Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಭಾರತದ ಮತ್ತು ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.

- Advertisement -
- Advertisement -

ಯಾಂಗ್ ಜಿಯಾನ್ಲಿ ಎಂಬ ಚೀನಾದ ಮಾಜಿ ಅಧಿಕಾರಿ ಗಾಲ್ವಾನ್‌ನಲ್ಲಿ 100 ಚೀನಿಯರು ಸಾವನ್ನಪ್ಪಿದ್ದಾರೆ ಎಂದಿದ್ದಾರೆಂದು ರಿಪಬ್ಲಿಕ್ ಟಿವಿ, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅಸ್ಪಷ್ಟ ವೆಬ್‌ಸೈಟ್ kreately.in ‌ನ ವರದಿಯನ್ನು ಟ್ವೀಟ್ ಮಾಡಿ “ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಚೀನಾದ ಕಮ್ಯುನಿಸ್ಟ್ ಪಕ್ಷದ ನಾಯಕನ ಮಗ ಜಿಯಾನ್ಲಿ ಯಾಂಗ್, ಜೂನ್ 15 ರ ರಾತ್ರಿ ಭಾರತ-ಚೀನಾದ ಸೈನಿಕರ ನಡುವಿನ ಭೀಕರ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಎಂದು ಒಪ್ಪಿಕೊಂಡಿದ್ದಾರೆ.” ಎಂದು ಬರೆದಿದ್ದಾರೆ. ಕಪಿಲ್ ಮಿಶ್ರಾರ ಈ ಟ್ವೀಟ್ 11,700 ಕ್ಕೂ ಹೆಚ್ಚು ಬಾರಿ ರಿಟ್ವೀಟ್‌ ಆಗಿದೆ.

ಜುಲೈ 7 ರಂದು ಪ್ರಕಟವಾದ ರಿಪಬ್ಲಿಕ್ ಟಿವಿ ವರದಿಯಲ್ಲಿ ಕೂಡ ಇದೆ ಮಾಹಿತಿಯನ್ನು ನೀಡಲಾಗಿದೆ. “ಭಾರತ-ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿದ್ದಾರೆ” ಎಂದು ಬರೆದಿದೆ. ಮೈನೇಷನ್ ಕೂಡಾ ರೀತಿಯ ವರದಿಯನ್ನು ಪ್ರಕಟಿಸಿತು.

ರಿಪಬ್ಲಿಕ್ ಟಿವಿಯ ಲೇಖನವು ತ್ಸೈ ಇಂಗ್-ವೆನ್ ಎಂಬ ಖಾತೆಯಿಂದ ಪಡೆದುಕೊಂಡದ್ದಾಗಿದೆ.

ಇದನ್ನು ಮೊದಲಿಗೆ @NewsLineIFE  ಎಂಬ ಟ್ವಿಟ್ಟರ್‌ ಹ್ಯಾಂಡಲ್ ಟ್ವಿಟ್ಟರಿನಲ್ಲಿ ಹಂಚಿತ್ತು.

ಫ್ಯಾಕ್ಟ್‌‌ಚೆಕ್‌:

ಈ ವಿವಾದಾತ್ಮಕ ಸಂದೇಶದ ಎಲ್ಲಾ ವಾದಗಳು ಸಂಶಯಾಸ್ಪದ ವೆಬ್‌ಸೈಟ್‌ಗಳು ಮತ್ತು ಖಾತೆಗಳಿಂದ ಹೊರಹೊಮ್ಮಿದವುಗಳಾಗಿದೆ.

@NewsLineIFE ಎಂಬ ಟ್ವಿಟ್ಟರ್‌‌ ಹ್ಯಾಂಡಲ್ ಈ ಸಂದೇಶವನ್ನು ಮೊದಲ ಬಾರಿಗೆ ಹಂಚಿಕೊಂಡಿತು. ಜುಲೈ 2 ರಂದು ಈ ಹ್ಯಾಂಡಲ್ ಚೀನಾದ ಐವರು ಸೈನಿಕರು ಸಾವನ್ನಪ್ಪಿದರು ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂಬ ಆಧಾರರಹಿತವಾಗಿ ಬರೆದಿತ್ತು. ಅದರ ನಂತರ ಚೀನಾದ 43 ಸೈನಿಕರು ಕೊಲ್ಲಲ್ಪಟ್ಟರು ಎಂದು ಟ್ವೀಟ್ ಮಾಡಿತ್ತು ಆದರೆ ಎರಡೂ ಟ್ವೀಟ್‌ಗಳನ್ನು ಈಗ ಅಳಿಸಲಾಗಿದೆ.

@NewsLineIFE  ಈ ಸುದ್ದಿಯನ್ನು ಟ್ವೀಟ್ ಮಾಡುವಾಗ @drapr007 ಎಂಬ ಟ್ವಿಟ್ಟರ್‌ ಹ್ಯಾಂಡಲ್‌ಅನ್ನು ಟ್ಯಾಗ್ ಮಾಡಿತ್ತು. ಈ ಹ್ಯಾಂಡಲ್ ಈ ವಿಚಾರವನ್ನು ಜುಲೈ 1 ರಂದು ಅಂದರೆ ಒಂದು ದಿನದ ಹಿಂದೆಯೇ  ಬರೆದಿತ್ತು.

ಇದಲ್ಲದೆ 100 ಚೀನೀ ಸೈನಿಕರ ಸಾವುಗಳ ಕುರಿತು ಲೇಖನವನ್ನು ಪ್ರಕಟಿಸಿದ ವೆಬ್‌ಸೈಟ್ kreately.in ಹೊಸದಾಗಿ ರಚಿಸಲಾದ ಸಾಮಾಜಿಕ ಜಾಲತಾಣದ ವೇದಿಕೆಯಾಗಿದೆ. ಅದರ ಟ್ವಿಟರ್ ಬಯೋ “ ನೀವೆ ಪ್ರಕಟಿಸಿ, ಸೈನ್‌ಅಪ್ ಮಾಡಿ ಮತ್ತು ಬರಹಗಾರರಾಗಿ, ಈಗಿದು ಸುಲಭ…” ಎಂದು ಬರೆದಿದೆ. ಈ ವೆಬ್‌ಸೈಟ್ ಪತ್ರಿಕೋದ್ಯಮದ ವೇದಿಕೆಯಲ್ಲ, ಅದು ಬಳಕೆದಾರರು ಕಳುಹಿಸಿದ ವಿಷಯವನ್ನು ಪ್ರಕಟಿಸುತ್ತದೆ. ಅಲ್ಲದೆ ಇದನ್ನು ಯಾರು ನಡೆಸುತ್ತಿದ್ದಾರೆ ಹಾಗೂ ಅವರ ವಿಳಾಸದಂತಹ ಯಾವುದೆ ಮಾಹಿತಿಯನ್ನು ಅದು ಹೊಂದಿಲ್ಲ.

ಅಷ್ಟೇ ಅಲ್ಲದೆ ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಂನ ಲೇಖನವನ್ನು ಹಲವಾರು ವ್ಯಕ್ತಿಗಳು ಹಂಚಿಕೊಂಡಿದ್ದು, 100 ಚೀನೀ ಸೈನಿಕರನ್ನು ಭಾರತೀಯ ಸೇನೆಯಿಂದ ಕೊಲ್ಲಲಾಗಿದೆ ಎಂದು ವೆಬ್‌ಸೈಟ್ ಹೇಳಿಕೊಂಡಿದೆ ಮತ್ತು ಜಿಯಾನ್ಲಿ ಯಾಂಗ್ ಅವರ ವಾಷಿಂಗ್ಟನ್ ಟೈಮ್ಸ್ ಅಭಿಪ್ರಾಯವನ್ನು ಈ ವೆಬ್‌ಸೈಟ್‌ ಉಲ್ಲೇಖಿಸಿದೆ.

ವಾಷಿಂಗ್ಟನ್ ಟೈಮ್ಸ್ ನಲ್ಲಿ ಯಾಂಗ್ ಜಿಯಾನ್ಲಿಯ ಅಭಿಪ್ರಾಯದ ತುಣುಕು

ಯಾಂಗ್ ಜಿಯಾನ್ಲಿ ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನೀ ಸೈನಿಕರು ಸಾವನ್ನಪ್ಪಿದ್ದಾರೆಂದು ಮುಖ್ಯವಾಹಿನಿಯಲ್ಲಿ ಇಲ್ಲದ, ನಂಬಲರ್ಹವಲ್ಲದ ಮಾಧ್ಯಮಗಳು ಹೇಳಿವೆ ಎಂದು ಆಲ್ಟ್ ನ್ಯೂಸ್ ಕಂಡುಹಿಡಿದಿದೆ.

ಜಿಯಾನ್ಲಿ ನಿಜಕ್ಕೂ ಮಾಜಿ ಸಿಪಿಸಿ ನಾಯಕ ಯಾಂಗ್ ಫೆಂಗ್‌ಶೂನ್‌ರ ಮಗನಾಗಿದ್ದರೂ, ಅವರು ಚೀನಾದ ಮಾಜಿ ಮಿಲಿಟರಿ ನಾಯಕನಲ್ಲ. ಜಿಯಾನ್ಲಿ ವಾಸ್ತವವಾಗಿ ಅಮೆರಿಕಾದಲ್ಲಿ ವಾಸಿಸುವ ಚೀನಾದ ಭಿನ್ನಮತೀಯ ಆಗಿದ್ದರೆ. ಅವರು ಅಮೆರಿಕಾದಲ್ಲಿ ಅಧ್ಯಯನ ಮಾಡಿದ ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. ಇವರು ಮಾಜಿ ಟಿಯಾನನ್ಮೆನ್ ಸ್ಕ್ವೇರ್ ಕಾರ್ಯಕರ್ತರಾಗಿದ್ದು, ಕಾರ್ಮಿಕ ಅಶಾಂತಿಯ ಧ್ವನಿಯೆತ್ತಲು ಯತ್ನಿಸಿದ್ದಕ್ಕಾಗಿ 2002 ರಲ್ಲಿ ಚೀನಾ ಸರ್ಕಾರವು ಜೈಲಿಗಟ್ಟಿತ್ತು ಹಾಗೂ 2007 ರಲ್ಲಿ ಬಿಡುಗಡೆಯಾಗಿದ್ದರು.

ಇಂಡೋ-ಚೀನಾ ಘರ್ಷಣೆಗಳ ಕುರಿತು ಅವರು ಇತ್ತೀಚೆಗೆ ದಿ ವಾಷಿಂಗ್ಟನ್ ಟೈಮ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಬರೆದಿದ್ದು, ಅದರಲ್ಲಿ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಚೀನಾದ ಸಾವಿನ ಸಂಖ್ಯೆಯನ್ನು ಒಪ್ಪಿಕೊಂಡಿಲ್ಲ ಹಾಗೂ ಕನಿಷ್ಠ 40 ಚೀನಾ ಸೈನಿಕರ ಸಾವುಗಳ ಬಗ್ಗೆ ಭಾರತೀಯ ವರದಿಗಳು “ಸುಳ್ಳು ಮಾಹಿತಿ” ಎಂದು ಬರೆದಿದ್ದರು.

“ಯಾವ ದೇಶವು ತನ್ನ ಗಡಿಯಲ್ಲಿರುವ ಸಮವಸ್ತ್ರಧಾರಿ ಸೈನಿಕರ ಹುತಾತ್ಮತೆಯನ್ನು ಅಂಗೀಕರಿಸುವುದಿಲ್ಲ, ಅವರಿಗೆ ಗೌರವಾನ್ವಿತ ಕೊನೆಯ ಗೌರವ ಸಲ್ಲಿಸಲಿ. ಚೀನಾ ತಾನು ಸೈನ್ಯವನ್ನು ಎದುರಾಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಳೆದುಕೊಂಡೆ ಎಂದು ಒಪ್ಪಿಕೊಳ್ಳುವುದು ಆಂತರಿಕ ಅಶಾಂತಿಗೆ ಕಾರಣವಾಗಬಹುದು ಎಂಬ ಭಯದಲ್ಲಿ ತತ್ತರಿಸಿದೆ” ಎಂದು ಜಿಯಾನ್ಲಿ ಬರೆದಿದ್ದಾರೆ.

ಈ ವರದಿಯಲ್ಲಿ ಎಲ್ಲಿಯೂ ಚೀನಾದ ಸೈನಿಕರ ಸಾವಿಗೆ ಸಂಖ್ಯೆಯನ್ನು ಜಿಯಾನ್ಲಿ ಉಲ್ಲೇಖಿಸಿಲ್ಲ.

ನಕಲಿ ಟ್ವಿಟ್ಟರ್‌ ಖಾತೆಯಿಂದ ಸುದ್ದಿಯನ್ನು ಪಡೆದ ರಿಪಬ್ಲಿಕ್ ಟಿವಿ.

ರಿಪಬ್ಲಿಕ್ ಟಿವಿ @tsaiing_wen ಎಂಬ ಖಾತೆಯಿಂದ ಸುದ್ದಿಯನ್ನು ಪಡೆದಿದೆ. ಇದು ಚೀನಾ ಗಣರಾಜ್ಯದ (ತೈವಾನ್) ಅಧ್ಯಕ್ಷರದ್ದೆಂದು ಹೇಳುವ ನಕಲಿ ಖಾತೆಯಾಗಿದೆ. ಇದರಲ್ಲಿ ಟ್ವಿಟ್ಟರ್‌ ಪರಿಶೀಲನೆಯ ನೀಲಿ ಟಿಕ್ ಇಲ್ಲ.

ವೈರಲ್ ಸಂದೇಶದಲ್ಲಿ ಬಳಸಲಾದ ಜಿಯಾನ್ಲಿಯ ಹಳೆಯ ಫೋಟೋಗಳು

ಜಾಗತಿಕ ಮಾನವ ಹಕ್ಕುಗಳ ಕುರಿತ ಯುಎಸ್ ಹೌಸ್ ಉಪಸಮಿತಿಯ ಮುಂದೆ ಚೀನಾದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಹೇಳುತ್ತಿರುವ 2013 ರ ಫೋಟೋವನ್ನು kreately.com ಬಳಸಿದೆ.

ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಮ್ ಬಳಸಿದ ಚಿತ್ರ ಕೂಡಾ ವಿಕಿಪೀಡಿಯಾದಿಂದ ಪಡೆಯಲಾಗಿದೆ. ಅದರ ವಿವರಣೆಯ ಪ್ರಕಾರ, “ಯು.ಎಸ್. ಕಾಂಗ್ರೆಸ್ ರೇಬರ್ನ್ ಹೌಸ್ ಆಫೀಸ್ ಕಟ್ಟಡದಲ್ಲಿ ನಡೆದ 13 ನೇ ಇಂಟೆರೆಥ್ನಿಕ್ ಇಂಟರ್ ಫೇಯ್ತ್ ಲೀಡರ್ಶಿಪ್ ಕಾನ್ಫರೆನ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಡಾ. ಯಾಂಗ್ ಜಿಯಾನ್ಲಿಯವರ ಚಿತ್ರ. ಡಿಸೆಂಬರ್ 10, 2018.” ಎಂದು ಹೇಳಿದೆ.

 ಸುಳ್ಳು ಸುದ್ದಿಗಳ ತಂಡಗಳು

ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿತ್ತು. ಇದನ್ನು ಹಂಚಿದವರಲ್ಲಿ ಜಿಡಿ ಬಕ್ಷಿ, ರಮೇಶ್ ಸೋಲಂಕಿ, ಚಯಾನ್ ಚಟರ್ಜಿ ಪ್ರಮುಖರಾಗಿದ್ದಾರೆ. ಇವರಲ್ಲಿ ಹೆಚ್ಚಿನವರು newscast-pratyakhsha.com ಎಂಬ ವೆಬ್‌ಸೈಟಿನ ಆಧಾರವಿಲ್ಲದ ಸುದ್ದಿಗಳನ್ನು ಹಂಚಿದ್ದಾರೆ.


ಓದಿ: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...