Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಭಾರತದ ಮತ್ತು ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.

- Advertisement -
- Advertisement -

ಯಾಂಗ್ ಜಿಯಾನ್ಲಿ ಎಂಬ ಚೀನಾದ ಮಾಜಿ ಅಧಿಕಾರಿ ಗಾಲ್ವಾನ್‌ನಲ್ಲಿ 100 ಚೀನಿಯರು ಸಾವನ್ನಪ್ಪಿದ್ದಾರೆ ಎಂದಿದ್ದಾರೆಂದು ರಿಪಬ್ಲಿಕ್ ಟಿವಿ, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅಸ್ಪಷ್ಟ ವೆಬ್‌ಸೈಟ್ kreately.in ‌ನ ವರದಿಯನ್ನು ಟ್ವೀಟ್ ಮಾಡಿ “ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಚೀನಾದ ಕಮ್ಯುನಿಸ್ಟ್ ಪಕ್ಷದ ನಾಯಕನ ಮಗ ಜಿಯಾನ್ಲಿ ಯಾಂಗ್, ಜೂನ್ 15 ರ ರಾತ್ರಿ ಭಾರತ-ಚೀನಾದ ಸೈನಿಕರ ನಡುವಿನ ಭೀಕರ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಎಂದು ಒಪ್ಪಿಕೊಂಡಿದ್ದಾರೆ.” ಎಂದು ಬರೆದಿದ್ದಾರೆ. ಕಪಿಲ್ ಮಿಶ್ರಾರ ಈ ಟ್ವೀಟ್ 11,700 ಕ್ಕೂ ಹೆಚ್ಚು ಬಾರಿ ರಿಟ್ವೀಟ್‌ ಆಗಿದೆ.

ಜುಲೈ 7 ರಂದು ಪ್ರಕಟವಾದ ರಿಪಬ್ಲಿಕ್ ಟಿವಿ ವರದಿಯಲ್ಲಿ ಕೂಡ ಇದೆ ಮಾಹಿತಿಯನ್ನು ನೀಡಲಾಗಿದೆ. “ಭಾರತ-ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿದ್ದಾರೆ” ಎಂದು ಬರೆದಿದೆ. ಮೈನೇಷನ್ ಕೂಡಾ ರೀತಿಯ ವರದಿಯನ್ನು ಪ್ರಕಟಿಸಿತು.

ರಿಪಬ್ಲಿಕ್ ಟಿವಿಯ ಲೇಖನವು ತ್ಸೈ ಇಂಗ್-ವೆನ್ ಎಂಬ ಖಾತೆಯಿಂದ ಪಡೆದುಕೊಂಡದ್ದಾಗಿದೆ.

ಇದನ್ನು ಮೊದಲಿಗೆ @NewsLineIFE  ಎಂಬ ಟ್ವಿಟ್ಟರ್‌ ಹ್ಯಾಂಡಲ್ ಟ್ವಿಟ್ಟರಿನಲ್ಲಿ ಹಂಚಿತ್ತು.

ಫ್ಯಾಕ್ಟ್‌‌ಚೆಕ್‌:

ಈ ವಿವಾದಾತ್ಮಕ ಸಂದೇಶದ ಎಲ್ಲಾ ವಾದಗಳು ಸಂಶಯಾಸ್ಪದ ವೆಬ್‌ಸೈಟ್‌ಗಳು ಮತ್ತು ಖಾತೆಗಳಿಂದ ಹೊರಹೊಮ್ಮಿದವುಗಳಾಗಿದೆ.

@NewsLineIFE ಎಂಬ ಟ್ವಿಟ್ಟರ್‌‌ ಹ್ಯಾಂಡಲ್ ಈ ಸಂದೇಶವನ್ನು ಮೊದಲ ಬಾರಿಗೆ ಹಂಚಿಕೊಂಡಿತು. ಜುಲೈ 2 ರಂದು ಈ ಹ್ಯಾಂಡಲ್ ಚೀನಾದ ಐವರು ಸೈನಿಕರು ಸಾವನ್ನಪ್ಪಿದರು ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂಬ ಆಧಾರರಹಿತವಾಗಿ ಬರೆದಿತ್ತು. ಅದರ ನಂತರ ಚೀನಾದ 43 ಸೈನಿಕರು ಕೊಲ್ಲಲ್ಪಟ್ಟರು ಎಂದು ಟ್ವೀಟ್ ಮಾಡಿತ್ತು ಆದರೆ ಎರಡೂ ಟ್ವೀಟ್‌ಗಳನ್ನು ಈಗ ಅಳಿಸಲಾಗಿದೆ.

@NewsLineIFE  ಈ ಸುದ್ದಿಯನ್ನು ಟ್ವೀಟ್ ಮಾಡುವಾಗ @drapr007 ಎಂಬ ಟ್ವಿಟ್ಟರ್‌ ಹ್ಯಾಂಡಲ್‌ಅನ್ನು ಟ್ಯಾಗ್ ಮಾಡಿತ್ತು. ಈ ಹ್ಯಾಂಡಲ್ ಈ ವಿಚಾರವನ್ನು ಜುಲೈ 1 ರಂದು ಅಂದರೆ ಒಂದು ದಿನದ ಹಿಂದೆಯೇ  ಬರೆದಿತ್ತು.

ಇದಲ್ಲದೆ 100 ಚೀನೀ ಸೈನಿಕರ ಸಾವುಗಳ ಕುರಿತು ಲೇಖನವನ್ನು ಪ್ರಕಟಿಸಿದ ವೆಬ್‌ಸೈಟ್ kreately.in ಹೊಸದಾಗಿ ರಚಿಸಲಾದ ಸಾಮಾಜಿಕ ಜಾಲತಾಣದ ವೇದಿಕೆಯಾಗಿದೆ. ಅದರ ಟ್ವಿಟರ್ ಬಯೋ “ ನೀವೆ ಪ್ರಕಟಿಸಿ, ಸೈನ್‌ಅಪ್ ಮಾಡಿ ಮತ್ತು ಬರಹಗಾರರಾಗಿ, ಈಗಿದು ಸುಲಭ…” ಎಂದು ಬರೆದಿದೆ. ಈ ವೆಬ್‌ಸೈಟ್ ಪತ್ರಿಕೋದ್ಯಮದ ವೇದಿಕೆಯಲ್ಲ, ಅದು ಬಳಕೆದಾರರು ಕಳುಹಿಸಿದ ವಿಷಯವನ್ನು ಪ್ರಕಟಿಸುತ್ತದೆ. ಅಲ್ಲದೆ ಇದನ್ನು ಯಾರು ನಡೆಸುತ್ತಿದ್ದಾರೆ ಹಾಗೂ ಅವರ ವಿಳಾಸದಂತಹ ಯಾವುದೆ ಮಾಹಿತಿಯನ್ನು ಅದು ಹೊಂದಿಲ್ಲ.

ಅಷ್ಟೇ ಅಲ್ಲದೆ ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಂನ ಲೇಖನವನ್ನು ಹಲವಾರು ವ್ಯಕ್ತಿಗಳು ಹಂಚಿಕೊಂಡಿದ್ದು, 100 ಚೀನೀ ಸೈನಿಕರನ್ನು ಭಾರತೀಯ ಸೇನೆಯಿಂದ ಕೊಲ್ಲಲಾಗಿದೆ ಎಂದು ವೆಬ್‌ಸೈಟ್ ಹೇಳಿಕೊಂಡಿದೆ ಮತ್ತು ಜಿಯಾನ್ಲಿ ಯಾಂಗ್ ಅವರ ವಾಷಿಂಗ್ಟನ್ ಟೈಮ್ಸ್ ಅಭಿಪ್ರಾಯವನ್ನು ಈ ವೆಬ್‌ಸೈಟ್‌ ಉಲ್ಲೇಖಿಸಿದೆ.

ವಾಷಿಂಗ್ಟನ್ ಟೈಮ್ಸ್ ನಲ್ಲಿ ಯಾಂಗ್ ಜಿಯಾನ್ಲಿಯ ಅಭಿಪ್ರಾಯದ ತುಣುಕು

ಯಾಂಗ್ ಜಿಯಾನ್ಲಿ ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನೀ ಸೈನಿಕರು ಸಾವನ್ನಪ್ಪಿದ್ದಾರೆಂದು ಮುಖ್ಯವಾಹಿನಿಯಲ್ಲಿ ಇಲ್ಲದ, ನಂಬಲರ್ಹವಲ್ಲದ ಮಾಧ್ಯಮಗಳು ಹೇಳಿವೆ ಎಂದು ಆಲ್ಟ್ ನ್ಯೂಸ್ ಕಂಡುಹಿಡಿದಿದೆ.

ಜಿಯಾನ್ಲಿ ನಿಜಕ್ಕೂ ಮಾಜಿ ಸಿಪಿಸಿ ನಾಯಕ ಯಾಂಗ್ ಫೆಂಗ್‌ಶೂನ್‌ರ ಮಗನಾಗಿದ್ದರೂ, ಅವರು ಚೀನಾದ ಮಾಜಿ ಮಿಲಿಟರಿ ನಾಯಕನಲ್ಲ. ಜಿಯಾನ್ಲಿ ವಾಸ್ತವವಾಗಿ ಅಮೆರಿಕಾದಲ್ಲಿ ವಾಸಿಸುವ ಚೀನಾದ ಭಿನ್ನಮತೀಯ ಆಗಿದ್ದರೆ. ಅವರು ಅಮೆರಿಕಾದಲ್ಲಿ ಅಧ್ಯಯನ ಮಾಡಿದ ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. ಇವರು ಮಾಜಿ ಟಿಯಾನನ್ಮೆನ್ ಸ್ಕ್ವೇರ್ ಕಾರ್ಯಕರ್ತರಾಗಿದ್ದು, ಕಾರ್ಮಿಕ ಅಶಾಂತಿಯ ಧ್ವನಿಯೆತ್ತಲು ಯತ್ನಿಸಿದ್ದಕ್ಕಾಗಿ 2002 ರಲ್ಲಿ ಚೀನಾ ಸರ್ಕಾರವು ಜೈಲಿಗಟ್ಟಿತ್ತು ಹಾಗೂ 2007 ರಲ್ಲಿ ಬಿಡುಗಡೆಯಾಗಿದ್ದರು.

ಇಂಡೋ-ಚೀನಾ ಘರ್ಷಣೆಗಳ ಕುರಿತು ಅವರು ಇತ್ತೀಚೆಗೆ ದಿ ವಾಷಿಂಗ್ಟನ್ ಟೈಮ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಬರೆದಿದ್ದು, ಅದರಲ್ಲಿ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಚೀನಾದ ಸಾವಿನ ಸಂಖ್ಯೆಯನ್ನು ಒಪ್ಪಿಕೊಂಡಿಲ್ಲ ಹಾಗೂ ಕನಿಷ್ಠ 40 ಚೀನಾ ಸೈನಿಕರ ಸಾವುಗಳ ಬಗ್ಗೆ ಭಾರತೀಯ ವರದಿಗಳು “ಸುಳ್ಳು ಮಾಹಿತಿ” ಎಂದು ಬರೆದಿದ್ದರು.

“ಯಾವ ದೇಶವು ತನ್ನ ಗಡಿಯಲ್ಲಿರುವ ಸಮವಸ್ತ್ರಧಾರಿ ಸೈನಿಕರ ಹುತಾತ್ಮತೆಯನ್ನು ಅಂಗೀಕರಿಸುವುದಿಲ್ಲ, ಅವರಿಗೆ ಗೌರವಾನ್ವಿತ ಕೊನೆಯ ಗೌರವ ಸಲ್ಲಿಸಲಿ. ಚೀನಾ ತಾನು ಸೈನ್ಯವನ್ನು ಎದುರಾಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಳೆದುಕೊಂಡೆ ಎಂದು ಒಪ್ಪಿಕೊಳ್ಳುವುದು ಆಂತರಿಕ ಅಶಾಂತಿಗೆ ಕಾರಣವಾಗಬಹುದು ಎಂಬ ಭಯದಲ್ಲಿ ತತ್ತರಿಸಿದೆ” ಎಂದು ಜಿಯಾನ್ಲಿ ಬರೆದಿದ್ದಾರೆ.

ಈ ವರದಿಯಲ್ಲಿ ಎಲ್ಲಿಯೂ ಚೀನಾದ ಸೈನಿಕರ ಸಾವಿಗೆ ಸಂಖ್ಯೆಯನ್ನು ಜಿಯಾನ್ಲಿ ಉಲ್ಲೇಖಿಸಿಲ್ಲ.

ನಕಲಿ ಟ್ವಿಟ್ಟರ್‌ ಖಾತೆಯಿಂದ ಸುದ್ದಿಯನ್ನು ಪಡೆದ ರಿಪಬ್ಲಿಕ್ ಟಿವಿ.

ರಿಪಬ್ಲಿಕ್ ಟಿವಿ @tsaiing_wen ಎಂಬ ಖಾತೆಯಿಂದ ಸುದ್ದಿಯನ್ನು ಪಡೆದಿದೆ. ಇದು ಚೀನಾ ಗಣರಾಜ್ಯದ (ತೈವಾನ್) ಅಧ್ಯಕ್ಷರದ್ದೆಂದು ಹೇಳುವ ನಕಲಿ ಖಾತೆಯಾಗಿದೆ. ಇದರಲ್ಲಿ ಟ್ವಿಟ್ಟರ್‌ ಪರಿಶೀಲನೆಯ ನೀಲಿ ಟಿಕ್ ಇಲ್ಲ.

ವೈರಲ್ ಸಂದೇಶದಲ್ಲಿ ಬಳಸಲಾದ ಜಿಯಾನ್ಲಿಯ ಹಳೆಯ ಫೋಟೋಗಳು

ಜಾಗತಿಕ ಮಾನವ ಹಕ್ಕುಗಳ ಕುರಿತ ಯುಎಸ್ ಹೌಸ್ ಉಪಸಮಿತಿಯ ಮುಂದೆ ಚೀನಾದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಹೇಳುತ್ತಿರುವ 2013 ರ ಫೋಟೋವನ್ನು kreately.com ಬಳಸಿದೆ.

ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಮ್ ಬಳಸಿದ ಚಿತ್ರ ಕೂಡಾ ವಿಕಿಪೀಡಿಯಾದಿಂದ ಪಡೆಯಲಾಗಿದೆ. ಅದರ ವಿವರಣೆಯ ಪ್ರಕಾರ, “ಯು.ಎಸ್. ಕಾಂಗ್ರೆಸ್ ರೇಬರ್ನ್ ಹೌಸ್ ಆಫೀಸ್ ಕಟ್ಟಡದಲ್ಲಿ ನಡೆದ 13 ನೇ ಇಂಟೆರೆಥ್ನಿಕ್ ಇಂಟರ್ ಫೇಯ್ತ್ ಲೀಡರ್ಶಿಪ್ ಕಾನ್ಫರೆನ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಡಾ. ಯಾಂಗ್ ಜಿಯಾನ್ಲಿಯವರ ಚಿತ್ರ. ಡಿಸೆಂಬರ್ 10, 2018.” ಎಂದು ಹೇಳಿದೆ.

 ಸುಳ್ಳು ಸುದ್ದಿಗಳ ತಂಡಗಳು

ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿತ್ತು. ಇದನ್ನು ಹಂಚಿದವರಲ್ಲಿ ಜಿಡಿ ಬಕ್ಷಿ, ರಮೇಶ್ ಸೋಲಂಕಿ, ಚಯಾನ್ ಚಟರ್ಜಿ ಪ್ರಮುಖರಾಗಿದ್ದಾರೆ. ಇವರಲ್ಲಿ ಹೆಚ್ಚಿನವರು newscast-pratyakhsha.com ಎಂಬ ವೆಬ್‌ಸೈಟಿನ ಆಧಾರವಿಲ್ಲದ ಸುದ್ದಿಗಳನ್ನು ಹಂಚಿದ್ದಾರೆ.


ಓದಿ: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...