Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...