Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...