Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...