Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

- Advertisement -
- Advertisement -

ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ನಡೆದ ವಿಡಿಯೊ ಸಮೀಕ್ಷೆ ವೇಳೆ ಕಂಡು ಬಂದ ‘ಕಾರಂಜಿ’ಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಲಾಗಿತ್ತು. ಇದರ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಲೇಖನಗಳ ಮೂಲಕ ವೈರಲ್‌ ಚಿತ್ರಗಳ ವಾಸ್ತವ ಏನೆಂದು ತಿಳಿದುಕೊಳ್ಳೋಣ.

ಮೊದಲಿಗೆ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಯಾವ ಯಾವ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಗಮನಿಸೋಣ.

1ನೇ ಚಿತ್ರ – ಮಾಜಿ ಸಚಿವ ಕೆ.ಎಸ್‌‌. ಈಶ್ವರಪ್ಪ ಅವರ ಹೆಸರಿನಲ್ಲಿ ಪೋಸ್ಟ್

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್‌ ಒಂದನ್ನು ಶೇರ್ ಮಾಡಿದ್ದು ಮಾಡಿದ್ದು ಅದರಲ್ಲಿ “ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿರುವುದು ಬಚ್ಚಿಟ್ಟ ಕ್ರೌರ್ಯದ ಇತಿಹಾಸವನ್ನ ತೆರೆದಿಟ್ಟಿದೆ. ದೇಶದಲ್ಲಿರುವ ಎಲ್ಲ ಪುರಾತನ ಮಸೀದಿಗಳನ್ನು ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಿಯೇ ಕಟ್ಟಲಾಗಿದೆ ಹೊರತು ದೈವಭಕ್ತಿಯಿಂದ ಕಟ್ಟಿದ್ದಲ್ಲ. ದೋಷವಿರುವುದು ಮುಸಲ್ಮಾನರಲ್ಲಿ ಅಲ್ಲ ಮುಸಲ್ಮಾನರ ಧರ್ಮಗ್ರಂಥದಲ್ಲಿ” ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

2ನೇ ಚಿತ್ರ – 350 ವರ್ಷಗಳ ಕುತಂತ್ರದಾಟಕ್ಕೆ ತೆರೆ!

ಕಾಶಿ ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿನ ನೀರನ್ನು ಖಾಲಿ ಮಾಡುತ್ತಿದ್ದಂತೆ.. ಸಾಕ್ಷಾತ್ ವಿಶ್ವನಾಥನ (ಶಿವಲಿಂಗ) ದರ್ಶನ! ಎಂದು ಮತ್ತೊಂದು ಫೋಟೋವನ್ನು ಫೇಸ್‌ಬುಕ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದು, 350 ವರ್ಷಗಳ ಕುತಂತ್ರದಾಟಕ್ಕೆ ತೆರೆ ಎಂದು ಬರೆದಿದ್ದಾರೆ.
ಮೂರನೇಯದ್ದು ವಿಡಿಯೊ
ಮತ್ತೊಬ್ಬ ಫೇಸ್‌ಬುಕ್ ಬಳಕೆದಾರರೊಬ್ಬರು ಫೊಸ್ಟ್‌ವೊಂದನ್ನು ಮಾಡಿದ್ದು, ‘‘ಇಂದು ಬಹಳ ಸಂತೋಷದ ಸೋಮವಾರ ಮತ್ತು ಹುಣ್ಣಿಮೆ ಕೂಡ, ಜ್ಞಾನವಾಪಿ ಸಮೀಕ್ಷೆಯ ವೇಳೆ ಬಾವಿಯೊಳಗಿಂದ ಶಿವಲಿಂಗ ಪತ್ತೆಯಾಗಿದೆ.. ಸುಮಾರು 12 ಅಡಿಗಳಿಗಿಂತ ದೊಡ್ಡದು. ಜ್ಞಾನವಾಪಿ ದೇವಸ್ಥಾನದಲ್ಲಿ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಸೀಲ್ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ” ಎಂದು ಪೋಸ್ಟ್‌ ಮೂಲಕ ಫೋಟೋವನ್ನು ಶೇರ್ ಮಾಡಿದ್ದಾರೆ.

ಮಸೀದಿಯ ವಿಡಿಯೊ ಚಿತ್ರೀಕರಣ ದಾಖಲೀಕರಣದ ಸಮಯದಲ್ಲಿ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಅರ್ಜಿದಾರ ವಕೀಲರೊಬ್ಬರು ನ್ಯಾಯಾಲಯದಲ್ಲಿ ಹೇಳಿದ್ದರಿಂದ, ನ್ಯಾಯಾಲಯವು ಮಸೀದಿ ಆವರಣದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡುವಂತೆ ಆದೇಶಿಸಿತ್ತು.

ಮಸೀದಿ ಸಮಿತಿ ಹೇಳುವಂತೆ ಅದು ಮಸೀದಿ ಕೊಳದಲ್ಲಿ ಇರುವ ಕಾರಂಜಿಯಾಗಿದೆ. ಅಲ್ಲದೆ ಅದು ಯಾವುದೆ ರೀತಿಯಲ್ಲೂ ಶಿವಲಿಂಗದ ಮಾದರಿಯಲ್ಲಿ ಇಲ್ಲ. ಕೆಳಗಿನ ವಿಡಿಯೊದಲ್ಲಿ ಅದರ ದೃಶ್ಯಗಳನ್ನು ಓದುಗರು ನೋಡಬಹುದಾಗಿದೆ.

ಹಾಗಾದರೆ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆಯೇ? ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಶಿವಲಿಂಗದ ಹಲವು ವಿಡಿಯೊ ಮತ್ತು ಫೋಟೋಗಳು ಜ್ಞಾನವಾಪಿ ಮಸೀದಿ ಆವರಣದ ಪತ್ತೆಯಾದ ಫೋಟೋಗಳೇ? ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳ ಪ್ರತಿಪಾದನೆಯನ್ನು ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಫ್ಯಾಕ್ಟ್‌ಚೆಕ್:

1ನೇ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿರುವ ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಫೋಸ್ಟ್‌ ಮಾಡಿದ ದೊಡ್ಡ ಶಿವಲಿಂಗದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಫೋಟೋವನ್ನು ರನ್ ಮಾಡಿದಾಗ, ಫೋಟೋ ಒಡಿಸ್ಸಾದಲ್ಲಿರುವ ಬಾಬಾ ಭುಸಂದೇಶ್ವರ ದೇವಾಲಯಕ್ಕೆ ಸಂಬಂಧಿಸಿದೆ ಎಂದು ಕಂಡುಬಂದಿದೆ. ಆ ದೇವಾಲಯದ ಇತರ ಫೋಟೋಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಹಾಗಾಗಿ, ಕೆಎಸ್‌ ಈಶ್ವರಪ್ಪ ಹೆಸರಿನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯಲ್ಲಿ ತ್ರೈಲೋಕ್ಯಮಹಾದೇವ ನಂದಿ ಹಾಗೂ ಶಿವಲಿಂಗ ವಿಗ್ರಹ ಪತ್ತೆಯಾಗಿದೆ ಎಂದು ಅವರು ಪ್ರತಿಪಾದಿಸಿರುವುದು ಸುಳ್ಳಾಗಿದೆ. ಅವರು ಪೋಸ್ಟ್‌ ಮಾಡಿರುವ ಚಿತ್ರಕ್ಕೂ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುವ ಆಕೃತಿಗೂ ಯಾವುದೆ ಸಂಬಂಧವಿಲ್ಲ.

2ನೇ ಚಿತ್ರ

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಮತ್ತು ನಂದಿ ಫೋಟೋ ಎಂದು  ಹೇಳಿಕೊಂಡು ಹಂಚಿಕೊಳ್ಳಲಾಗಿರುವ ಫೋಟೋವನ್ನು ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ ಅದು ಸುಮಾರು ಎರಡು ವರ್ಷದಿಂದ ಇಂಟರ್‌ನೆಟ್‌‌ನಲ್ಲಿ (ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ) ಲಭ್ಯವಿರುವುದಾಗಿ ಕಂಡು ಬಂದಿದೆ.

ಶಿವಲಿಂಗ ಮತ್ತು ನಂದಿ ಚಿತ್ರವು ಡಿಜಿಟಲ್ ಆರ್ಟ್ ಮೂಲಕ ಚಿತ್ರಿಸಲಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಫೇಸ್‌ಬುಕ್‌ ಫೋಸ್ಟ್‌ನಲ್ಲಿ ಜ್ಞಾನವಾಪಿ ಮಸೀದಿಯ ಶಿವಲಿಂಗ ಎಂದು ಪ್ರತಿಪಾದಿಸಿದ ಫೋಸ್ಟ್ ಸುಳ್ಳಾಗಿದೆ.

 

View this post on Instagram

 

A post shared by mahadev bhakt 🙏 (@s_h_i_vsha_k_ti)

ಸುಮಾರು 2020ರಿಂದಲೂ ನಂದಿ ಮತ್ತು ಶಿವಲಿಂಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಚಿತ್ರವು  ಜ್ಞಾನವಾಪಿ ಮಸೀದಿಗೆ ಸಂಬಂಧಿಸಿಲ್ಲ ಎಂದು ಹೇಳಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಜ್ಞಾನವಾಪಿ ಮಸೀದಿಯಲ್ಲಿ ಕಂಡುಬರುವ ‘ಶಿವಲಿಂಗ’ದ ದೃಶ್ಯಗಳೆಂದು ಸಂಬಂಧವಿಲ್ಲದ ಚಿತ್ರಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ವಿಡಿಯೊ

ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದೆ ಎಂದು ಮತ್ತೊಂದು ವಿಡಿಯೊವನ್ನು ಶೇರ್ ಮಾಡಲಾಗುತ್ತಿದೆ. ಆದರೆ ಇದೂ ಕೂಡ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾಗಿದೆ ಎಂದು ಹೇಳುವ ಯಾವ ಪುರಾವೆಗಳು ಇಲ್ಲ. ವೀಡಿಯೊದ ನಿಖರವಾದ ಸ್ಥಳವನ್ನು ನಾವು ಕಂಡುಹಿಡಿಯಲಾಗದಿದ್ದರೂ, ವೀಡಿಯೊ ಕನಿಷ್ಠ ಒಂದು ವರ್ಷ ಹಳೆಯದು ಎಂದು ಕಂಡುಬಂದಿದೆ. ಹಾಗಾಗಿ ಇತ್ತೀಚೆಗಷ್ಟೇ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಹಳೆಯ ವಿಡಿಯೋ ಮತ್ತು ಫೋಟೋ ಶೇರ್ ಆಗುತ್ತಿವೆ.

ಒಟ್ಟಾರೆಯಾಗಿ ಹೇಳುವುದಾದರೆ ಜ್ಞಾನವಾಪಿಯಲ್ಲಿ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಪೋಸ್ಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೋಗಳು ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಫೋಟೋಗಳಲ್ಲ ಎಂದು ನಮ್ಮ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಜ್ಞಾನವಾಪಿ ಮಸೀದಿಯ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು ತೀರ್ಪು ಬಂದ ನಂತರವೇ ವಾಸ್ತವ ಏನೆಂದು ತಿಳಿಯುತ್ತದೆ. ಅಲ್ಲಿಯವರಗೆ ಸುಳ್ಳು ಸುದ್ದಿಯನ್ನು ಹರಡದಂತೆ ಎಚ್ಚರವಹಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...