Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...