Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

ಫ್ಯಾಕ್ಟ್‌ಚೆಕ್‌: ಪ್ರಧಾನಿ ಮೋದಿ ಟಾಯ್ಲೆಟ್‌‌ಗೆ ಕೂಡಾ ಕ್ಯಾಮರಾಮ್ಯಾನನ್ನು ಕರೆದುಕೊಂಡು ಹೋದರೆ?

- Advertisement -
- Advertisement -

ಪ್ರಧಾನಿ ಮೋದಿಯವರು ವಾಷಿಂಗ್ ಬೇಸನ್‌ನಲ್ಲಿ ಕೈತೊಳೆಯುತ್ತಿರುವ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಪ್ರಧಾನಿ ಮೋದಿ ಈಗ ತಮ್ಮ ಕ್ಯಾಮರಾಮನ್‌ನನ್ನು ಟಾಯ್ಲೆಟ್‌ಗೂ ಜೊತೆಯಲ್ಲಿ ಕರೆದುಕೊಂಡು ಹೋಗಿ ಫೋಟೋ ತೆಗೆಸಿಕೊಳ್ಳುತ್ತಾರೆ” ಎಂಬ ಹೇಳಿಕೆಯೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಫೋಟೋದೊಂದಿಗೆ,“ಪ್ರಧಾನಿ ಮೋದಿಯವರು ಶೌಚಾಲಯದೊಳಗೆ ತಮ್ಮ ಕೈಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯವನ್ನು ಛಾಯಾಗ್ರಾಹಕರು ಸೆರೆಹಿಡಿದಿದ್ದಾರೆ” ಎಂಬ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗ ಶೌಚಾಲಯದವರೆಗೂ ಕ್ಯಾಮರಾ ತಲುಪಿದೆ” ಎಂದು ವೈರಲ್ ಸಂದೇಶ ಹೇಳಿದೆ. ಇದನ್ನು 228 ಜನರು ಈವರೆ ಹಂಚಿಕೊಂಡಿದ್ದಾರೆ. ವಾಸ್ತವದಲ್ಲಿ ಈ ಚಿತ್ರ ಶೌಚಾಲಯದಲ್ಲಿ ಕ್ಲಿಕ್ ಮಾಡಿದ್ದೇ ಎಂಬುದನ್ನು ಪರಿಶೀಲಿಸೋಣ… | ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು! |

ಫ್ಯಾಕ್ಟ್‌ಚೆಕ್

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೊವನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವೂ 20 ಡಿಸೆಂಬರ್ 2020 ರಂದು ‘ದಿ ಫ್ರೀ ಪ್ರೆಸ್ ಜರ್ನಲ್‘ ಪ್ರಕಟಿಸಿದ ಲೇಖನದಲ್ಲಿ ಕಂಡು ಬಂದಿದೆ.

ಈ ವರದಿಯ ಪ್ರಕಾರ, ಚಿತ್ರವೂ ಪ್ರಧಾನಿ ಮೋದಿ ಗುರುದ್ವಾರಕ್ಕೆ ಭೇಟಿ ನೀಡಿದಾಗ ಸೆರೆಹಿಡಿದಿರುವುದಾಗಿದೆ. ದೆಹಲಿಯ ರಾಕಬ್ ಗಂಜ್ ಸಾಹಿಬ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪರ್ವ್ ಸಂದರ್ಭದಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

ಚಿತ್ರದಲ್ಲಿ, ಪ್ರಧಾನಿ ಮೋದಿ ತಮ್ಮ ಕೈಗಳನ್ನು ಸ್ವಚ್ಛಗೊಳಿಸುವ ವಾಷಿಂಗ್ ಬೇಸಿನ್ ಪಕ್ಕದಲ್ಲಿ ಮೆಟ್ಟಿಲುಗಳು ಕೂಡಾ ಕಾಣಿಸುತ್ತದೆ.

ಮೆಟ್ಟಿಲುಗಳ ಹಿನ್ನಲೆಯಲ್ಲಿ ಇದನ್ನು ಪರಿಶೀಲಿಸಿದಾಗ 2020 ರ ಡಿಸೆಂಬರ್‌ನಲ್ಲಿ ದೆಹಲಿಯ ಗುರುದ್ವಾರ ರಕಬ್ ಗಂಜ್ ಸಾಹಿಬ್‌ನ ಪ್ರವೇಶದ್ವಾರದಲ್ಲಿ ಪ್ರಧಾನಿ ಮೋದಿ ಕೈ ತೊಳೆಯುತ್ತಿದ್ದಾಗ ಈ ಚಿತ್ರವನ್ನು ಕ್ಲಿಕ್ ಮಾಡಲಾಗಿದೆ. | ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ? |

ಪ್ರಧಾನಿ ಕೈ ತೊಳೆಯುತ್ತಿರುವ ಜಾಗವೂ ಗುರುದ್ವಾರದಲ್ಲಿ ಸಾರ್ವಜನಿಕವಾಗಿ ಕೈ ತೊಳೆಯುವ ಪ್ರದೇಶವಾಗಿದೆ. ಸಂಪ್ರದಾಯದಂತೆ ಗುರುದ್ವಾರಕ್ಕೆ ಪ್ರವೇಶಿಸುವ ಮೊದಲು ಭಕ್ತರು ಕೈಕಾಲು ತೊಳೆದು ನಂತರ ಪ್ರವೇಶಿಸುತ್ತಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರು ಗುರುದ್ವಾರದ ಪ್ರವೇಶದ್ವಾರದಲ್ಲಿ ಕೈ ತೊಳೆಯುತ್ತಿರುವ ಚಿತ್ರವನ್ನು, “ಪ್ರಧಾನಿಯ ಕ್ಯಾಮರಾ ಶೌಚಾಲಯದ ವರೆಗೆ ತಲುಪಿದೆ” ಎಂದು ಪ್ರಧಾನಿ ತಮ್ಮ ಕ್ಯಾಮರಾ ಮೆನ್‌ ಅನ್ನು ಶೌಚಾಲಯದ ಒಳಗೆ ಕೂಡಾ ಕರೆದುಕೊಂಡು ಹೋಗಿದ್ದಾರೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ವಾಸ್ತವದಲ್ಲಿ ಇದು ಗುರುದ್ವಾರ ಪ್ರವೇಶಕ್ಕೆ ಮುನ್ನ ಕೈತೊಳೆಯುತ್ತಿರುವ ವೇಳೆ ಕ್ಲಿಕ್ ಮಾಡಿರುವ ಚಿತ್ರವಾಗಿದೆ.
ಕೃಪೆ: ಫ್ಯಾಕ್ಟ್‌ಲಿ
ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 1948 ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಹಣದ ಕೊರತೆಯಿಂದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...