Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...