Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

ಫ್ಯಾಕ್ಟ್‌ಚೆಕ್: ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಹೇಳಿರಲಿಲ್ಲ

- Advertisement -
- Advertisement -

ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ ಎಂದಿರುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಆ ಪೋಸ್ಟ್‌ನಲ್ಲಿ ಹೇಳೀರುವುದು ಎಷ್ಟು ಸತ್ಯ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ವಿಕ್ರಮ್ ಹೆಗಡೆ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಸೆ.13 ರಂದು ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ನಿಧನರಾದರು. ಅಂದು ತಮ್ಮ ವಾಲ್‌ನಲ್ಲಿ, “ಮಾಜಿ ಕೇಂದ್ರ ಸಚಿವರು, ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫರ್ನಾಂಡಿಸ್ ಅವರು ಇಹಲೋಕ ತ್ಯಜಿಸಿದ್ದಾರೆ. ಕಾಂಗ್ರೆಸ್ ನಾಯಕನಾಗಿದ್ದರೂ ಗೋಮೂತ್ರದಲ್ಲಿ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಇದೆ. ದೇಸಿ ಗೋವುಗಳನ್ನು ಸಂರಕ್ಷಿಸಬೇಕೆಂದು ಸಂಸತ್ ನಲ್ಲಿ ಗಟ್ಟಿ ಧ್ವನಿಯಿಂದ ಪ್ರತಿಪಾದಿಸಿದ, ಯೋಗ, ಭಾರತೀಯ ವೈದ್ಯ ಪದ್ದತಿಗಳ ಬಗ್ಗೆ ಅಪಾರ ಗೌರವ ಹೊಂದಿದ್ದ ಹಿರಿಯ ನಾಯಕನಿಗೆ ನಮನಗಳು” ಎಂದು ವಿಡಿಯೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

 

ಪೋಸ್ಟ್‌ನಲ್ಲಿ ಹೇಳಲಾಗಿರುವ ವಿಷಯಗಳ ಮಾಹಿತಿಗಾಗಿ ಗೂಗಲ್‌ನಲ್ಲಿ ಹುಡುಕಾಟ ನಡೆಸಿದಾಗ, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು 18 ಮಾರ್ಚ್ 2020 ರಂದು ‘ಪ್ರಿಂಟ್’ ಪ್ರಕಟಿಸಿದ ಲೇಖನದಲ್ಲಿ ‘ಗೋಮೂತ್ರ’ದಿಂದ ಕ್ಯಾನ್ಸರ್‌ರನ್ನು ಜಯಿಸಿದ ವ್ಯಕ್ತಿಯ ಕಥೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ’ ಎಂದು ತಿಳಿದುಬಂದಿದೆ.

ಹೋಮಿಯೋಪತಿ ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಆಯೋಗಗಳ ಸ್ಥಾಪನೆಯ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮಗೆ ತಿಳಿದಿರುವ ವ್ಯಕ್ತಿಯೊಬ್ಬರು ‘ಗೋಮೂತ್ರ’ದ ಮೂಲಕ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಜಯಿಸಿದ್ದಾರೆ ಎಂದು ಲೇಖನ ವರದಿ ಮಾಡಿದೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ತಮ್ಮ ಸಂಪೂರ್ಣ ಭಾಷಣವನ್ನು ಮಾಡುತ್ತಿರುವ ವೀಡಿಯೊವನ್ನು ‘ಸಂಸದ್ ಟಿವಿ’ ಸುದ್ದಿ ವಾಹಿನಿ ಪ್ರಕಟಿಸಿದೆ. ವಿಡಿಯೋದ ಸುಮಾರು 2:10 ನಿಮಿಷಗಳ ಸಮಯದಲ್ಲಿ ಆಸ್ಕರ್ ಫೆರ್ನಾಂಡಿಸ್ ಹೀಗೆ ಹೇಳಿದ್ದಾರೆ. “ನಾನು ಮೀರತ್‌ನಲ್ಲಿರುವ ಆಶ್ರಮಕ್ಕೆ ಹೋಗಿದ್ದೆ. ವಾಪಸಾಗುವುದು ತಡವಾದ ಕಾರಣ ಆಶ್ರಮ ಸ್ವಾಮೀಜಿಯವರು ತಮ್ಮ ಚಾಲಕನನ್ನು ನನ್ನ ಜೊತೆಯಲ್ಲಿ ಕಳುಹಿಸಿದರು. ಆ ಚಾಲಕನನ್ನು ಆಶ್ರಮದಲ್ಲಿ ನೀನೇಕೆ ಉಳಿದಿದ್ದಿಯಾ? ಎಂದು ಕೇಳಿದೆ, ‘ಸರ್, ನಾನು ಯಾವುದೇ ಚಿಕಿತ್ಸೆಯಿಂದ ಗುಣವಾಗದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾಗ ಈ ಆಶ್ರಮಕ್ಕೆ ಸೇರಿಕೊಂಡೆ. ಈ ಆಶ್ರಮ ನೀಡಿದ ಗೋಮೂತ್ರದಿಂದ ನನ್ನ ಕ್ಯಾನ್ಸರ್ ಸಂಪೂರ್ಣವಾಗಿ ವಾಸಿಯಾಯಿತು. ಅದಕ್ಕಾಗಿಯೇ ನನಗೆ ಹೊಸ ಜೀವನವನ್ನು ನೀಡಿದ ಈ ಆಶ್ರಮದ ಸೇವೆಯನ್ನು ನನ್ನ ಜೀವನದುದ್ದಕ್ಕೂ ಮಾಡಲು ನಿರ್ಧರಿಸಿದ್ದೇನೆ, ”ಎಂದು ಚಾಲಕ ಹೇಳಿಕೊಂಡರು ಎಂದು ಹೇಳಿದ್ದಾರೆ.

ಚಾಲಕನ ಬಗ್ಗೆ ಹೇಳೀರುವ ಮಾತುಗಳನ್ನು ಅರ್ಧಕ್ಕೆ ಕಟ್ ಮಾಡಿ ಆಸ್ಕರ್ ಫೆರ್ನಾಂಡಿಸ್ ಗೋಮೂತ್ರವನ್ನು ಬಳಸಿ ತಮ್ಮ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

18 ಮಾರ್ಚ್ 2020 ರಂದು ರಾಜ್ಯಸಭೆಯಲ್ಲಿ ಆಸ್ಕರ್ ಫರ್ನಾಂಡಿಸ್ ಮಾಡಿದ ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಇದರಲ್ಲಿ ಆಸ್ಕರ್ ಫರ್ನಾಂಡಿಸ್ ರಾಜ್ಯಸಭೆಯಲ್ಲಿ ಚಾಲಕ ತನ್ನೊಂದಿಗೆ ಹಂಚಿಕೊಂಡ ಅನುಭವವನ್ನು ಸರಳವಾಗಿ ವಿವರಿಸಿದ್ದಾರೆ.

ಆಸ್ಕರ್ ಫರ್ನಾಂಡೀಸ್ ಅವರು ತಮಗೆ ರೋಗವಿದೆ ಅಥವಾ ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಕಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ ಎಂದು ಖಚಿತವಾಗಿ ಹೇಳಬಹುದು.

ಒಟ್ಟಾರೆ ಕಾಂಗ್ರೆಸ್ ಸಂಸದ ದಿವಂಗತ ಆಸ್ಕರ್ ಫರ್ನಾಂಡೀಸ್ ಅವರು ಗೋಮೂತ್ರ ಬಳಸಿ ಕ್ಯಾನ್ಸರ್‌ನಿಂದ ಗುಣವಾಗಿರುವುದನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿಲ್ಲ.

ಪ್ರತಿಪಾದನೆ: ಗೋಮೂತ್ರ ಉಪಯೋಗದಿಂದ ಕ್ಯಾನ್ಸರ್ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡುತ್ತಿರುವ ದೃಶ್ಯಗಳು.

ನಿಜಾಂಶ: ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೊವನ್ನು ಎಡಿಟ್ ಮಾಡಲಾಗಿದೆ. ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ರಾಜ್ಯಸಭಾ ಸಂಸದ ಆಸ್ಕರ್ ಫರ್ನಾಂಡೀಸ್ ಅವರು 2020 ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡುತ್ತಾ, ಕ್ಯಾನ್ಸರ್ ಅನ್ನು ಜಯಿಸಿದ ವ್ಯಕ್ತಿಯೊಂದಿಗೆ ಹಂಚಿಕೊಂಡ ಅನುಭವವನ್ನು ವಿವರಿಸಿದ್ದರು. ಮೀರತ್‌ನ ಆಶ್ರಮವೊಂದರಲ್ಲಿ ಕೆಲಸ ಮಾಡುತ್ತಿರುವ ಚಾಲಕರೊಬ್ಬರು ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಅನ್ನು ಜಯಿಸಿದ್ದಾರೆ ಎಂದು ಆಸ್ಕರ್ ಫರ್ನಾಂಡೀಸ್ ಹೇಳಿದ್ದರು. ಆದರೆ, ಆಸ್ಕರ್ ಫರ್ನಾಂಡೀಸ್ ಅವರಿಗೆ ಕ್ಯಾನ್ಸರ್ ಇದೆ ಅಥವಾ ಗೋಮೂತ್ರದಿಂದ ಕ್ಯಾನ್ಸರ್ ಕಡಿಮೆಯಾಗುತ್ತದೆ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪುದಾರಿಗೆಳೆಯುವಂತಿದೆ.


ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...