Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಭಾರತದ ಮತ್ತು ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.

- Advertisement -
- Advertisement -

ಯಾಂಗ್ ಜಿಯಾನ್ಲಿ ಎಂಬ ಚೀನಾದ ಮಾಜಿ ಅಧಿಕಾರಿ ಗಾಲ್ವಾನ್‌ನಲ್ಲಿ 100 ಚೀನಿಯರು ಸಾವನ್ನಪ್ಪಿದ್ದಾರೆ ಎಂದಿದ್ದಾರೆಂದು ರಿಪಬ್ಲಿಕ್ ಟಿವಿ, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅಸ್ಪಷ್ಟ ವೆಬ್‌ಸೈಟ್ kreately.in ‌ನ ವರದಿಯನ್ನು ಟ್ವೀಟ್ ಮಾಡಿ “ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಚೀನಾದ ಕಮ್ಯುನಿಸ್ಟ್ ಪಕ್ಷದ ನಾಯಕನ ಮಗ ಜಿಯಾನ್ಲಿ ಯಾಂಗ್, ಜೂನ್ 15 ರ ರಾತ್ರಿ ಭಾರತ-ಚೀನಾದ ಸೈನಿಕರ ನಡುವಿನ ಭೀಕರ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಎಂದು ಒಪ್ಪಿಕೊಂಡಿದ್ದಾರೆ.” ಎಂದು ಬರೆದಿದ್ದಾರೆ. ಕಪಿಲ್ ಮಿಶ್ರಾರ ಈ ಟ್ವೀಟ್ 11,700 ಕ್ಕೂ ಹೆಚ್ಚು ಬಾರಿ ರಿಟ್ವೀಟ್‌ ಆಗಿದೆ.

ಜುಲೈ 7 ರಂದು ಪ್ರಕಟವಾದ ರಿಪಬ್ಲಿಕ್ ಟಿವಿ ವರದಿಯಲ್ಲಿ ಕೂಡ ಇದೆ ಮಾಹಿತಿಯನ್ನು ನೀಡಲಾಗಿದೆ. “ಭಾರತ-ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿದ್ದಾರೆ” ಎಂದು ಬರೆದಿದೆ. ಮೈನೇಷನ್ ಕೂಡಾ ರೀತಿಯ ವರದಿಯನ್ನು ಪ್ರಕಟಿಸಿತು.

ರಿಪಬ್ಲಿಕ್ ಟಿವಿಯ ಲೇಖನವು ತ್ಸೈ ಇಂಗ್-ವೆನ್ ಎಂಬ ಖಾತೆಯಿಂದ ಪಡೆದುಕೊಂಡದ್ದಾಗಿದೆ.

ಇದನ್ನು ಮೊದಲಿಗೆ @NewsLineIFE  ಎಂಬ ಟ್ವಿಟ್ಟರ್‌ ಹ್ಯಾಂಡಲ್ ಟ್ವಿಟ್ಟರಿನಲ್ಲಿ ಹಂಚಿತ್ತು.

ಫ್ಯಾಕ್ಟ್‌‌ಚೆಕ್‌:

ಈ ವಿವಾದಾತ್ಮಕ ಸಂದೇಶದ ಎಲ್ಲಾ ವಾದಗಳು ಸಂಶಯಾಸ್ಪದ ವೆಬ್‌ಸೈಟ್‌ಗಳು ಮತ್ತು ಖಾತೆಗಳಿಂದ ಹೊರಹೊಮ್ಮಿದವುಗಳಾಗಿದೆ.

@NewsLineIFE ಎಂಬ ಟ್ವಿಟ್ಟರ್‌‌ ಹ್ಯಾಂಡಲ್ ಈ ಸಂದೇಶವನ್ನು ಮೊದಲ ಬಾರಿಗೆ ಹಂಚಿಕೊಂಡಿತು. ಜುಲೈ 2 ರಂದು ಈ ಹ್ಯಾಂಡಲ್ ಚೀನಾದ ಐವರು ಸೈನಿಕರು ಸಾವನ್ನಪ್ಪಿದರು ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂಬ ಆಧಾರರಹಿತವಾಗಿ ಬರೆದಿತ್ತು. ಅದರ ನಂತರ ಚೀನಾದ 43 ಸೈನಿಕರು ಕೊಲ್ಲಲ್ಪಟ್ಟರು ಎಂದು ಟ್ವೀಟ್ ಮಾಡಿತ್ತು ಆದರೆ ಎರಡೂ ಟ್ವೀಟ್‌ಗಳನ್ನು ಈಗ ಅಳಿಸಲಾಗಿದೆ.

@NewsLineIFE  ಈ ಸುದ್ದಿಯನ್ನು ಟ್ವೀಟ್ ಮಾಡುವಾಗ @drapr007 ಎಂಬ ಟ್ವಿಟ್ಟರ್‌ ಹ್ಯಾಂಡಲ್‌ಅನ್ನು ಟ್ಯಾಗ್ ಮಾಡಿತ್ತು. ಈ ಹ್ಯಾಂಡಲ್ ಈ ವಿಚಾರವನ್ನು ಜುಲೈ 1 ರಂದು ಅಂದರೆ ಒಂದು ದಿನದ ಹಿಂದೆಯೇ  ಬರೆದಿತ್ತು.

ಇದಲ್ಲದೆ 100 ಚೀನೀ ಸೈನಿಕರ ಸಾವುಗಳ ಕುರಿತು ಲೇಖನವನ್ನು ಪ್ರಕಟಿಸಿದ ವೆಬ್‌ಸೈಟ್ kreately.in ಹೊಸದಾಗಿ ರಚಿಸಲಾದ ಸಾಮಾಜಿಕ ಜಾಲತಾಣದ ವೇದಿಕೆಯಾಗಿದೆ. ಅದರ ಟ್ವಿಟರ್ ಬಯೋ “ ನೀವೆ ಪ್ರಕಟಿಸಿ, ಸೈನ್‌ಅಪ್ ಮಾಡಿ ಮತ್ತು ಬರಹಗಾರರಾಗಿ, ಈಗಿದು ಸುಲಭ…” ಎಂದು ಬರೆದಿದೆ. ಈ ವೆಬ್‌ಸೈಟ್ ಪತ್ರಿಕೋದ್ಯಮದ ವೇದಿಕೆಯಲ್ಲ, ಅದು ಬಳಕೆದಾರರು ಕಳುಹಿಸಿದ ವಿಷಯವನ್ನು ಪ್ರಕಟಿಸುತ್ತದೆ. ಅಲ್ಲದೆ ಇದನ್ನು ಯಾರು ನಡೆಸುತ್ತಿದ್ದಾರೆ ಹಾಗೂ ಅವರ ವಿಳಾಸದಂತಹ ಯಾವುದೆ ಮಾಹಿತಿಯನ್ನು ಅದು ಹೊಂದಿಲ್ಲ.

ಅಷ್ಟೇ ಅಲ್ಲದೆ ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಂನ ಲೇಖನವನ್ನು ಹಲವಾರು ವ್ಯಕ್ತಿಗಳು ಹಂಚಿಕೊಂಡಿದ್ದು, 100 ಚೀನೀ ಸೈನಿಕರನ್ನು ಭಾರತೀಯ ಸೇನೆಯಿಂದ ಕೊಲ್ಲಲಾಗಿದೆ ಎಂದು ವೆಬ್‌ಸೈಟ್ ಹೇಳಿಕೊಂಡಿದೆ ಮತ್ತು ಜಿಯಾನ್ಲಿ ಯಾಂಗ್ ಅವರ ವಾಷಿಂಗ್ಟನ್ ಟೈಮ್ಸ್ ಅಭಿಪ್ರಾಯವನ್ನು ಈ ವೆಬ್‌ಸೈಟ್‌ ಉಲ್ಲೇಖಿಸಿದೆ.

ವಾಷಿಂಗ್ಟನ್ ಟೈಮ್ಸ್ ನಲ್ಲಿ ಯಾಂಗ್ ಜಿಯಾನ್ಲಿಯ ಅಭಿಪ್ರಾಯದ ತುಣುಕು

ಯಾಂಗ್ ಜಿಯಾನ್ಲಿ ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನೀ ಸೈನಿಕರು ಸಾವನ್ನಪ್ಪಿದ್ದಾರೆಂದು ಮುಖ್ಯವಾಹಿನಿಯಲ್ಲಿ ಇಲ್ಲದ, ನಂಬಲರ್ಹವಲ್ಲದ ಮಾಧ್ಯಮಗಳು ಹೇಳಿವೆ ಎಂದು ಆಲ್ಟ್ ನ್ಯೂಸ್ ಕಂಡುಹಿಡಿದಿದೆ.

ಜಿಯಾನ್ಲಿ ನಿಜಕ್ಕೂ ಮಾಜಿ ಸಿಪಿಸಿ ನಾಯಕ ಯಾಂಗ್ ಫೆಂಗ್‌ಶೂನ್‌ರ ಮಗನಾಗಿದ್ದರೂ, ಅವರು ಚೀನಾದ ಮಾಜಿ ಮಿಲಿಟರಿ ನಾಯಕನಲ್ಲ. ಜಿಯಾನ್ಲಿ ವಾಸ್ತವವಾಗಿ ಅಮೆರಿಕಾದಲ್ಲಿ ವಾಸಿಸುವ ಚೀನಾದ ಭಿನ್ನಮತೀಯ ಆಗಿದ್ದರೆ. ಅವರು ಅಮೆರಿಕಾದಲ್ಲಿ ಅಧ್ಯಯನ ಮಾಡಿದ ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. ಇವರು ಮಾಜಿ ಟಿಯಾನನ್ಮೆನ್ ಸ್ಕ್ವೇರ್ ಕಾರ್ಯಕರ್ತರಾಗಿದ್ದು, ಕಾರ್ಮಿಕ ಅಶಾಂತಿಯ ಧ್ವನಿಯೆತ್ತಲು ಯತ್ನಿಸಿದ್ದಕ್ಕಾಗಿ 2002 ರಲ್ಲಿ ಚೀನಾ ಸರ್ಕಾರವು ಜೈಲಿಗಟ್ಟಿತ್ತು ಹಾಗೂ 2007 ರಲ್ಲಿ ಬಿಡುಗಡೆಯಾಗಿದ್ದರು.

ಇಂಡೋ-ಚೀನಾ ಘರ್ಷಣೆಗಳ ಕುರಿತು ಅವರು ಇತ್ತೀಚೆಗೆ ದಿ ವಾಷಿಂಗ್ಟನ್ ಟೈಮ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಬರೆದಿದ್ದು, ಅದರಲ್ಲಿ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಚೀನಾದ ಸಾವಿನ ಸಂಖ್ಯೆಯನ್ನು ಒಪ್ಪಿಕೊಂಡಿಲ್ಲ ಹಾಗೂ ಕನಿಷ್ಠ 40 ಚೀನಾ ಸೈನಿಕರ ಸಾವುಗಳ ಬಗ್ಗೆ ಭಾರತೀಯ ವರದಿಗಳು “ಸುಳ್ಳು ಮಾಹಿತಿ” ಎಂದು ಬರೆದಿದ್ದರು.

“ಯಾವ ದೇಶವು ತನ್ನ ಗಡಿಯಲ್ಲಿರುವ ಸಮವಸ್ತ್ರಧಾರಿ ಸೈನಿಕರ ಹುತಾತ್ಮತೆಯನ್ನು ಅಂಗೀಕರಿಸುವುದಿಲ್ಲ, ಅವರಿಗೆ ಗೌರವಾನ್ವಿತ ಕೊನೆಯ ಗೌರವ ಸಲ್ಲಿಸಲಿ. ಚೀನಾ ತಾನು ಸೈನ್ಯವನ್ನು ಎದುರಾಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಳೆದುಕೊಂಡೆ ಎಂದು ಒಪ್ಪಿಕೊಳ್ಳುವುದು ಆಂತರಿಕ ಅಶಾಂತಿಗೆ ಕಾರಣವಾಗಬಹುದು ಎಂಬ ಭಯದಲ್ಲಿ ತತ್ತರಿಸಿದೆ” ಎಂದು ಜಿಯಾನ್ಲಿ ಬರೆದಿದ್ದಾರೆ.

ಈ ವರದಿಯಲ್ಲಿ ಎಲ್ಲಿಯೂ ಚೀನಾದ ಸೈನಿಕರ ಸಾವಿಗೆ ಸಂಖ್ಯೆಯನ್ನು ಜಿಯಾನ್ಲಿ ಉಲ್ಲೇಖಿಸಿಲ್ಲ.

ನಕಲಿ ಟ್ವಿಟ್ಟರ್‌ ಖಾತೆಯಿಂದ ಸುದ್ದಿಯನ್ನು ಪಡೆದ ರಿಪಬ್ಲಿಕ್ ಟಿವಿ.

ರಿಪಬ್ಲಿಕ್ ಟಿವಿ @tsaiing_wen ಎಂಬ ಖಾತೆಯಿಂದ ಸುದ್ದಿಯನ್ನು ಪಡೆದಿದೆ. ಇದು ಚೀನಾ ಗಣರಾಜ್ಯದ (ತೈವಾನ್) ಅಧ್ಯಕ್ಷರದ್ದೆಂದು ಹೇಳುವ ನಕಲಿ ಖಾತೆಯಾಗಿದೆ. ಇದರಲ್ಲಿ ಟ್ವಿಟ್ಟರ್‌ ಪರಿಶೀಲನೆಯ ನೀಲಿ ಟಿಕ್ ಇಲ್ಲ.

ವೈರಲ್ ಸಂದೇಶದಲ್ಲಿ ಬಳಸಲಾದ ಜಿಯಾನ್ಲಿಯ ಹಳೆಯ ಫೋಟೋಗಳು

ಜಾಗತಿಕ ಮಾನವ ಹಕ್ಕುಗಳ ಕುರಿತ ಯುಎಸ್ ಹೌಸ್ ಉಪಸಮಿತಿಯ ಮುಂದೆ ಚೀನಾದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಹೇಳುತ್ತಿರುವ 2013 ರ ಫೋಟೋವನ್ನು kreately.com ಬಳಸಿದೆ.

ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಮ್ ಬಳಸಿದ ಚಿತ್ರ ಕೂಡಾ ವಿಕಿಪೀಡಿಯಾದಿಂದ ಪಡೆಯಲಾಗಿದೆ. ಅದರ ವಿವರಣೆಯ ಪ್ರಕಾರ, “ಯು.ಎಸ್. ಕಾಂಗ್ರೆಸ್ ರೇಬರ್ನ್ ಹೌಸ್ ಆಫೀಸ್ ಕಟ್ಟಡದಲ್ಲಿ ನಡೆದ 13 ನೇ ಇಂಟೆರೆಥ್ನಿಕ್ ಇಂಟರ್ ಫೇಯ್ತ್ ಲೀಡರ್ಶಿಪ್ ಕಾನ್ಫರೆನ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಡಾ. ಯಾಂಗ್ ಜಿಯಾನ್ಲಿಯವರ ಚಿತ್ರ. ಡಿಸೆಂಬರ್ 10, 2018.” ಎಂದು ಹೇಳಿದೆ.

 ಸುಳ್ಳು ಸುದ್ದಿಗಳ ತಂಡಗಳು

ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿತ್ತು. ಇದನ್ನು ಹಂಚಿದವರಲ್ಲಿ ಜಿಡಿ ಬಕ್ಷಿ, ರಮೇಶ್ ಸೋಲಂಕಿ, ಚಯಾನ್ ಚಟರ್ಜಿ ಪ್ರಮುಖರಾಗಿದ್ದಾರೆ. ಇವರಲ್ಲಿ ಹೆಚ್ಚಿನವರು newscast-pratyakhsha.com ಎಂಬ ವೆಬ್‌ಸೈಟಿನ ಆಧಾರವಿಲ್ಲದ ಸುದ್ದಿಗಳನ್ನು ಹಂಚಿದ್ದಾರೆ.


ಓದಿ: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...