Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....