Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...