Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...