Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

- Advertisement -
- Advertisement -

ಪ್ರಧಾನಿ ಮೋದಿಯವರು ವಾಷಿಂಗ್ ಬೇಸನ್‌ನಲ್ಲಿ ಕೈತೊಳೆಯುತ್ತಿರುವ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಪ್ರಧಾನಿ ಮೋದಿ ಈಗ ತಮ್ಮ ಕ್ಯಾಮರಾಮನ್‌ನನ್ನು ಟಾಯ್ಲೆಟ್‌ಗೂ ಜೊತೆಯಲ್ಲಿ ಕರೆದುಕೊಂಡು ಹೋಗಿ ಫೋಟೋ ತೆಗೆಸಿಕೊಳ್ಳುತ್ತಾರೆ” ಎಂಬ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಫೋಟೋದೊಂದಿಗೆ,“ಪ್ರಧಾನಿ ಮೋದಿಯವರು ಶೌಚಾಲಯದೊಳಗೆ ತಮ್ಮ ಕೈಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದಿದ್ದಾರೆ” ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗ ಶೌಚಾಲಯದವರೆಗೂ ಕ್ಯಾಮರಾ ತಲುಪಿದೆ” ಎಂದು ವೈರಲ್ ಸಂದೇಶ ಹೇಳಿದೆ. ಇದನ್ನು 228 ಜನರು ಈವರೆ ಹಂಚಿಕೊಂಡಿದ್ದಾರೆ. ವಾಸ್ತವದಲ್ಲಿ ಈ ಚಿತ್ರ ಶೌಚಾಲಯದಲ್ಲಿ ಕ್ಲಿಕ್ ಮಾಡಿದ್ದೇ ಎಂಬುದನ್ನು ಪರಿಶೀಲಿಸೋಣ… | ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು! |

ಫ್ಯಾಕ್ಟ್‌ಚೆಕ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೊವನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವೂ 20 ಡಿಸೆಂಬರ್ 2020 ರಂದು ‘ದಿ ಫ್ರೀ ಪ್ರೆಸ್ ಜರ್ನಲ್‘ ಪ್ರಕಟಿಸಿದ ಲೇಖನದಲ್ಲಿ ಕಂಡು ಬಂದಿದೆ.

ಈ ವರದಿಯ ಪ್ರಕಾರ, ಚಿತ್ರವೂ ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿದಾಗ ಸೆರೆಹಿಡಿದಿರುವುದಾಗಿದೆ. ದೆಹಲಿಯ ರಾಕಬ್ ಗಂಜ್ ಸಾಹಿಬ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪರ್ವ್ ಸಂದರ್ಭದಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

ಚಿತ್ರದಲ್ಲಿ, ಪ್ರಧಾನಿ ಮೋದಿ ತಮ್ಮ ಕೈಗಳನ್ನು ಸ್ವಚ್ಛಗೊಳಿಸುವ ವಾಷಿಂಗ್ ಬೇಸಿನ್ ಪಕ್ಕದಲ್ಲಿ ಮೆಟ್ಟಿಲುಗಳು ಕೂಡಾ ಕಾಣಿಸುತ್ತದೆ.

ಮೆಟ್ಟಿಲುಗಳ ಹಿನ್ನಲೆಯಲ್ಲಿ ಇದನ್ನು ಪರಿಶೀಲಿಸಿದಾಗ 2020 ರ ಡಿಸೆಂಬರ್‌ನಲ್ಲಿ ದೆಹಲಿಯ ಗುರುದ್ವಾರ ರಕಬ್ ಗಂಜ್ ಸಾಹಿಬ್‌ನ ಪ್ರವೇಶದ್ವಾರದಲ್ಲಿ ಪ್ರಧಾನಿ ಮೋದಿ ಕೈ ತೊಳೆಯುತ್ತಿದ್ದಾಗ ಈ ಚಿತ್ರವನ್ನು ಕ್ಲಿಕ್ ಮಾಡಲಾಗಿದೆ. | ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ? |

ಪ್ರಧಾನಿ ಕೈ ತೊಳೆಯುತ್ತಿರುವ ಜಾಗವೂ ಗುರುದ್ವಾರದಲ್ಲಿ ಸಾರ್ವಜನಿಕವಾಗಿ ಕೈ ತೊಳೆಯುವ ಪ್ರದೇಶವಾಗಿದೆ. ಸಂಪ್ರದಾಯದಂತೆ ಗುರುದ್ವಾರಕ್ಕೆ ಪ್ರವೇಶಿಸುವ ಮೊದಲು ಭಕ್ತರು ಕೈಕಾಲು ತೊಳೆದು ನಂತರ ಪ್ರವೇಶಿಸುತ್ತಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರು ಗುರುದ್ವಾರದ ಪ್ರವೇಶದ್ವಾರದಲ್ಲಿ ಕೈ ತೊಳೆಯುತ್ತಿರುವ ಚಿತ್ರವನ್ನು, “ಪ್ರಧಾನಿಯ ಕ್ಯಾಮರಾ ಶೌಚಾಲಯದ ವರೆಗೆ ತಲುಪಿದೆ” ಎಂದು ಪ್ರಧಾನಿ ತಮ್ಮ ಕ್ಯಾಮರಾ ಮೆನ್‌ ಅನ್ನು ಶೌಚಾಲಯದ ಒಳಗೆ ಕೂಡಾ ಕರೆದುಕೊಂಡು ಹೋಗಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ವಾಸ್ತವದಲ್ಲಿ ಇದು ಗುರುದ್ವಾರ ಪ್ರವೇಶಕ್ಕೆ ಮುನ್ನ ಕೈತೊಳೆಯುತ್ತಿರುವ ವೇಳೆ ಕ್ಲಿಕ್ ಮಾಡಿರುವ ಚಿತ್ರವಾಗಿದೆ.
ಕೃಪೆ: ಫ್ಯಾಕ್ಟ್‌ಲಿ
ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....