Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...