Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...