Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...