Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

- Advertisement -
- Advertisement -

ಪ್ರಧಾನಿ ಮೋದಿಯವರು ವಾಷಿಂಗ್ ಬೇಸನ್‌ನಲ್ಲಿ ಕೈತೊಳೆಯುತ್ತಿರುವ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಪ್ರಧಾನಿ ಮೋದಿ ಈಗ ತಮ್ಮ ಕ್ಯಾಮರಾಮನ್‌ನನ್ನು ಟಾಯ್ಲೆಟ್‌ಗೂ ಜೊತೆಯಲ್ಲಿ ಕರೆದುಕೊಂಡು ಹೋಗಿ ಫೋಟೋ ತೆಗೆಸಿಕೊಳ್ಳುತ್ತಾರೆ” ಎಂಬ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಫೋಟೋದೊಂದಿಗೆ,“ಪ್ರಧಾನಿ ಮೋದಿಯವರು ಶೌಚಾಲಯದೊಳಗೆ ತಮ್ಮ ಕೈಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದಿದ್ದಾರೆ” ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗ ಶೌಚಾಲಯದವರೆಗೂ ಕ್ಯಾಮರಾ ತಲುಪಿದೆ” ಎಂದು ವೈರಲ್ ಸಂದೇಶ ಹೇಳಿದೆ. ಇದನ್ನು 228 ಜನರು ಈವರೆ ಹಂಚಿಕೊಂಡಿದ್ದಾರೆ. ವಾಸ್ತವದಲ್ಲಿ ಈ ಚಿತ್ರ ಶೌಚಾಲಯದಲ್ಲಿ ಕ್ಲಿಕ್ ಮಾಡಿದ್ದೇ ಎಂಬುದನ್ನು ಪರಿಶೀಲಿಸೋಣ… | ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು! |

ಫ್ಯಾಕ್ಟ್‌ಚೆಕ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೊವನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವೂ 20 ಡಿಸೆಂಬರ್ 2020 ರಂದು ‘ದಿ ಫ್ರೀ ಪ್ರೆಸ್ ಜರ್ನಲ್‘ ಪ್ರಕಟಿಸಿದ ಲೇಖನದಲ್ಲಿ ಕಂಡು ಬಂದಿದೆ.

ಈ ವರದಿಯ ಪ್ರಕಾರ, ಚಿತ್ರವೂ ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿದಾಗ ಸೆರೆಹಿಡಿದಿರುವುದಾಗಿದೆ. ದೆಹಲಿಯ ರಾಕಬ್ ಗಂಜ್ ಸಾಹಿಬ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪರ್ವ್ ಸಂದರ್ಭದಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

ಚಿತ್ರದಲ್ಲಿ, ಪ್ರಧಾನಿ ಮೋದಿ ತಮ್ಮ ಕೈಗಳನ್ನು ಸ್ವಚ್ಛಗೊಳಿಸುವ ವಾಷಿಂಗ್ ಬೇಸಿನ್ ಪಕ್ಕದಲ್ಲಿ ಮೆಟ್ಟಿಲುಗಳು ಕೂಡಾ ಕಾಣಿಸುತ್ತದೆ.

ಮೆಟ್ಟಿಲುಗಳ ಹಿನ್ನಲೆಯಲ್ಲಿ ಇದನ್ನು ಪರಿಶೀಲಿಸಿದಾಗ 2020 ರ ಡಿಸೆಂಬರ್‌ನಲ್ಲಿ ದೆಹಲಿಯ ಗುರುದ್ವಾರ ರಕಬ್ ಗಂಜ್ ಸಾಹಿಬ್‌ನ ಪ್ರವೇಶದ್ವಾರದಲ್ಲಿ ಪ್ರಧಾನಿ ಮೋದಿ ಕೈ ತೊಳೆಯುತ್ತಿದ್ದಾಗ ಈ ಚಿತ್ರವನ್ನು ಕ್ಲಿಕ್ ಮಾಡಲಾಗಿದೆ. | ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ? |

ಪ್ರಧಾನಿ ಕೈ ತೊಳೆಯುತ್ತಿರುವ ಜಾಗವೂ ಗುರುದ್ವಾರದಲ್ಲಿ ಸಾರ್ವಜನಿಕವಾಗಿ ಕೈ ತೊಳೆಯುವ ಪ್ರದೇಶವಾಗಿದೆ. ಸಂಪ್ರದಾಯದಂತೆ ಗುರುದ್ವಾರಕ್ಕೆ ಪ್ರವೇಶಿಸುವ ಮೊದಲು ಭಕ್ತರು ಕೈಕಾಲು ತೊಳೆದು ನಂತರ ಪ್ರವೇಶಿಸುತ್ತಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರು ಗುರುದ್ವಾರದ ಪ್ರವೇಶದ್ವಾರದಲ್ಲಿ ಕೈ ತೊಳೆಯುತ್ತಿರುವ ಚಿತ್ರವನ್ನು, “ಪ್ರಧಾನಿಯ ಕ್ಯಾಮರಾ ಶೌಚಾಲಯದ ವರೆಗೆ ತಲುಪಿದೆ” ಎಂದು ಪ್ರಧಾನಿ ತಮ್ಮ ಕ್ಯಾಮರಾ ಮೆನ್‌ ಅನ್ನು ಶೌಚಾಲಯದ ಒಳಗೆ ಕೂಡಾ ಕರೆದುಕೊಂಡು ಹೋಗಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ವಾಸ್ತವದಲ್ಲಿ ಇದು ಗುರುದ್ವಾರ ಪ್ರವೇಶಕ್ಕೆ ಮುನ್ನ ಕೈತೊಳೆಯುತ್ತಿರುವ ವೇಳೆ ಕ್ಲಿಕ್ ಮಾಡಿರುವ ಚಿತ್ರವಾಗಿದೆ.
ಕೃಪೆ: ಫ್ಯಾಕ್ಟ್‌ಲಿ
ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...