Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಭಾರತದ ಮತ್ತು ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.

- Advertisement -
- Advertisement -

ಯಾಂಗ್ ಜಿಯಾನ್ಲಿ ಎಂಬ ಚೀನಾದ ಮಾಜಿ ಅಧಿಕಾರಿ ಗಾಲ್ವಾನ್‌ನಲ್ಲಿ 100 ಚೀನಿಯರು ಸಾವನ್ನಪ್ಪಿದ್ದಾರೆ ಎಂದಿದ್ದಾರೆಂದು ರಿಪಬ್ಲಿಕ್ ಟಿವಿ, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅಸ್ಪಷ್ಟ ವೆಬ್‌ಸೈಟ್ kreately.in ‌ನ ವರದಿಯನ್ನು ಟ್ವೀಟ್ ಮಾಡಿ “ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಚೀನಾದ ಕಮ್ಯುನಿಸ್ಟ್ ಪಕ್ಷದ ನಾಯಕನ ಮಗ ಜಿಯಾನ್ಲಿ ಯಾಂಗ್, ಜೂನ್ 15 ರ ರಾತ್ರಿ ಭಾರತ-ಚೀನಾದ ಸೈನಿಕರ ನಡುವಿನ ಭೀಕರ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಎಂದು ಒಪ್ಪಿಕೊಂಡಿದ್ದಾರೆ.” ಎಂದು ಬರೆದಿದ್ದಾರೆ. ಕಪಿಲ್ ಮಿಶ್ರಾರ ಈ ಟ್ವೀಟ್ 11,700 ಕ್ಕೂ ಹೆಚ್ಚು ಬಾರಿ ರಿಟ್ವೀಟ್‌ ಆಗಿದೆ.

ಜುಲೈ 7 ರಂದು ಪ್ರಕಟವಾದ ರಿಪಬ್ಲಿಕ್ ಟಿವಿ ವರದಿಯಲ್ಲಿ ಕೂಡ ಇದೆ ಮಾಹಿತಿಯನ್ನು ನೀಡಲಾಗಿದೆ. “ಭಾರತ-ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿದ್ದಾರೆ” ಎಂದು ಬರೆದಿದೆ. ಮೈನೇಷನ್ ಕೂಡಾ ರೀತಿಯ ವರದಿಯನ್ನು ಪ್ರಕಟಿಸಿತು.

ರಿಪಬ್ಲಿಕ್ ಟಿವಿಯ ಲೇಖನವು ತ್ಸೈ ಇಂಗ್-ವೆನ್ ಎಂಬ ಖಾತೆಯಿಂದ ಪಡೆದುಕೊಂಡದ್ದಾಗಿದೆ.

ಇದನ್ನು ಮೊದಲಿಗೆ @NewsLineIFE  ಎಂಬ ಟ್ವಿಟ್ಟರ್‌ ಹ್ಯಾಂಡಲ್ ಟ್ವಿಟ್ಟರಿನಲ್ಲಿ ಹಂಚಿತ್ತು.

ಫ್ಯಾಕ್ಟ್‌‌ಚೆಕ್‌:

ಈ ವಿವಾದಾತ್ಮಕ ಸಂದೇಶದ ಎಲ್ಲಾ ವಾದಗಳು ಸಂಶಯಾಸ್ಪದ ವೆಬ್‌ಸೈಟ್‌ಗಳು ಮತ್ತು ಖಾತೆಗಳಿಂದ ಹೊರಹೊಮ್ಮಿದವುಗಳಾಗಿದೆ.

@NewsLineIFE ಎಂಬ ಟ್ವಿಟ್ಟರ್‌‌ ಹ್ಯಾಂಡಲ್ ಈ ಸಂದೇಶವನ್ನು ಮೊದಲ ಬಾರಿಗೆ ಹಂಚಿಕೊಂಡಿತು. ಜುಲೈ 2 ರಂದು ಈ ಹ್ಯಾಂಡಲ್ ಚೀನಾದ ಐವರು ಸೈನಿಕರು ಸಾವನ್ನಪ್ಪಿದರು ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂಬ ಆಧಾರರಹಿತವಾಗಿ ಬರೆದಿತ್ತು. ಅದರ ನಂತರ ಚೀನಾದ 43 ಸೈನಿಕರು ಕೊಲ್ಲಲ್ಪಟ್ಟರು ಎಂದು ಟ್ವೀಟ್ ಮಾಡಿತ್ತು ಆದರೆ ಎರಡೂ ಟ್ವೀಟ್‌ಗಳನ್ನು ಈಗ ಅಳಿಸಲಾಗಿದೆ.

@NewsLineIFE  ಈ ಸುದ್ದಿಯನ್ನು ಟ್ವೀಟ್ ಮಾಡುವಾಗ @drapr007 ಎಂಬ ಟ್ವಿಟ್ಟರ್‌ ಹ್ಯಾಂಡಲ್‌ಅನ್ನು ಟ್ಯಾಗ್ ಮಾಡಿತ್ತು. ಈ ಹ್ಯಾಂಡಲ್ ಈ ವಿಚಾರವನ್ನು ಜುಲೈ 1 ರಂದು ಅಂದರೆ ಒಂದು ದಿನದ ಹಿಂದೆಯೇ  ಬರೆದಿತ್ತು.

ಇದಲ್ಲದೆ 100 ಚೀನೀ ಸೈನಿಕರ ಸಾವುಗಳ ಕುರಿತು ಲೇಖನವನ್ನು ಪ್ರಕಟಿಸಿದ ವೆಬ್‌ಸೈಟ್ kreately.in ಹೊಸದಾಗಿ ರಚಿಸಲಾದ ಸಾಮಾಜಿಕ ಜಾಲತಾಣದ ವೇದಿಕೆಯಾಗಿದೆ. ಅದರ ಟ್ವಿಟರ್ ಬಯೋ “ ನೀವೆ ಪ್ರಕಟಿಸಿ, ಸೈನ್‌ಅಪ್ ಮಾಡಿ ಮತ್ತು ಬರಹಗಾರರಾಗಿ, ಈಗಿದು ಸುಲಭ…” ಎಂದು ಬರೆದಿದೆ. ಈ ವೆಬ್‌ಸೈಟ್ ಪತ್ರಿಕೋದ್ಯಮದ ವೇದಿಕೆಯಲ್ಲ, ಅದು ಬಳಕೆದಾರರು ಕಳುಹಿಸಿದ ವಿಷಯವನ್ನು ಪ್ರಕಟಿಸುತ್ತದೆ. ಅಲ್ಲದೆ ಇದನ್ನು ಯಾರು ನಡೆಸುತ್ತಿದ್ದಾರೆ ಹಾಗೂ ಅವರ ವಿಳಾಸದಂತಹ ಯಾವುದೆ ಮಾಹಿತಿಯನ್ನು ಅದು ಹೊಂದಿಲ್ಲ.

ಅಷ್ಟೇ ಅಲ್ಲದೆ ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಂನ ಲೇಖನವನ್ನು ಹಲವಾರು ವ್ಯಕ್ತಿಗಳು ಹಂಚಿಕೊಂಡಿದ್ದು, 100 ಚೀನೀ ಸೈನಿಕರನ್ನು ಭಾರತೀಯ ಸೇನೆಯಿಂದ ಕೊಲ್ಲಲಾಗಿದೆ ಎಂದು ವೆಬ್‌ಸೈಟ್ ಹೇಳಿಕೊಂಡಿದೆ ಮತ್ತು ಜಿಯಾನ್ಲಿ ಯಾಂಗ್ ಅವರ ವಾಷಿಂಗ್ಟನ್ ಟೈಮ್ಸ್ ಅಭಿಪ್ರಾಯವನ್ನು ಈ ವೆಬ್‌ಸೈಟ್‌ ಉಲ್ಲೇಖಿಸಿದೆ.

ವಾಷಿಂಗ್ಟನ್ ಟೈಮ್ಸ್ ನಲ್ಲಿ ಯಾಂಗ್ ಜಿಯಾನ್ಲಿಯ ಅಭಿಪ್ರಾಯದ ತುಣುಕು

ಯಾಂಗ್ ಜಿಯಾನ್ಲಿ ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನೀ ಸೈನಿಕರು ಸಾವನ್ನಪ್ಪಿದ್ದಾರೆಂದು ಮುಖ್ಯವಾಹಿನಿಯಲ್ಲಿ ಇಲ್ಲದ, ನಂಬಲರ್ಹವಲ್ಲದ ಮಾಧ್ಯಮಗಳು ಹೇಳಿವೆ ಎಂದು ಆಲ್ಟ್ ನ್ಯೂಸ್ ಕಂಡುಹಿಡಿದಿದೆ.

ಜಿಯಾನ್ಲಿ ನಿಜಕ್ಕೂ ಮಾಜಿ ಸಿಪಿಸಿ ನಾಯಕ ಯಾಂಗ್ ಫೆಂಗ್‌ಶೂನ್‌ರ ಮಗನಾಗಿದ್ದರೂ, ಅವರು ಚೀನಾದ ಮಾಜಿ ಮಿಲಿಟರಿ ನಾಯಕನಲ್ಲ. ಜಿಯಾನ್ಲಿ ವಾಸ್ತವವಾಗಿ ಅಮೆರಿಕಾದಲ್ಲಿ ವಾಸಿಸುವ ಚೀನಾದ ಭಿನ್ನಮತೀಯ ಆಗಿದ್ದರೆ. ಅವರು ಅಮೆರಿಕಾದಲ್ಲಿ ಅಧ್ಯಯನ ಮಾಡಿದ ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. ಇವರು ಮಾಜಿ ಟಿಯಾನನ್ಮೆನ್ ಸ್ಕ್ವೇರ್ ಕಾರ್ಯಕರ್ತರಾಗಿದ್ದು, ಕಾರ್ಮಿಕ ಅಶಾಂತಿಯ ಧ್ವನಿಯೆತ್ತಲು ಯತ್ನಿಸಿದ್ದಕ್ಕಾಗಿ 2002 ರಲ್ಲಿ ಚೀನಾ ಸರ್ಕಾರವು ಜೈಲಿಗಟ್ಟಿತ್ತು ಹಾಗೂ 2007 ರಲ್ಲಿ ಬಿಡುಗಡೆಯಾಗಿದ್ದರು.

ಇಂಡೋ-ಚೀನಾ ಘರ್ಷಣೆಗಳ ಕುರಿತು ಅವರು ಇತ್ತೀಚೆಗೆ ದಿ ವಾಷಿಂಗ್ಟನ್ ಟೈಮ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಬರೆದಿದ್ದು, ಅದರಲ್ಲಿ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಚೀನಾದ ಸಾವಿನ ಸಂಖ್ಯೆಯನ್ನು ಒಪ್ಪಿಕೊಂಡಿಲ್ಲ ಹಾಗೂ ಕನಿಷ್ಠ 40 ಚೀನಾ ಸೈನಿಕರ ಸಾವುಗಳ ಬಗ್ಗೆ ಭಾರತೀಯ ವರದಿಗಳು “ಸುಳ್ಳು ಮಾಹಿತಿ” ಎಂದು ಬರೆದಿದ್ದರು.

“ಯಾವ ದೇಶವು ತನ್ನ ಗಡಿಯಲ್ಲಿರುವ ಸಮವಸ್ತ್ರಧಾರಿ ಸೈನಿಕರ ಹುತಾತ್ಮತೆಯನ್ನು ಅಂಗೀಕರಿಸುವುದಿಲ್ಲ, ಅವರಿಗೆ ಗೌರವಾನ್ವಿತ ಕೊನೆಯ ಗೌರವ ಸಲ್ಲಿಸಲಿ. ಚೀನಾ ತಾನು ಸೈನ್ಯವನ್ನು ಎದುರಾಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಳೆದುಕೊಂಡೆ ಎಂದು ಒಪ್ಪಿಕೊಳ್ಳುವುದು ಆಂತರಿಕ ಅಶಾಂತಿಗೆ ಕಾರಣವಾಗಬಹುದು ಎಂಬ ಭಯದಲ್ಲಿ ತತ್ತರಿಸಿದೆ” ಎಂದು ಜಿಯಾನ್ಲಿ ಬರೆದಿದ್ದಾರೆ.

ಈ ವರದಿಯಲ್ಲಿ ಎಲ್ಲಿಯೂ ಚೀನಾದ ಸೈನಿಕರ ಸಾವಿಗೆ ಸಂಖ್ಯೆಯನ್ನು ಜಿಯಾನ್ಲಿ ಉಲ್ಲೇಖಿಸಿಲ್ಲ.

ನಕಲಿ ಟ್ವಿಟ್ಟರ್‌ ಖಾತೆಯಿಂದ ಸುದ್ದಿಯನ್ನು ಪಡೆದ ರಿಪಬ್ಲಿಕ್ ಟಿವಿ.

ರಿಪಬ್ಲಿಕ್ ಟಿವಿ @tsaiing_wen ಎಂಬ ಖಾತೆಯಿಂದ ಸುದ್ದಿಯನ್ನು ಪಡೆದಿದೆ. ಇದು ಚೀನಾ ಗಣರಾಜ್ಯದ (ತೈವಾನ್) ಅಧ್ಯಕ್ಷರದ್ದೆಂದು ಹೇಳುವ ನಕಲಿ ಖಾತೆಯಾಗಿದೆ. ಇದರಲ್ಲಿ ಟ್ವಿಟ್ಟರ್‌ ಪರಿಶೀಲನೆಯ ನೀಲಿ ಟಿಕ್ ಇಲ್ಲ.

ವೈರಲ್ ಸಂದೇಶದಲ್ಲಿ ಬಳಸಲಾದ ಜಿಯಾನ್ಲಿಯ ಹಳೆಯ ಫೋಟೋಗಳು

ಜಾಗತಿಕ ಮಾನವ ಹಕ್ಕುಗಳ ಕುರಿತ ಯುಎಸ್ ಹೌಸ್ ಉಪಸಮಿತಿಯ ಮುಂದೆ ಚೀನಾದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಹೇಳುತ್ತಿರುವ 2013 ರ ಫೋಟೋವನ್ನು kreately.com ಬಳಸಿದೆ.

ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಮ್ ಬಳಸಿದ ಚಿತ್ರ ಕೂಡಾ ವಿಕಿಪೀಡಿಯಾದಿಂದ ಪಡೆಯಲಾಗಿದೆ. ಅದರ ವಿವರಣೆಯ ಪ್ರಕಾರ, “ಯು.ಎಸ್. ಕಾಂಗ್ರೆಸ್ ರೇಬರ್ನ್ ಹೌಸ್ ಆಫೀಸ್ ಕಟ್ಟಡದಲ್ಲಿ ನಡೆದ 13 ನೇ ಇಂಟೆರೆಥ್ನಿಕ್ ಇಂಟರ್ ಫೇಯ್ತ್ ಲೀಡರ್ಶಿಪ್ ಕಾನ್ಫರೆನ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಡಾ. ಯಾಂಗ್ ಜಿಯಾನ್ಲಿಯವರ ಚಿತ್ರ. ಡಿಸೆಂಬರ್ 10, 2018.” ಎಂದು ಹೇಳಿದೆ.

 ಸುಳ್ಳು ಸುದ್ದಿಗಳ ತಂಡಗಳು

ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿತ್ತು. ಇದನ್ನು ಹಂಚಿದವರಲ್ಲಿ ಜಿಡಿ ಬಕ್ಷಿ, ರಮೇಶ್ ಸೋಲಂಕಿ, ಚಯಾನ್ ಚಟರ್ಜಿ ಪ್ರಮುಖರಾಗಿದ್ದಾರೆ. ಇವರಲ್ಲಿ ಹೆಚ್ಚಿನವರು newscast-pratyakhsha.com ಎಂಬ ವೆಬ್‌ಸೈಟಿನ ಆಧಾರವಿಲ್ಲದ ಸುದ್ದಿಗಳನ್ನು ಹಂಚಿದ್ದಾರೆ.


ಓದಿ: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...