Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...