Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...