Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಫ್ಯಾಕ್ಟ್‌ಚೆಕ್‌‌: ಚೀನಾದ ನೂರು ಸೈನಿಕರು ಸತ್ತರೆಂದು ಪ್ರಕಟಿಸಿ, ಡಿಲೀಟ್ ಮಾಡಿದ ರಿಪಬ್ಲಿಕ್‌ ಟಿವಿ!

ಭಾರತದ ಮತ್ತು ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು.

- Advertisement -
- Advertisement -

ಯಾಂಗ್ ಜಿಯಾನ್ಲಿ ಎಂಬ ಚೀನಾದ ಮಾಜಿ ಅಧಿಕಾರಿ ಗಾಲ್ವಾನ್‌ನಲ್ಲಿ 100 ಚೀನಿಯರು ಸಾವನ್ನಪ್ಪಿದ್ದಾರೆ ಎಂದಿದ್ದಾರೆಂದು ರಿಪಬ್ಲಿಕ್ ಟಿವಿ, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅಸ್ಪಷ್ಟ ವೆಬ್‌ಸೈಟ್ kreately.in ‌ನ ವರದಿಯನ್ನು ಟ್ವೀಟ್ ಮಾಡಿ “ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಚೀನಾದ ಕಮ್ಯುನಿಸ್ಟ್ ಪಕ್ಷದ ನಾಯಕನ ಮಗ ಜಿಯಾನ್ಲಿ ಯಾಂಗ್, ಜೂನ್ 15 ರ ರಾತ್ರಿ ಭಾರತ-ಚೀನಾದ ಸೈನಿಕರ ನಡುವಿನ ಭೀಕರ ಸಂಘರ್ಷದಲ್ಲಿ 100 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು ಎಂದು ಒಪ್ಪಿಕೊಂಡಿದ್ದಾರೆ.” ಎಂದು ಬರೆದಿದ್ದಾರೆ. ಕಪಿಲ್ ಮಿಶ್ರಾರ ಈ ಟ್ವೀಟ್ 11,700 ಕ್ಕೂ ಹೆಚ್ಚು ಬಾರಿ ರಿಟ್ವೀಟ್‌ ಆಗಿದೆ.

ಜುಲೈ 7 ರಂದು ಪ್ರಕಟವಾದ ರಿಪಬ್ಲಿಕ್ ಟಿವಿ ವರದಿಯಲ್ಲಿ ಕೂಡ ಇದೆ ಮಾಹಿತಿಯನ್ನು ನೀಡಲಾಗಿದೆ. “ಭಾರತ-ಚೀನಾ ನಡುವಿನ ಹಿಂಸಾತ್ಮಕ ಮುಖಾಮುಖಿಯಲ್ಲಿ 100 ಕ್ಕೂ ಹೆಚ್ಚು ಚೀನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಜಿ ಮಿಲಿಟರಿ ಅಧಿಕಾರಿ ಜಿಯಾನ್ಲಿ ಯಾಂಗ್ ಒಪ್ಪಿದ್ದಾರೆ” ಎಂದು ಬರೆದಿದೆ. ಮೈನೇಷನ್ ಕೂಡಾ ರೀತಿಯ ವರದಿಯನ್ನು ಪ್ರಕಟಿಸಿತು.

ರಿಪಬ್ಲಿಕ್ ಟಿವಿಯ ಲೇಖನವು ತ್ಸೈ ಇಂಗ್-ವೆನ್ ಎಂಬ ಖಾತೆಯಿಂದ ಪಡೆದುಕೊಂಡದ್ದಾಗಿದೆ.

ಇದನ್ನು ಮೊದಲಿಗೆ @NewsLineIFE  ಎಂಬ ಟ್ವಿಟ್ಟರ್‌ ಹ್ಯಾಂಡಲ್ ಟ್ವಿಟ್ಟರಿನಲ್ಲಿ ಹಂಚಿತ್ತು.

ಫ್ಯಾಕ್ಟ್‌‌ಚೆಕ್‌:

ಈ ವಿವಾದಾತ್ಮಕ ಸಂದೇಶದ ಎಲ್ಲಾ ವಾದಗಳು ಸಂಶಯಾಸ್ಪದ ವೆಬ್‌ಸೈಟ್‌ಗಳು ಮತ್ತು ಖಾತೆಗಳಿಂದ ಹೊರಹೊಮ್ಮಿದವುಗಳಾಗಿದೆ.

@NewsLineIFE ಎಂಬ ಟ್ವಿಟ್ಟರ್‌‌ ಹ್ಯಾಂಡಲ್ ಈ ಸಂದೇಶವನ್ನು ಮೊದಲ ಬಾರಿಗೆ ಹಂಚಿಕೊಂಡಿತು. ಜುಲೈ 2 ರಂದು ಈ ಹ್ಯಾಂಡಲ್ ಚೀನಾದ ಐವರು ಸೈನಿಕರು ಸಾವನ್ನಪ್ಪಿದರು ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂಬ ಆಧಾರರಹಿತವಾಗಿ ಬರೆದಿತ್ತು. ಅದರ ನಂತರ ಚೀನಾದ 43 ಸೈನಿಕರು ಕೊಲ್ಲಲ್ಪಟ್ಟರು ಎಂದು ಟ್ವೀಟ್ ಮಾಡಿತ್ತು ಆದರೆ ಎರಡೂ ಟ್ವೀಟ್‌ಗಳನ್ನು ಈಗ ಅಳಿಸಲಾಗಿದೆ.

@NewsLineIFE  ಈ ಸುದ್ದಿಯನ್ನು ಟ್ವೀಟ್ ಮಾಡುವಾಗ @drapr007 ಎಂಬ ಟ್ವಿಟ್ಟರ್‌ ಹ್ಯಾಂಡಲ್‌ಅನ್ನು ಟ್ಯಾಗ್ ಮಾಡಿತ್ತು. ಈ ಹ್ಯಾಂಡಲ್ ಈ ವಿಚಾರವನ್ನು ಜುಲೈ 1 ರಂದು ಅಂದರೆ ಒಂದು ದಿನದ ಹಿಂದೆಯೇ  ಬರೆದಿತ್ತು.

ಇದಲ್ಲದೆ 100 ಚೀನೀ ಸೈನಿಕರ ಸಾವುಗಳ ಕುರಿತು ಲೇಖನವನ್ನು ಪ್ರಕಟಿಸಿದ ವೆಬ್‌ಸೈಟ್ kreately.in ಹೊಸದಾಗಿ ರಚಿಸಲಾದ ಸಾಮಾಜಿಕ ಜಾಲತಾಣದ ವೇದಿಕೆಯಾಗಿದೆ. ಅದರ ಟ್ವಿಟರ್ ಬಯೋ “ ನೀವೆ ಪ್ರಕಟಿಸಿ, ಸೈನ್‌ಅಪ್ ಮಾಡಿ ಮತ್ತು ಬರಹಗಾರರಾಗಿ, ಈಗಿದು ಸುಲಭ…” ಎಂದು ಬರೆದಿದೆ. ಈ ವೆಬ್‌ಸೈಟ್ ಪತ್ರಿಕೋದ್ಯಮದ ವೇದಿಕೆಯಲ್ಲ, ಅದು ಬಳಕೆದಾರರು ಕಳುಹಿಸಿದ ವಿಷಯವನ್ನು ಪ್ರಕಟಿಸುತ್ತದೆ. ಅಲ್ಲದೆ ಇದನ್ನು ಯಾರು ನಡೆಸುತ್ತಿದ್ದಾರೆ ಹಾಗೂ ಅವರ ವಿಳಾಸದಂತಹ ಯಾವುದೆ ಮಾಹಿತಿಯನ್ನು ಅದು ಹೊಂದಿಲ್ಲ.

ಅಷ್ಟೇ ಅಲ್ಲದೆ ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಂನ ಲೇಖನವನ್ನು ಹಲವಾರು ವ್ಯಕ್ತಿಗಳು ಹಂಚಿಕೊಂಡಿದ್ದು, 100 ಚೀನೀ ಸೈನಿಕರನ್ನು ಭಾರತೀಯ ಸೇನೆಯಿಂದ ಕೊಲ್ಲಲಾಗಿದೆ ಎಂದು ವೆಬ್‌ಸೈಟ್ ಹೇಳಿಕೊಂಡಿದೆ ಮತ್ತು ಜಿಯಾನ್ಲಿ ಯಾಂಗ್ ಅವರ ವಾಷಿಂಗ್ಟನ್ ಟೈಮ್ಸ್ ಅಭಿಪ್ರಾಯವನ್ನು ಈ ವೆಬ್‌ಸೈಟ್‌ ಉಲ್ಲೇಖಿಸಿದೆ.

ವಾಷಿಂಗ್ಟನ್ ಟೈಮ್ಸ್ ನಲ್ಲಿ ಯಾಂಗ್ ಜಿಯಾನ್ಲಿಯ ಅಭಿಪ್ರಾಯದ ತುಣುಕು

ಯಾಂಗ್ ಜಿಯಾನ್ಲಿ ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನೀ ಸೈನಿಕರು ಸಾವನ್ನಪ್ಪಿದ್ದಾರೆಂದು ಮುಖ್ಯವಾಹಿನಿಯಲ್ಲಿ ಇಲ್ಲದ, ನಂಬಲರ್ಹವಲ್ಲದ ಮಾಧ್ಯಮಗಳು ಹೇಳಿವೆ ಎಂದು ಆಲ್ಟ್ ನ್ಯೂಸ್ ಕಂಡುಹಿಡಿದಿದೆ.

ಜಿಯಾನ್ಲಿ ನಿಜಕ್ಕೂ ಮಾಜಿ ಸಿಪಿಸಿ ನಾಯಕ ಯಾಂಗ್ ಫೆಂಗ್‌ಶೂನ್‌ರ ಮಗನಾಗಿದ್ದರೂ, ಅವರು ಚೀನಾದ ಮಾಜಿ ಮಿಲಿಟರಿ ನಾಯಕನಲ್ಲ. ಜಿಯಾನ್ಲಿ ವಾಸ್ತವವಾಗಿ ಅಮೆರಿಕಾದಲ್ಲಿ ವಾಸಿಸುವ ಚೀನಾದ ಭಿನ್ನಮತೀಯ ಆಗಿದ್ದರೆ. ಅವರು ಅಮೆರಿಕಾದಲ್ಲಿ ಅಧ್ಯಯನ ಮಾಡಿದ ಮಾನವ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. ಇವರು ಮಾಜಿ ಟಿಯಾನನ್ಮೆನ್ ಸ್ಕ್ವೇರ್ ಕಾರ್ಯಕರ್ತರಾಗಿದ್ದು, ಕಾರ್ಮಿಕ ಅಶಾಂತಿಯ ಧ್ವನಿಯೆತ್ತಲು ಯತ್ನಿಸಿದ್ದಕ್ಕಾಗಿ 2002 ರಲ್ಲಿ ಚೀನಾ ಸರ್ಕಾರವು ಜೈಲಿಗಟ್ಟಿತ್ತು ಹಾಗೂ 2007 ರಲ್ಲಿ ಬಿಡುಗಡೆಯಾಗಿದ್ದರು.

ಇಂಡೋ-ಚೀನಾ ಘರ್ಷಣೆಗಳ ಕುರಿತು ಅವರು ಇತ್ತೀಚೆಗೆ ದಿ ವಾಷಿಂಗ್ಟನ್ ಟೈಮ್ಸ್ ನಲ್ಲಿ ತಮ್ಮ ಅಭಿಪ್ರಾಯವನ್ನು ಬರೆದಿದ್ದು, ಅದರಲ್ಲಿ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್ ಚೀನಾದ ಸಾವಿನ ಸಂಖ್ಯೆಯನ್ನು ಒಪ್ಪಿಕೊಂಡಿಲ್ಲ ಹಾಗೂ ಕನಿಷ್ಠ 40 ಚೀನಾ ಸೈನಿಕರ ಸಾವುಗಳ ಬಗ್ಗೆ ಭಾರತೀಯ ವರದಿಗಳು “ಸುಳ್ಳು ಮಾಹಿತಿ” ಎಂದು ಬರೆದಿದ್ದರು.

“ಯಾವ ದೇಶವು ತನ್ನ ಗಡಿಯಲ್ಲಿರುವ ಸಮವಸ್ತ್ರಧಾರಿ ಸೈನಿಕರ ಹುತಾತ್ಮತೆಯನ್ನು ಅಂಗೀಕರಿಸುವುದಿಲ್ಲ, ಅವರಿಗೆ ಗೌರವಾನ್ವಿತ ಕೊನೆಯ ಗೌರವ ಸಲ್ಲಿಸಲಿ. ಚೀನಾ ತಾನು ಸೈನ್ಯವನ್ನು ಎದುರಾಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಳೆದುಕೊಂಡೆ ಎಂದು ಒಪ್ಪಿಕೊಳ್ಳುವುದು ಆಂತರಿಕ ಅಶಾಂತಿಗೆ ಕಾರಣವಾಗಬಹುದು ಎಂಬ ಭಯದಲ್ಲಿ ತತ್ತರಿಸಿದೆ” ಎಂದು ಜಿಯಾನ್ಲಿ ಬರೆದಿದ್ದಾರೆ.

ಈ ವರದಿಯಲ್ಲಿ ಎಲ್ಲಿಯೂ ಚೀನಾದ ಸೈನಿಕರ ಸಾವಿಗೆ ಸಂಖ್ಯೆಯನ್ನು ಜಿಯಾನ್ಲಿ ಉಲ್ಲೇಖಿಸಿಲ್ಲ.

ನಕಲಿ ಟ್ವಿಟ್ಟರ್‌ ಖಾತೆಯಿಂದ ಸುದ್ದಿಯನ್ನು ಪಡೆದ ರಿಪಬ್ಲಿಕ್ ಟಿವಿ.

ರಿಪಬ್ಲಿಕ್ ಟಿವಿ @tsaiing_wen ಎಂಬ ಖಾತೆಯಿಂದ ಸುದ್ದಿಯನ್ನು ಪಡೆದಿದೆ. ಇದು ಚೀನಾ ಗಣರಾಜ್ಯದ (ತೈವಾನ್) ಅಧ್ಯಕ್ಷರದ್ದೆಂದು ಹೇಳುವ ನಕಲಿ ಖಾತೆಯಾಗಿದೆ. ಇದರಲ್ಲಿ ಟ್ವಿಟ್ಟರ್‌ ಪರಿಶೀಲನೆಯ ನೀಲಿ ಟಿಕ್ ಇಲ್ಲ.

ವೈರಲ್ ಸಂದೇಶದಲ್ಲಿ ಬಳಸಲಾದ ಜಿಯಾನ್ಲಿಯ ಹಳೆಯ ಫೋಟೋಗಳು

ಜಾಗತಿಕ ಮಾನವ ಹಕ್ಕುಗಳ ಕುರಿತ ಯುಎಸ್ ಹೌಸ್ ಉಪಸಮಿತಿಯ ಮುಂದೆ ಚೀನಾದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಹೇಳುತ್ತಿರುವ 2013 ರ ಫೋಟೋವನ್ನು kreately.com ಬಳಸಿದೆ.

ನ್ಯೂಸ್ಕಾಸ್ಟ್- ಪ್ರತ್ಯಕ್ಷಾ.ಕಾಮ್ ಬಳಸಿದ ಚಿತ್ರ ಕೂಡಾ ವಿಕಿಪೀಡಿಯಾದಿಂದ ಪಡೆಯಲಾಗಿದೆ. ಅದರ ವಿವರಣೆಯ ಪ್ರಕಾರ, “ಯು.ಎಸ್. ಕಾಂಗ್ರೆಸ್ ರೇಬರ್ನ್ ಹೌಸ್ ಆಫೀಸ್ ಕಟ್ಟಡದಲ್ಲಿ ನಡೆದ 13 ನೇ ಇಂಟೆರೆಥ್ನಿಕ್ ಇಂಟರ್ ಫೇಯ್ತ್ ಲೀಡರ್ಶಿಪ್ ಕಾನ್ಫರೆನ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಡಾ. ಯಾಂಗ್ ಜಿಯಾನ್ಲಿಯವರ ಚಿತ್ರ. ಡಿಸೆಂಬರ್ 10, 2018.” ಎಂದು ಹೇಳಿದೆ.

 ಸುಳ್ಳು ಸುದ್ದಿಗಳ ತಂಡಗಳು

ಭಾರತದೊಂದಿಗಿನ ಘರ್ಷಣೆಯಲ್ಲಿ 100 ಚೀನಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿತ್ತು. ಇದನ್ನು ಹಂಚಿದವರಲ್ಲಿ ಜಿಡಿ ಬಕ್ಷಿ, ರಮೇಶ್ ಸೋಲಂಕಿ, ಚಯಾನ್ ಚಟರ್ಜಿ ಪ್ರಮುಖರಾಗಿದ್ದಾರೆ. ಇವರಲ್ಲಿ ಹೆಚ್ಚಿನವರು newscast-pratyakhsha.com ಎಂಬ ವೆಬ್‌ಸೈಟಿನ ಆಧಾರವಿಲ್ಲದ ಸುದ್ದಿಗಳನ್ನು ಹಂಚಿದ್ದಾರೆ.


ಓದಿ: ಕನ್ನಡ ಖಾಸಗಿ ಚಾನೆಲ್ ಮಾಲಿಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....