Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...