Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...