Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

- Advertisement -
- Advertisement -

ಪ್ರಧಾನಿ ಮೋದಿಯವರು ವಾಷಿಂಗ್ ಬೇಸನ್‌ನಲ್ಲಿ ಕೈತೊಳೆಯುತ್ತಿರುವ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಪ್ರಧಾನಿ ಮೋದಿ ಈಗ ತಮ್ಮ ಕ್ಯಾಮರಾಮನ್‌ನನ್ನು ಟಾಯ್ಲೆಟ್‌ಗೂ ಜೊತೆಯಲ್ಲಿ ಕರೆದುಕೊಂಡು ಹೋಗಿ ಫೋಟೋ ತೆಗೆಸಿಕೊಳ್ಳುತ್ತಾರೆ” ಎಂಬ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಫೋಟೋದೊಂದಿಗೆ,“ಪ್ರಧಾನಿ ಮೋದಿಯವರು ಶೌಚಾಲಯದೊಳಗೆ ತಮ್ಮ ಕೈಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದಿದ್ದಾರೆ” ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗ ಶೌಚಾಲಯದವರೆಗೂ ಕ್ಯಾಮರಾ ತಲುಪಿದೆ” ಎಂದು ವೈರಲ್ ಸಂದೇಶ ಹೇಳಿದೆ. ಇದನ್ನು 228 ಜನರು ಈವರೆ ಹಂಚಿಕೊಂಡಿದ್ದಾರೆ. ವಾಸ್ತವದಲ್ಲಿ ಈ ಚಿತ್ರ ಶೌಚಾಲಯದಲ್ಲಿ ಕ್ಲಿಕ್ ಮಾಡಿದ್ದೇ ಎಂಬುದನ್ನು ಪರಿಶೀಲಿಸೋಣ… | ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು! |

ಫ್ಯಾಕ್ಟ್‌ಚೆಕ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೊವನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವೂ 20 ಡಿಸೆಂಬರ್ 2020 ರಂದು ‘ದಿ ಫ್ರೀ ಪ್ರೆಸ್ ಜರ್ನಲ್‘ ಪ್ರಕಟಿಸಿದ ಲೇಖನದಲ್ಲಿ ಕಂಡು ಬಂದಿದೆ.

ಈ ವರದಿಯ ಪ್ರಕಾರ, ಚಿತ್ರವೂ ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿದಾಗ ಸೆರೆಹಿಡಿದಿರುವುದಾಗಿದೆ. ದೆಹಲಿಯ ರಾಕಬ್ ಗಂಜ್ ಸಾಹಿಬ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪರ್ವ್ ಸಂದರ್ಭದಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

ಚಿತ್ರದಲ್ಲಿ, ಪ್ರಧಾನಿ ಮೋದಿ ತಮ್ಮ ಕೈಗಳನ್ನು ಸ್ವಚ್ಛಗೊಳಿಸುವ ವಾಷಿಂಗ್ ಬೇಸಿನ್ ಪಕ್ಕದಲ್ಲಿ ಮೆಟ್ಟಿಲುಗಳು ಕೂಡಾ ಕಾಣಿಸುತ್ತದೆ.

ಮೆಟ್ಟಿಲುಗಳ ಹಿನ್ನಲೆಯಲ್ಲಿ ಇದನ್ನು ಪರಿಶೀಲಿಸಿದಾಗ 2020 ರ ಡಿಸೆಂಬರ್‌ನಲ್ಲಿ ದೆಹಲಿಯ ಗುರುದ್ವಾರ ರಕಬ್ ಗಂಜ್ ಸಾಹಿಬ್‌ನ ಪ್ರವೇಶದ್ವಾರದಲ್ಲಿ ಪ್ರಧಾನಿ ಮೋದಿ ಕೈ ತೊಳೆಯುತ್ತಿದ್ದಾಗ ಈ ಚಿತ್ರವನ್ನು ಕ್ಲಿಕ್ ಮಾಡಲಾಗಿದೆ. | ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ? |

ಪ್ರಧಾನಿ ಕೈ ತೊಳೆಯುತ್ತಿರುವ ಜಾಗವೂ ಗುರುದ್ವಾರದಲ್ಲಿ ಸಾರ್ವಜನಿಕವಾಗಿ ಕೈ ತೊಳೆಯುವ ಪ್ರದೇಶವಾಗಿದೆ. ಸಂಪ್ರದಾಯದಂತೆ ಗುರುದ್ವಾರಕ್ಕೆ ಪ್ರವೇಶಿಸುವ ಮೊದಲು ಭಕ್ತರು ಕೈಕಾಲು ತೊಳೆದು ನಂತರ ಪ್ರವೇಶಿಸುತ್ತಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರು ಗುರುದ್ವಾರದ ಪ್ರವೇಶದ್ವಾರದಲ್ಲಿ ಕೈ ತೊಳೆಯುತ್ತಿರುವ ಚಿತ್ರವನ್ನು, “ಪ್ರಧಾನಿಯ ಕ್ಯಾಮರಾ ಶೌಚಾಲಯದ ವರೆಗೆ ತಲುಪಿದೆ” ಎಂದು ಪ್ರಧಾನಿ ತಮ್ಮ ಕ್ಯಾಮರಾ ಮೆನ್‌ ಅನ್ನು ಶೌಚಾಲಯದ ಒಳಗೆ ಕೂಡಾ ಕರೆದುಕೊಂಡು ಹೋಗಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ವಾಸ್ತವದಲ್ಲಿ ಇದು ಗುರುದ್ವಾರ ಪ್ರವೇಶಕ್ಕೆ ಮುನ್ನ ಕೈತೊಳೆಯುತ್ತಿರುವ ವೇಳೆ ಕ್ಲಿಕ್ ಮಾಡಿರುವ ಚಿತ್ರವಾಗಿದೆ.
ಕೃಪೆ: ಫ್ಯಾಕ್ಟ್‌ಲಿ
ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...