Homeಮುಖಪುಟಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಈ ಪ್ರಯತ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾಂಗ್ರೆಸ್ ಮುಂದಾಗಿದೆ

- Advertisement -
- Advertisement -

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸಾರ್ವಜನಿಕ ರ್‍ಯಾಲಿಯಲ್ಲಿ ಮಾಡಿದ ಭಾಷಣದ ತುಣುಕ್ಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸ್ಮೃತಿ ಇರಾನಿ ಥೋರಾ ಗುಂಗೆ ಬೆಹ್ರಿ ಹೋ ಗಯಾ ಹೈ, ಮೈನ್ ಉಂಕೋ ಕೆಹನಾ ಚಾಹ್ತಾ ಹೂ – ಉಸಿ ದಯಾನ್ ಕೋ, ಮೆಹೆಂಗಾಯಿ ದಯಾನ್ ಕೋ ಡಾರ್ಲಿಂಗ್ ಬನಾಕೆ ಬೆಡ್‌ರೂಮ್ ಮೇ ಬೈತಾನೆ ಕಾ ಕಾಮ್ ಕಿಯಾ ಹೈ” (ಸ್ಮೃತಿ ಇರಾನಿ ಮೂಕ ಮತ್ತು ಕಿವುಡರಾಗಿದ್ದಾರೆ. ಈಗ ಅದೇ ಮಾಟಗಾತಿ ಹಣದುಬ್ಬರವೆಂಬ ದೆವ್ವವನ್ನು ‘ಡಾರ್ಲಿಂಗ್’ ಆಗಿ ಪರಿವರ್ತಿಸಿ ಮಲಗುವ ಕೋಣೆಯಲ್ಲಿ ಇರಿಸಿದ್ದಾರೆ) ಎಂದು ಶ್ರೀನಿವಾಸ್ ಹೇಳಿರುವುದಾಗಿ ಈ ವಿಡಿಯೊ ಕ್ಲಿಪ್‌ ಮೂಲಕ ಪ್ರತಿಪಾದಿಸಲಾಗುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. “ಈ ಅಸಭ್ಯ, ಸೆಕ್ಸಿಸ್ಟ್ ವ್ಯಕ್ತಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ” ಎಂದು ಬರೆದುಕೊಂಡಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆದ್ದಿದ್ದಕ್ಕಾಗಿ ಸ್ಮೃತಿ ಇರಾನಿ ಅವರನ್ನು “ಡಾರ್ಲಿಂಗ್ ಬನಾ ಕರ್ ಬೆಡರೂಮ್ ಮೆನ್” ಎಂದು ಬಿ.ವಿ.ಶ್ರೀನಿವಾಸ್ ಹೇಳಿರುವುದಾಗಿ ಆರೋಪಿಸಿದ್ದಾರೆ.

ಬಿಜೆಪಿ ಕರ್ನಾಟಕ ಕೂಡ ಇದೇ ವಿಡಿಯೊವನ್ನು ಟ್ವೀಟ್ ಮಾಡಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯವರಿಗೆ ಸ್ಮೃತಿ ಇರಾನಿ ಅವರು ಉಂಟುಮಾಡಿದ ಸೋಲನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಪಕ್ಷವು ಸ್ತ್ರೀದ್ವೇಷಿಯಾಗಿದೆ, ವಿಕೃತತೆಯ ಕೂಪವಾಗಿ ಮಾರ್ಪಟ್ಟಿದೆ ಎಂದು ದೂರಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಟ್ವೀಟ್ ಮಾಡಿದ್ದಾರೆ. “ಶ್ರೀನಿವಾಸ್ ಬಿ.ವಿ. ಅವರ ಟೀಕೆಗಳು ಶೋಚನೀಯವಾಗಿವೆ, ಕಾಮಪ್ರಚೋದಕವಾಗಿವೆ. ಪ್ರಿಯಾಂಕಾ ಗಾಂಧಿಯವರು ಈ ಭಾಷಣವನ್ನು ಖಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಹೀಗೆ ಅನೇಕರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸತ್ಯಾಂಶವೇನು?

ಈ ವಿಡಿಯೋ ಬಿಜೆಪಿ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ, ಶ್ರೀನಿವಾಸ್ ಬಿ.ವಿ. ಅವರು ತಮ್ಮ ಭಾಷಣದ ದೀರ್ಘ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ.

“ಸಂಘಿಗಳು ಸುಧಾರಿಸುವುದಿಲ್ಲ. ಪೂರ್ಣ ಹೇಳಿಕೆಯನ್ನು ಅಪೂರ್ಣವಾಗಿ ತೋರಿಸಿದ್ದಾರೆ. 2014 ರ ಮೊದಲು ನೀವು ನೀಡಿದ ಹೇಳಿಕೆಯನ್ನು ನಾನು ಉಲ್ಲೇಖಿಸಿದ್ದೇನೆ. ₹ 400 ಎಲ್‌ಪಿಜಿ ಸಿಲಿಂಡರ್‌ನ ಹಣದುಬ್ಬರವು ನಿಮಗೆ ‘ಮಾಟಗಾತಿ’ಯಂತೆ ಕಾಣಿಸುತ್ತಿತ್ತು. ಇಂದು ಎಲ್‌ಪಿಜಿ ಬೆಲೆ ₹ 1100 ರೂ. ಆಗಿದೆ. ಅಂದು ದಯಾನ್‌ (ಮಾಟಗಾತಿ/ದೆವ್ವ) ಆಗಿದ್ದ ಹಣದುಬ್ಬರ ‘ಡಾರ್ಲಿಂಗ್’ ಆಗಿದೆ” ಎಂದಿದ್ದಾರೆ.

ಶ್ರೀನಿವಾಸ್ ಅವರು ಸ್ಮೃತಿ ಇರಾನಿಯವರನ್ನು ಮಾಟಗಾತಿ (ದಯಾನ್) ಎಂದು ಉಲ್ಲೇಖಿಸಿಲ್ಲ. ಕೆಲವರು ಪ್ರತಿಪಾದಿಸುತ್ತಿರುವುದಕ್ಕೆ ವಿರುದ್ಧವಾಗಿ ಇಲ್ಲಿನ ವಿಡಿಯೊವಿದೆ. ಬಿಜೆಪಿ ರಾಜಕಾರಣಿಗಳು ತಮ್ಮ ಹಿಂಬಾಲಕರಿಗೆ ತಪ್ಪಾಗಿ ವಿಡಿಯೊವನ್ನು ಒದಗಿಸಿದ್ದಾರೆ. ‘ಮಹಾಂಗೈ ದಯಾನ್’ ಎಂಬ ಸಾಲು ಪೀಪ್ಲಿ ಲೈವ್ (2010) ಚಿತ್ರದ ನಂತರ ಪ್ರಸಿದ್ಧವಾಗಿದೆ. ಇದೇ ಸಾಲಿನ ಹಾಡು ಆ ಸಿನಿಮಾದಲ್ಲಿದೆ. ಬೆಲೆ ಏರಿಕೆಯಿಂದಾಗುವ ಪ್ರಮುಖ ಸಾಮಾಜಿಕ-ಆರ್ಥಿಕ ಸಮಸ್ಯೆಯ ಕಡೆಗೆ ಈ ಹಾಡು ಗಮನ ಸೆಳೆಯುತ್ತದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ವಾಕ್‌ಚಾತುರ್ಯದ ಭಾಗವಾಗಿ ಈ ಹಾಡನ್ನು ಹೆಚ್ಚಾಗಿ ಬಳಸಲಾಗುತ್ತದೆ.  2012ರ ಹಿಂದೆ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ‘ಮಹಾಂಗೈ ದಯಾನ್‌’ ಹಾಡನ್ನು ಗುನುಗಿದ್ದರು.

ಶ್ರೀನಿವಾಸ್ ಬಿ.ವಿ ಅವರೂ ಇದೇ ರೀತಿಯಲ್ಲಿ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. 2014ಕ್ಕಿಂತ ಮೊದಲು ‘ಮಹಾಂಗೈ ದಯಾನ್’ ಹಾಡನ್ನು ಬಳಸಿದ ಅದೇ ಬಿಜೆಪಿ, ಈಗ ಹಣದುಬ್ಬರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಹಣದುಬ್ಬರವನ್ನು ತಮ್ಮ ಮಲಗುವ ಕೋಣೆಗೆ ಬಿಜೆಪಿ ತಂದಿದೆ. ಅದನ್ನು ತಮ್ಮ ಪ್ರಿಯತಮೆಯನ್ನಾಗಿ ಮಾಡಿಕೊಂಡಂತಿದೆ” ಎಂದಿದ್ದಾರೆ. ಸ್ಮೃತಿ ಇರಾನಿ ಅವರು ಬಡವರ ಬೇಡಿಕೆಗಳಿಗೆ ಕಿವುಡರಾಗಿದ್ದಾರೆ ಎಂದು ಹೇಳುವ ಮೂಲಕ ಬಿ.ವಿ.ಶ್ರೀನಿವಾಸ್ ಅವರು ಟಾರ್ಗೆಟ್ ಆಗಿರುವುದು ನಿಜವಾದರೂ, ಅವರು ಮೇಲಿನ ಹೇಳಿಕೆಯನ್ನು ಕೇವಲ ರೂಪಕವಾಗಿ ಬಳಸಿರುವುದು ಸ್ಪಷ್ಟವಾಗುತ್ತದೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಬಿ.ವಿ.ಶ್ರೀನಿವಾಸ್ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿ ಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ಮಾತನ್ನು ಹೇಳಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ 400 ರೂ ಇದ್ದಾಗ ‘ಮೆಹಂಗಾಯಿ ದಾಯನ್’ ಎಂದು ಹೇಳುತ್ತಿದ್ದ ಅವರು, ಈಗ ಬೆಲೆ 1100 ರೂ.ಗೆ ತಲುಪಿದಾಗ ಮಾತನಾಡುತ್ತಿಲ್ಲ. ಈ ‘ದಾಯನ್‌’ (ದೆವ್ವ) ಈಗ ಪ್ರಿಯತಮೆಯಾಗಿದೆ. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಅವರಿಗೆ ಹಳೆಯ ದಿನಗಳನ್ನು ನೆನಪಿಸಿದೆ. ಅವರಿಗೆ ಕಿವಿ ಕೇಳಿಸುವುದಿಲ್ಲ. ಬೆಲೆ ಏರಿಕೆಯೆಂದು ರಸ್ತೆಯಲ್ಲಿ ಕುಣಿಯುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ? ಸ್ಮೃತಿ ಇರಾನಿಯವರು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರಗಳಾದಾಗ ಇವರು ಮಾತನಾಡುವುದಿಲ್ಲ. ಹತ್ರಾಸ್‌ ಪ್ರಕರಣ ಇರಬಹುದು, ಉನ್ನಾವೋ ಪ್ರಕರಣ ಇರಬಹುದು- ಇದ್ಯಾವುಕ್ಕೂ ಪ್ರತಿಕ್ರಿಯಿಸಲಿಲ್ಲ. ಕಾನ್ಫುರದಲ್ಲಿ ತಾಯಿ ಮತ್ತು ಮಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಯಿತು. ನಿಶಿಕಾಂತ್ ದುಬೆ ಎಂಬಾತ ಬಿಜೆಪಿಯ ಸಂಸದ. ಮತ್ತೊಬ್ಬ ಮಹಿಳಾ ಜನಪ್ರತಿನಿಧಿಗೆ ಹೀನಾಯವಾಗಿ ನಿಂದಿಸಿ, ಇವರೆಲ್ಲ ರೆಡ್‌ಲೈಟ್‌ ಪ್ರದೇಶದವರು ಎಂದನು. ಅದ್ಯಾವುದಕ್ಕೂ ಸ್ಮೃತಿಯವರು ಪ್ರತಿಕ್ರಿಯಿಸಲಿಲ್ಲ. ಮಹಿಳಾ ಇಲಾಖೆಗೆ ಅವರು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

ಕಾನೂನು ಕ್ರಮಕ್ಕೆ ಚಿಂತನೆ

“ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಶೋಚನೀಯ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಅಧಿಕಾರದಲ್ಲಿರುವ ಕೆಲವರು ಆರೋಪಿಸಿರುವ ಇಂತಹ ಯಾವುದೇ ಆಲೋಚನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಕ್ರಮ ಜರುಗಿಸುತ್ತೇವೆ” ಎಂದು ಯುವ ಕಾಂಗ್ರೆಸ್‌ ಕಾನೂನು ಕೋಶದ ಅಧ್ಯಕ್ಷ ರೂಪೇಶ್ ಭದೌರಿಯಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...