಾಡಲಾದ ವಿಡಿಯೊವನ್ನು ಸಾಮಾಜಿಕ ಮಾದ್ಯಗಳಲ್ಲಿ ವೈರಲ್ ಮಾಡುವ ಮೂಲಕ ನೈಜ ಘಟನೆ ಎಂದು ಬಿಂಬಿಸಲಾಗಿದೆ. ಅದೂ ಸಾಲದು ಎಂಬಂತೆ ಇದನ್ನು ನ್ಯೂಸ್‌18 ಕನ್ನಡದಂತಹ ಮುಖ್ಯವಾಹಿನಿಗಳು ಕೂಡ ಗಂಭೀರ ಸ್ವರೂಪದ ಸುದ್ದಿ ಎಂಬಂತೆ ವರದಿ ಮಾಡಿವೆ. ಆದರೆ ಇದು ಸತ್ಯ ಘಟನೆಯಲ್ಲ ಇದೊಂದು ನಟನೆಯ ವಿಡಿಯೊ ಆಗಿದೆ.

ಕೃಪೆ : ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...