Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

- Advertisement -
- Advertisement -

ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ ಎಂದಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಆ ಪೋಸ್ಟ್‌ನಲ್ಲಿ ಹೇಳೀರುವುದು ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗಡೆ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸೆ.13 ರಂದು ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ನಿಧನರಾದರು. ಅಂದು ತಮ್ಮ ವಾಲ್‌ನಲ್ಲಿ, “ಮಾಜಿ ಕೇಂದ್ರ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರು ಇಹಲೋಕ ತ್ಯಜಿಸಿದ್ದಾರೆ. ಕಾಂಗ್ರೆಸ್ ನಾಯಕನಾಗಿದ್ದರೂ ಗೋಮೂತ್ರದಲ್ಲಿ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಇದೆ. ದೇಸಿ ಗೋವುಗಳನ್ನು ಸಂರಕ್ಷಿಸಬೇಕೆಂದು ಸಂಸತ್ ನಲ್ಲಿ ಗಟ್ಟಿ ಧ್ವನಿಯಿಂದ ಪ್ರತಿಪಾದಿಸಿದ, ಯೋಗ, ಭಾರತೀಯ ವೈದ್ಯ ಪದ್ದತಿಗಳ ಬಗ್ಗೆ ಅಪಾರ ಗೌರವ ಹೊಂದಿದ್ದ ಹಿರಿಯ ನಾಯಕನಿಗೆ ನಮನಗಳು” ಎಂದು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

 

ಪೋಸ್ಟ್‌ನಲ್ಲಿ ಹೇಳಲಾಗಿರುವ ವಿಷಯಗಳ ಮಾಹಿತಿಗಾಗಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದಾಗ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು 18 ಮಾರ್ಚ್ 2020 ರಂದು ‘ಪ್ರಿಂಟ್’ ಪ್ರಕಟಿಸಿದ ಲೇಖನದಲ್ಲಿ ‘ಗೋಮೂತ್ರ’ದಿಂದ ಕ್ಯಾನ್ಸರ್‌ರನ್ನು ಜಯಿಸಿದ ವ್ಯಕ್ತಿಯ ಕಥೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ’ ಎಂದು ತಿಳಿದುಬಂದಿದೆ.

ಹೋಮಿಯೋಪತಿ ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಆಯೋಗಗಳ ಸ್ಥಾಪನೆಯ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮಗೆ ತಿಳಿದಿರುವ ವ್ಯಕ್ತಿಯೊಬ್ಬರು ‘ಗೋಮೂತ್ರ’ದ ಮೂಲಕ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಜಯಿಸಿದ್ದಾರೆ ಎಂದು ಲೇಖನ ವರದಿ ಮಾಡಿದೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮ್ಮ ಸಂಪೂರ್ಣ ಭಾಷಣವನ್ನು ಮಾಡುತ್ತಿರುವ ವೀಡಿಯೊವನ್ನು ‘ಸಂಸದ್ ಟಿವಿ’ ಸುದ್ದಿ ವಾಹಿನಿ ಪ್ರಕಟಿಸಿದೆ. ವಿಡಿಯೋದ ಸುಮಾರು 2:10 ನಿಮಿಷಗಳ ಸಮಯದಲ್ಲಿ ಆಸ್ಕರ್ ಫೆರ್ನಾಂಡಿಸ್ ಹೀಗೆ ಹೇಳಿದ್ದಾರೆ. “ನಾನು ಮೀರತ್‌ನಲ್ಲಿರುವ ಆಶ್ರಮಕ್ಕೆ ಹೋಗಿದ್ದೆ. ವಾಪಸಾಗುವುದು ತಡವಾದ ಕಾರಣ ಆಶ್ರಮ ಸ್ವಾಮೀಜಿಯವರು ತಮ್ಮ ಚಾಲಕನನ್ನು ನನ್ನ ಜೊತೆಯಲ್ಲಿ ಕಳುಹಿಸಿದರು. ಆ ಚಾಲಕನನ್ನು ಆಶ್ರಮದಲ್ಲಿ ನೀನೇಕೆ ಉಳಿದಿದ್ದಿಯಾ? ಎಂದು ಕೇಳಿದೆ, ‘ಸರ್, ನಾನು ಯಾವುದೇ ಚಿಕಿತ್ಸೆಯಿಂದ ಗುಣವಾಗದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಗ ಈ ಆಶ್ರಮಕ್ಕೆ ಸೇರಿಕೊಂಡೆ. ಈ ಆಶ್ರಮ ನೀಡಿದ ಗೋಮೂತ್ರದಿಂದ ನನ್ನ ಕ್ಯಾನ್ಸರ್ ಸಂಪೂರ್ಣವಾಗಿ ವಾಸಿಯಾಯಿತು. ಅದಕ್ಕಾಗಿಯೇ ನನಗೆ ಹೊಸ ಜೀವನವನ್ನು ನೀಡಿದ ಈ ಆಶ್ರಮದ ಸೇವೆಯನ್ನು ನನ್ನ ಜೀವನದುದ್ದಕ್ಕೂ ಮಾಡಲು ನಿರ್ಧರಿಸಿದ್ದೇನೆ, ”ಎಂದು ಚಾಲಕ ಹೇಳಿಕೊಂಡರು ಎಂದು ಹೇಳಿದ್ದಾರೆ.

ಚಾಲಕನ ಬಗ್ಗೆ ಹೇಳೀರುವ ಮಾತುಗಳನ್ನು ಅರ್ಧಕ್ಕೆ ಕಟ್ ಮಾಡಿ ಆಸ್ಕರ್ ಫೆರ್ನಾಂಡಿಸ್ ಗೋಮೂತ್ರವನ್ನು ಬಳಸಿ ತಮ್ಮ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡಿಸ್ ಮಾಡಿದ ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಇದರಲ್ಲಿ ಆಸ್ಕರ್ ಫರ್ನಾಂಡಿಸ್ ರಾಜ್ಯಸಭೆಯಲ್ಲಿ ಚಾಲಕ ತನ್ನೊಂದಿಗೆ ಹಂಚಿಕೊಂಡ ಅನುಭವವನ್ನು ಸರಳವಾಗಿ ವಿವರಿಸಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಅವರು ತಮಗೆ ರೋಗವಿದೆ ಅಥವಾ ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಎಂದು ಖಚಿತವಾಗಿ ಹೇಳಬಹುದು.

ಒಟ್ಟಾರೆ ಕಾಂಗ್ರೆಸ್ ಸಂಸದ ದಿವಂಗತ ಆಸ್ಕರ್ ಫರ್ನಾಂಡೀಸ್ ಅವರು ಗೋಮೂತ್ರ ಬಳಸಿ ಕ್ಯಾನ್ಸರ್‌ನಿಂದ ಗುಣವಾಗಿರುವುದನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿಲ್ಲ.

ಪ್ರತಿಪಾದನೆ: ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ದೃಶ್ಯಗಳು.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡೀಸ್ ಅವರು 2020 ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡುತ್ತಾ, ಕ್ಯಾನ್ಸರ್ ಅನ್ನು ಜಯಿಸಿದ ವ್ಯಕ್ತಿಯೊಂದಿಗೆ ಹಂಚಿಕೊಂಡ ಅನುಭವವನ್ನು ವಿವರಿಸಿದ್ದರು. ಮೀರತ್‌ನ ಆಶ್ರಮವೊಂದರಲ್ಲಿ ಕೆಲಸ ಮಾಡುತ್ತಿರುವ ಚಾಲಕರೊಬ್ಬರು ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಅನ್ನು ಜಯಿಸಿದ್ದಾರೆ ಎಂದು ಆಸ್ಕರ್ ಫರ್ನಾಂಡೀಸ್ ಹೇಳಿದ್ದರು. ಆದರೆ, ಆಸ್ಕರ್ ಫರ್ನಾಂಡೀಸ್ ಅವರಿಗೆ ಕ್ಯಾನ್ಸರ್ ಇದೆ ಅಥವಾ ಗೋಮೂತ್ರದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪುದಾರಿಗೆಳೆಯುವಂತಿದೆ.


ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...