Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...