Homeಮುಖಪುಟಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಈ ಪ್ರಯತ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾಂಗ್ರೆಸ್ ಮುಂದಾಗಿದೆ

- Advertisement -
- Advertisement -

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸಾರ್ವಜನಿಕ ರ್‍ಯಾಲಿಯಲ್ಲಿ ಮಾಡಿದ ಭಾಷಣದ ತುಣುಕ್ಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸ್ಮೃತಿ ಇರಾನಿ ಥೋರಾ ಗುಂಗೆ ಬೆಹ್ರಿ ಹೋ ಗಯಾ ಹೈ, ಮೈನ್ ಉಂಕೋ ಕೆಹನಾ ಚಾಹ್ತಾ ಹೂ – ಉಸಿ ದಯಾನ್ ಕೋ, ಮೆಹೆಂಗಾಯಿ ದಯಾನ್ ಕೋ ಡಾರ್ಲಿಂಗ್ ಬನಾಕೆ ಬೆಡ್‌ರೂಮ್ ಮೇ ಬೈತಾನೆ ಕಾ ಕಾಮ್ ಕಿಯಾ ಹೈ” (ಸ್ಮೃತಿ ಇರಾನಿ ಮೂಕ ಮತ್ತು ಕಿವುಡರಾಗಿದ್ದಾರೆ. ಈಗ ಅದೇ ಮಾಟಗಾತಿ ಹಣದುಬ್ಬರವೆಂಬ ದೆವ್ವವನ್ನು ‘ಡಾರ್ಲಿಂಗ್’ ಆಗಿ ಪರಿವರ್ತಿಸಿ ಮಲಗುವ ಕೋಣೆಯಲ್ಲಿ ಇರಿಸಿದ್ದಾರೆ) ಎಂದು ಶ್ರೀನಿವಾಸ್ ಹೇಳಿರುವುದಾಗಿ ಈ ವಿಡಿಯೊ ಕ್ಲಿಪ್‌ ಮೂಲಕ ಪ್ರತಿಪಾದಿಸಲಾಗುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. “ಈ ಅಸಭ್ಯ, ಸೆಕ್ಸಿಸ್ಟ್ ವ್ಯಕ್ತಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ” ಎಂದು ಬರೆದುಕೊಂಡಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆದ್ದಿದ್ದಕ್ಕಾಗಿ ಸ್ಮೃತಿ ಇರಾನಿ ಅವರನ್ನು “ಡಾರ್ಲಿಂಗ್ ಬನಾ ಕರ್ ಬೆಡರೂಮ್ ಮೆನ್” ಎಂದು ಬಿ.ವಿ.ಶ್ರೀನಿವಾಸ್ ಹೇಳಿರುವುದಾಗಿ ಆರೋಪಿಸಿದ್ದಾರೆ.

ಬಿಜೆಪಿ ಕರ್ನಾಟಕ ಕೂಡ ಇದೇ ವಿಡಿಯೊವನ್ನು ಟ್ವೀಟ್ ಮಾಡಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯವರಿಗೆ ಸ್ಮೃತಿ ಇರಾನಿ ಅವರು ಉಂಟುಮಾಡಿದ ಸೋಲನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಪಕ್ಷವು ಸ್ತ್ರೀದ್ವೇಷಿಯಾಗಿದೆ, ವಿಕೃತತೆಯ ಕೂಪವಾಗಿ ಮಾರ್ಪಟ್ಟಿದೆ ಎಂದು ದೂರಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಟ್ವೀಟ್ ಮಾಡಿದ್ದಾರೆ. “ಶ್ರೀನಿವಾಸ್ ಬಿ.ವಿ. ಅವರ ಟೀಕೆಗಳು ಶೋಚನೀಯವಾಗಿವೆ, ಕಾಮಪ್ರಚೋದಕವಾಗಿವೆ. ಪ್ರಿಯಾಂಕಾ ಗಾಂಧಿಯವರು ಈ ಭಾಷಣವನ್ನು ಖಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಹೀಗೆ ಅನೇಕರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸತ್ಯಾಂಶವೇನು?

ಈ ವಿಡಿಯೋ ಬಿಜೆಪಿ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ, ಶ್ರೀನಿವಾಸ್ ಬಿ.ವಿ. ಅವರು ತಮ್ಮ ಭಾಷಣದ ದೀರ್ಘ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ.

“ಸಂಘಿಗಳು ಸುಧಾರಿಸುವುದಿಲ್ಲ. ಪೂರ್ಣ ಹೇಳಿಕೆಯನ್ನು ಅಪೂರ್ಣವಾಗಿ ತೋರಿಸಿದ್ದಾರೆ. 2014 ರ ಮೊದಲು ನೀವು ನೀಡಿದ ಹೇಳಿಕೆಯನ್ನು ನಾನು ಉಲ್ಲೇಖಿಸಿದ್ದೇನೆ. ₹ 400 ಎಲ್‌ಪಿಜಿ ಸಿಲಿಂಡರ್‌ನ ಹಣದುಬ್ಬರವು ನಿಮಗೆ ‘ಮಾಟಗಾತಿ’ಯಂತೆ ಕಾಣಿಸುತ್ತಿತ್ತು. ಇಂದು ಎಲ್‌ಪಿಜಿ ಬೆಲೆ ₹ 1100 ರೂ. ಆಗಿದೆ. ಅಂದು ದಯಾನ್‌ (ಮಾಟಗಾತಿ/ದೆವ್ವ) ಆಗಿದ್ದ ಹಣದುಬ್ಬರ ‘ಡಾರ್ಲಿಂಗ್’ ಆಗಿದೆ” ಎಂದಿದ್ದಾರೆ.

ಶ್ರೀನಿವಾಸ್ ಅವರು ಸ್ಮೃತಿ ಇರಾನಿಯವರನ್ನು ಮಾಟಗಾತಿ (ದಯಾನ್) ಎಂದು ಉಲ್ಲೇಖಿಸಿಲ್ಲ. ಕೆಲವರು ಪ್ರತಿಪಾದಿಸುತ್ತಿರುವುದಕ್ಕೆ ವಿರುದ್ಧವಾಗಿ ಇಲ್ಲಿನ ವಿಡಿಯೊವಿದೆ. ಬಿಜೆಪಿ ರಾಜಕಾರಣಿಗಳು ತಮ್ಮ ಹಿಂಬಾಲಕರಿಗೆ ತಪ್ಪಾಗಿ ವಿಡಿಯೊವನ್ನು ಒದಗಿಸಿದ್ದಾರೆ. ‘ಮಹಾಂಗೈ ದಯಾನ್’ ಎಂಬ ಸಾಲು ಪೀಪ್ಲಿ ಲೈವ್ (2010) ಚಿತ್ರದ ನಂತರ ಪ್ರಸಿದ್ಧವಾಗಿದೆ. ಇದೇ ಸಾಲಿನ ಹಾಡು ಆ ಸಿನಿಮಾದಲ್ಲಿದೆ. ಬೆಲೆ ಏರಿಕೆಯಿಂದಾಗುವ ಪ್ರಮುಖ ಸಾಮಾಜಿಕ-ಆರ್ಥಿಕ ಸಮಸ್ಯೆಯ ಕಡೆಗೆ ಈ ಹಾಡು ಗಮನ ಸೆಳೆಯುತ್ತದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ವಾಕ್‌ಚಾತುರ್ಯದ ಭಾಗವಾಗಿ ಈ ಹಾಡನ್ನು ಹೆಚ್ಚಾಗಿ ಬಳಸಲಾಗುತ್ತದೆ.  2012ರ ಹಿಂದೆ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ‘ಮಹಾಂಗೈ ದಯಾನ್‌’ ಹಾಡನ್ನು ಗುನುಗಿದ್ದರು.

ಶ್ರೀನಿವಾಸ್ ಬಿ.ವಿ ಅವರೂ ಇದೇ ರೀತಿಯಲ್ಲಿ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. 2014ಕ್ಕಿಂತ ಮೊದಲು ‘ಮಹಾಂಗೈ ದಯಾನ್’ ಹಾಡನ್ನು ಬಳಸಿದ ಅದೇ ಬಿಜೆಪಿ, ಈಗ ಹಣದುಬ್ಬರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಹಣದುಬ್ಬರವನ್ನು ತಮ್ಮ ಮಲಗುವ ಕೋಣೆಗೆ ಬಿಜೆಪಿ ತಂದಿದೆ. ಅದನ್ನು ತಮ್ಮ ಪ್ರಿಯತಮೆಯನ್ನಾಗಿ ಮಾಡಿಕೊಂಡಂತಿದೆ” ಎಂದಿದ್ದಾರೆ. ಸ್ಮೃತಿ ಇರಾನಿ ಅವರು ಬಡವರ ಬೇಡಿಕೆಗಳಿಗೆ ಕಿವುಡರಾಗಿದ್ದಾರೆ ಎಂದು ಹೇಳುವ ಮೂಲಕ ಬಿ.ವಿ.ಶ್ರೀನಿವಾಸ್ ಅವರು ಟಾರ್ಗೆಟ್ ಆಗಿರುವುದು ನಿಜವಾದರೂ, ಅವರು ಮೇಲಿನ ಹೇಳಿಕೆಯನ್ನು ಕೇವಲ ರೂಪಕವಾಗಿ ಬಳಸಿರುವುದು ಸ್ಪಷ್ಟವಾಗುತ್ತದೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಬಿ.ವಿ.ಶ್ರೀನಿವಾಸ್ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿ ಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ಮಾತನ್ನು ಹೇಳಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ 400 ರೂ ಇದ್ದಾಗ ‘ಮೆಹಂಗಾಯಿ ದಾಯನ್’ ಎಂದು ಹೇಳುತ್ತಿದ್ದ ಅವರು, ಈಗ ಬೆಲೆ 1100 ರೂ.ಗೆ ತಲುಪಿದಾಗ ಮಾತನಾಡುತ್ತಿಲ್ಲ. ಈ ‘ದಾಯನ್‌’ (ದೆವ್ವ) ಈಗ ಪ್ರಿಯತಮೆಯಾಗಿದೆ. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಅವರಿಗೆ ಹಳೆಯ ದಿನಗಳನ್ನು ನೆನಪಿಸಿದೆ. ಅವರಿಗೆ ಕಿವಿ ಕೇಳಿಸುವುದಿಲ್ಲ. ಬೆಲೆ ಏರಿಕೆಯೆಂದು ರಸ್ತೆಯಲ್ಲಿ ಕುಣಿಯುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ? ಸ್ಮೃತಿ ಇರಾನಿಯವರು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರಗಳಾದಾಗ ಇವರು ಮಾತನಾಡುವುದಿಲ್ಲ. ಹತ್ರಾಸ್‌ ಪ್ರಕರಣ ಇರಬಹುದು, ಉನ್ನಾವೋ ಪ್ರಕರಣ ಇರಬಹುದು- ಇದ್ಯಾವುಕ್ಕೂ ಪ್ರತಿಕ್ರಿಯಿಸಲಿಲ್ಲ. ಕಾನ್ಫುರದಲ್ಲಿ ತಾಯಿ ಮತ್ತು ಮಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಯಿತು. ನಿಶಿಕಾಂತ್ ದುಬೆ ಎಂಬಾತ ಬಿಜೆಪಿಯ ಸಂಸದ. ಮತ್ತೊಬ್ಬ ಮಹಿಳಾ ಜನಪ್ರತಿನಿಧಿಗೆ ಹೀನಾಯವಾಗಿ ನಿಂದಿಸಿ, ಇವರೆಲ್ಲ ರೆಡ್‌ಲೈಟ್‌ ಪ್ರದೇಶದವರು ಎಂದನು. ಅದ್ಯಾವುದಕ್ಕೂ ಸ್ಮೃತಿಯವರು ಪ್ರತಿಕ್ರಿಯಿಸಲಿಲ್ಲ. ಮಹಿಳಾ ಇಲಾಖೆಗೆ ಅವರು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

ಕಾನೂನು ಕ್ರಮಕ್ಕೆ ಚಿಂತನೆ

“ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಶೋಚನೀಯ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಅಧಿಕಾರದಲ್ಲಿರುವ ಕೆಲವರು ಆರೋಪಿಸಿರುವ ಇಂತಹ ಯಾವುದೇ ಆಲೋಚನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಕ್ರಮ ಜರುಗಿಸುತ್ತೇವೆ” ಎಂದು ಯುವ ಕಾಂಗ್ರೆಸ್‌ ಕಾನೂನು ಕೋಶದ ಅಧ್ಯಕ್ಷ ರೂಪೇಶ್ ಭದೌರಿಯಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...