Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....