Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

- Advertisement -
- Advertisement -

“ಕೊರೊನಾ ವೈರಸ್ ಸಮಯದಲ್ಲಿ ಕುಂಭಮೇಳ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ್ದಕ್ಕೆ, ಉತ್ತರ ಪ್ರದೇಶದ ಲಕ್ನೋ ಮೂಲದ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಎಂಬವರನ್ನು ಹಾಡಹಗಲೆ ಇರಿದು ಕೊಲೆ ಮಾಡಲಾಯಿತು” ಎಂಬ ಶಿರ್ಷಿಕೆಯೊಂದಿಗೆ, ಮಹಿಳೆಯೊಬ್ಬರನ್ನು ಇರಿಯುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.

ಈ ಹಿಂದೆ ಕೂಡಾ ಇದೇ ವಿಡಿಯೋವನ್ನು, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಮಹಿಳೆಯನ್ನು ಹಾಡಹಗಲೆ ಇರಿದಿದ್ದಾನೆ” ಎಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.

ಆದರೆ ಹಲವು ಫ್ಯಾಕ್ಟ್‌‌ಚೆಕ್ ವೆಬ್‌ಸೈಟ್‌ಗಳು, ಈ ಘಟನೆ ದೆಹಲಿಯಲ್ಲಿ ನಡೆದಿದ್ದು ಎಂದು ಕಂಡು ಹಿಡಿದಿದೆ. ಅಲ್ಲದೆ ಈ ಘಟನೆಯಲ್ಲಿ ಯಾವುದೆ ಕೋಮು ಆಯಾಮ ಇಲ್ಲ ಎಂಬುದಾಗಿ ದೆಹಲಿಯ ರೋಹಿಣಿ ಜಿಲ್ಲಾ ಡಿಸಿಪಿ ಪ್ರಣವ್ ತಯಾಲ್ ಅವರು ಹೇಳಿದ್ದಾಗಿ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಭೂಮ್‌ ಲೈವ್ ವರದಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ

ವೈರಲ್ ವಿಡಿಯೊ ಸಿಸಿಟಿವಿಯಿಂದ ಪಡೆದ ದೃಶ್ಯಾವಳಿಗಳಾಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಇರಿಯುತ್ತಿರುವುದು ಕಾಣಿಸುತ್ತದೆ.

ಈ ವಿಡಿಯೊ ಜೊತೆಗೆ, “ಉತ್ತರ ಪ್ರದೇಶದ ಲಕ್ನೋ ಮೂಲದ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಎಂಬವರನ್ನು ಹಾಡಹಗಲೆ ಇರಿದು ಕೊಲೆ ಮಾಡಲಾಯಿತು” ಎಂದು ಶಿರ್ಷಿಕೆಯನ್ನು ನೀಡಲಾಗಿದೆ.

ಪೋಸ್ಟ್‌‌ನ ಆರ್ಕೈವ್ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಇಷ್ಟೇ ಅಲ್ಲದೆ, ವಾಟ್ಸಪ್‌ನಲ್ಲಿ ಇದೇ ವಿಡಿಯೊ ಮತ್ತು ಫೋಟೊಗಳು, “ಕೊರೊನಾ ವೈರಸ್ ಸಮಯದಲ್ಲಿ ಕುಂಭಮೇಳ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ್ದಕ್ಕೆ, ಉತ್ತರ ಪ್ರದೇಶದ ಲಕ್ನೋ ಮೂಲದ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಎಂಬವರನ್ನು ಹಾಡಹಗಲೆ ಇರಿದು ಕೊಲೆ ಮಾಡಲಾಯಿತು” ಎಂಬ ಶಿರ್ಷಿಕೆಯಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್

ಈ ವೀಡಿಯೊವನ್ನು ಹಲವಾರು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ಗಳು ಪರಿಶೀಲಿಸಿದೆ. ಘಟನೆಯು ದೆಹಲಿಯ ರೋಹಿಣಿ ಜಿಲ್ಲೆಯ ವಿಜಯ್ ವಿಹಾರ್ ಬಳಿ ನಡೆದಿದೆ. ವಿಡಿಯೊದಲ್ಲಿ ಇರಿಯುತ್ತಿರುವ ವ್ಯಕ್ತಿಯನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದೆ. ಆತ ತನ್ನ ಪತ್ನಿ ನೀಲು ಮೆಹ್ತಾರನ್ನು 2021 ರ ಏಪ್ರಿಲ್ 10 ರಂದು ಹಾಡಹಗಲೇ ಕ್ರೂರವಾಗಿ ಇರಿದಿದ್ದಾನೆ.

ದೆಹಲಿಯ ರೋಹಿಣಿ ಜಿಲ್ಲೆಯ ಉಪ ಪೊಲೀಸ್ ಆಯುಕ್ತ ಪ್ರಣವ್ ತಯಾಲ್ ಅವರು ಹೇಳುವಂತೆ, “ಘಟನೆಗೆ ಯಾವುದೇ ಹಿಂದೂ-ಮುಸ್ಲಿಂ ಆಯಾಮವಿಲ್ಲ, ಗಂಡ ಮತ್ತು ಹೆಂಡತಿ ಇಬ್ಬರೂ ಒಂದೇ ಧರ್ಮದವರು, ಘಟನೆಯು ಅವರ ಮನೆಯ ಹೊರಗೆ ಸಂಭವಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಅಲ್ಲದೆ ಸ್ವತಃ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಅವರೇ ಪ್ರತಿಕ್ರಿಯಿಸಿದ್ದು, “ನಾನು ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರೋಟೋಕಾಲ್ ಅನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿದ್ದೇನೆ. ನಾನು ಸಂಪೂರ್ಣವಾಗಿ ಸುರಕ್ಷಿತ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...