Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

- Advertisement -
- Advertisement -

“ಕೊರೊನಾ ವೈರಸ್ ಸಮಯದಲ್ಲಿ ಕುಂಭಮೇಳ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ್ದಕ್ಕೆ, ಉತ್ತರ ಪ್ರದೇಶದ ಲಕ್ನೋ ಮೂಲದ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಎಂಬವರನ್ನು ಹಾಡಹಗಲೆ ಇರಿದು ಕೊಲೆ ಮಾಡಲಾಯಿತು” ಎಂಬ ಶಿರ್ಷಿಕೆಯೊಂದಿಗೆ, ಮಹಿಳೆಯೊಬ್ಬರನ್ನು ಇರಿಯುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.

ಈ ಹಿಂದೆ ಕೂಡಾ ಇದೇ ವಿಡಿಯೋವನ್ನು, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಮಹಿಳೆಯನ್ನು ಹಾಡಹಗಲೆ ಇರಿದಿದ್ದಾನೆ” ಎಂದು ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿತ್ತು.

ಆದರೆ ಹಲವು ಫ್ಯಾಕ್ಟ್‌‌ಚೆಕ್ ವೆಬ್‌ಸೈಟ್‌ಗಳು, ಈ ಘಟನೆ ದೆಹಲಿಯಲ್ಲಿ ನಡೆದಿದ್ದು ಎಂದು ಕಂಡು ಹಿಡಿದಿದೆ. ಅಲ್ಲದೆ ಈ ಘಟನೆಯಲ್ಲಿ ಯಾವುದೆ ಕೋಮು ಆಯಾಮ ಇಲ್ಲ ಎಂಬುದಾಗಿ ದೆಹಲಿಯ ರೋಹಿಣಿ ಜಿಲ್ಲಾ ಡಿಸಿಪಿ ಪ್ರಣವ್ ತಯಾಲ್ ಅವರು ಹೇಳಿದ್ದಾಗಿ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಭೂಮ್‌ ಲೈವ್ ವರದಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ

ವೈರಲ್ ವಿಡಿಯೊ ಸಿಸಿಟಿವಿಯಿಂದ ಪಡೆದ ದೃಶ್ಯಾವಳಿಗಳಾಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಇರಿಯುತ್ತಿರುವುದು ಕಾಣಿಸುತ್ತದೆ.

ಈ ವಿಡಿಯೊ ಜೊತೆಗೆ, “ಉತ್ತರ ಪ್ರದೇಶದ ಲಕ್ನೋ ಮೂಲದ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಎಂಬವರನ್ನು ಹಾಡಹಗಲೆ ಇರಿದು ಕೊಲೆ ಮಾಡಲಾಯಿತು” ಎಂದು ಶಿರ್ಷಿಕೆಯನ್ನು ನೀಡಲಾಗಿದೆ.

ಪೋಸ್ಟ್‌‌ನ ಆರ್ಕೈವ್ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಇಷ್ಟೇ ಅಲ್ಲದೆ, ವಾಟ್ಸಪ್‌ನಲ್ಲಿ ಇದೇ ವಿಡಿಯೊ ಮತ್ತು ಫೋಟೊಗಳು, “ಕೊರೊನಾ ವೈರಸ್ ಸಮಯದಲ್ಲಿ ಕುಂಭಮೇಳ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ್ದಕ್ಕೆ, ಉತ್ತರ ಪ್ರದೇಶದ ಲಕ್ನೋ ಮೂಲದ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಎಂಬವರನ್ನು ಹಾಡಹಗಲೆ ಇರಿದು ಕೊಲೆ ಮಾಡಲಾಯಿತು” ಎಂಬ ಶಿರ್ಷಿಕೆಯಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್

ಈ ವೀಡಿಯೊವನ್ನು ಹಲವಾರು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ಗಳು ಪರಿಶೀಲಿಸಿದೆ. ಘಟನೆಯು ದೆಹಲಿಯ ರೋಹಿಣಿ ಜಿಲ್ಲೆಯ ವಿಜಯ್ ವಿಹಾರ್ ಬಳಿ ನಡೆದಿದೆ. ವಿಡಿಯೊದಲ್ಲಿ ಇರಿಯುತ್ತಿರುವ ವ್ಯಕ್ತಿಯನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದೆ. ಆತ ತನ್ನ ಪತ್ನಿ ನೀಲು ಮೆಹ್ತಾರನ್ನು 2021 ರ ಏಪ್ರಿಲ್ 10 ರಂದು ಹಾಡಹಗಲೇ ಕ್ರೂರವಾಗಿ ಇರಿದಿದ್ದಾನೆ.

ದೆಹಲಿಯ ರೋಹಿಣಿ ಜಿಲ್ಲೆಯ ಉಪ ಪೊಲೀಸ್ ಆಯುಕ್ತ ಪ್ರಣವ್ ತಯಾಲ್ ಅವರು ಹೇಳುವಂತೆ, “ಘಟನೆಗೆ ಯಾವುದೇ ಹಿಂದೂ-ಮುಸ್ಲಿಂ ಆಯಾಮವಿಲ್ಲ, ಗಂಡ ಮತ್ತು ಹೆಂಡತಿ ಇಬ್ಬರೂ ಒಂದೇ ಧರ್ಮದವರು, ಘಟನೆಯು ಅವರ ಮನೆಯ ಹೊರಗೆ ಸಂಭವಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಅಲ್ಲದೆ ಸ್ವತಃ ಪತ್ರಕರ್ತೆ ಪ್ರಜ್ಞಾ ಮಿಶ್ರಾ ಅವರೇ ಪ್ರತಿಕ್ರಿಯಿಸಿದ್ದು, “ನಾನು ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರೋಟೋಕಾಲ್ ಅನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿದ್ದೇನೆ. ನಾನು ಸಂಪೂರ್ಣವಾಗಿ ಸುರಕ್ಷಿತ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...