Homeಮುಖಪುಟಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಈ ಪ್ರಯತ್ನದ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾಂಗ್ರೆಸ್ ಮುಂದಾಗಿದೆ

- Advertisement -
- Advertisement -

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಸಾರ್ವಜನಿಕ ರ್‍ಯಾಲಿಯಲ್ಲಿ ಮಾಡಿದ ಭಾಷಣದ ತುಣುಕ್ಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸ್ಮೃತಿ ಇರಾನಿ ಥೋರಾ ಗುಂಗೆ ಬೆಹ್ರಿ ಹೋ ಗಯಾ ಹೈ, ಮೈನ್ ಉಂಕೋ ಕೆಹನಾ ಚಾಹ್ತಾ ಹೂ – ಉಸಿ ದಯಾನ್ ಕೋ, ಮೆಹೆಂಗಾಯಿ ದಯಾನ್ ಕೋ ಡಾರ್ಲಿಂಗ್ ಬನಾಕೆ ಬೆಡ್‌ರೂಮ್ ಮೇ ಬೈತಾನೆ ಕಾ ಕಾಮ್ ಕಿಯಾ ಹೈ” (ಸ್ಮೃತಿ ಇರಾನಿ ಮೂಕ ಮತ್ತು ಕಿವುಡರಾಗಿದ್ದಾರೆ. ಈಗ ಅದೇ ಮಾಟಗಾತಿ ಹಣದುಬ್ಬರವೆಂಬ ದೆವ್ವವನ್ನು ‘ಡಾರ್ಲಿಂಗ್’ ಆಗಿ ಪರಿವರ್ತಿಸಿ ಮಲಗುವ ಕೋಣೆಯಲ್ಲಿ ಇರಿಸಿದ್ದಾರೆ) ಎಂದು ಶ್ರೀನಿವಾಸ್ ಹೇಳಿರುವುದಾಗಿ ಈ ವಿಡಿಯೊ ಕ್ಲಿಪ್‌ ಮೂಲಕ ಪ್ರತಿಪಾದಿಸಲಾಗುತ್ತಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ. “ಈ ಅಸಭ್ಯ, ಸೆಕ್ಸಿಸ್ಟ್ ವ್ಯಕ್ತಿ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ” ಎಂದು ಬರೆದುಕೊಂಡಿದ್ದಾರೆ. ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗೆದ್ದಿದ್ದಕ್ಕಾಗಿ ಸ್ಮೃತಿ ಇರಾನಿ ಅವರನ್ನು “ಡಾರ್ಲಿಂಗ್ ಬನಾ ಕರ್ ಬೆಡರೂಮ್ ಮೆನ್” ಎಂದು ಬಿ.ವಿ.ಶ್ರೀನಿವಾಸ್ ಹೇಳಿರುವುದಾಗಿ ಆರೋಪಿಸಿದ್ದಾರೆ.

ಬಿಜೆಪಿ ಕರ್ನಾಟಕ ಕೂಡ ಇದೇ ವಿಡಿಯೊವನ್ನು ಟ್ವೀಟ್ ಮಾಡಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯವರಿಗೆ ಸ್ಮೃತಿ ಇರಾನಿ ಅವರು ಉಂಟುಮಾಡಿದ ಸೋಲನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ ಪಕ್ಷವು ಸ್ತ್ರೀದ್ವೇಷಿಯಾಗಿದೆ, ವಿಕೃತತೆಯ ಕೂಪವಾಗಿ ಮಾರ್ಪಟ್ಟಿದೆ ಎಂದು ದೂರಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರೂ ಟ್ವೀಟ್ ಮಾಡಿದ್ದಾರೆ. “ಶ್ರೀನಿವಾಸ್ ಬಿ.ವಿ. ಅವರ ಟೀಕೆಗಳು ಶೋಚನೀಯವಾಗಿವೆ, ಕಾಮಪ್ರಚೋದಕವಾಗಿವೆ. ಪ್ರಿಯಾಂಕಾ ಗಾಂಧಿಯವರು ಈ ಭಾಷಣವನ್ನು ಖಂಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಹೀಗೆ ಅನೇಕರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಸತ್ಯಾಂಶವೇನು?

ಈ ವಿಡಿಯೋ ಬಿಜೆಪಿ ಕಾರ್ಯಕರ್ತರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ನಂತರ, ಶ್ರೀನಿವಾಸ್ ಬಿ.ವಿ. ಅವರು ತಮ್ಮ ಭಾಷಣದ ದೀರ್ಘ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ.

“ಸಂಘಿಗಳು ಸುಧಾರಿಸುವುದಿಲ್ಲ. ಪೂರ್ಣ ಹೇಳಿಕೆಯನ್ನು ಅಪೂರ್ಣವಾಗಿ ತೋರಿಸಿದ್ದಾರೆ. 2014 ರ ಮೊದಲು ನೀವು ನೀಡಿದ ಹೇಳಿಕೆಯನ್ನು ನಾನು ಉಲ್ಲೇಖಿಸಿದ್ದೇನೆ. ₹ 400 ಎಲ್‌ಪಿಜಿ ಸಿಲಿಂಡರ್‌ನ ಹಣದುಬ್ಬರವು ನಿಮಗೆ ‘ಮಾಟಗಾತಿ’ಯಂತೆ ಕಾಣಿಸುತ್ತಿತ್ತು. ಇಂದು ಎಲ್‌ಪಿಜಿ ಬೆಲೆ ₹ 1100 ರೂ. ಆಗಿದೆ. ಅಂದು ದಯಾನ್‌ (ಮಾಟಗಾತಿ/ದೆವ್ವ) ಆಗಿದ್ದ ಹಣದುಬ್ಬರ ‘ಡಾರ್ಲಿಂಗ್’ ಆಗಿದೆ” ಎಂದಿದ್ದಾರೆ.

ಶ್ರೀನಿವಾಸ್ ಅವರು ಸ್ಮೃತಿ ಇರಾನಿಯವರನ್ನು ಮಾಟಗಾತಿ (ದಯಾನ್) ಎಂದು ಉಲ್ಲೇಖಿಸಿಲ್ಲ. ಕೆಲವರು ಪ್ರತಿಪಾದಿಸುತ್ತಿರುವುದಕ್ಕೆ ವಿರುದ್ಧವಾಗಿ ಇಲ್ಲಿನ ವಿಡಿಯೊವಿದೆ. ಬಿಜೆಪಿ ರಾಜಕಾರಣಿಗಳು ತಮ್ಮ ಹಿಂಬಾಲಕರಿಗೆ ತಪ್ಪಾಗಿ ವಿಡಿಯೊವನ್ನು ಒದಗಿಸಿದ್ದಾರೆ. ‘ಮಹಾಂಗೈ ದಯಾನ್’ ಎಂಬ ಸಾಲು ಪೀಪ್ಲಿ ಲೈವ್ (2010) ಚಿತ್ರದ ನಂತರ ಪ್ರಸಿದ್ಧವಾಗಿದೆ. ಇದೇ ಸಾಲಿನ ಹಾಡು ಆ ಸಿನಿಮಾದಲ್ಲಿದೆ. ಬೆಲೆ ಏರಿಕೆಯಿಂದಾಗುವ ಪ್ರಮುಖ ಸಾಮಾಜಿಕ-ಆರ್ಥಿಕ ಸಮಸ್ಯೆಯ ಕಡೆಗೆ ಈ ಹಾಡು ಗಮನ ಸೆಳೆಯುತ್ತದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ರಾಜಕೀಯ ವಾಕ್‌ಚಾತುರ್ಯದ ಭಾಗವಾಗಿ ಈ ಹಾಡನ್ನು ಹೆಚ್ಚಾಗಿ ಬಳಸಲಾಗುತ್ತದೆ.  2012ರ ಹಿಂದೆ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರು ‘ಮಹಾಂಗೈ ದಯಾನ್‌’ ಹಾಡನ್ನು ಗುನುಗಿದ್ದರು.

ಶ್ರೀನಿವಾಸ್ ಬಿ.ವಿ ಅವರೂ ಇದೇ ರೀತಿಯಲ್ಲಿ ರಾಜಕೀಯ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. 2014ಕ್ಕಿಂತ ಮೊದಲು ‘ಮಹಾಂಗೈ ದಯಾನ್’ ಹಾಡನ್ನು ಬಳಸಿದ ಅದೇ ಬಿಜೆಪಿ, ಈಗ ಹಣದುಬ್ಬರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

“ಹಣದುಬ್ಬರವನ್ನು ತಮ್ಮ ಮಲಗುವ ಕೋಣೆಗೆ ಬಿಜೆಪಿ ತಂದಿದೆ. ಅದನ್ನು ತಮ್ಮ ಪ್ರಿಯತಮೆಯನ್ನಾಗಿ ಮಾಡಿಕೊಂಡಂತಿದೆ” ಎಂದಿದ್ದಾರೆ. ಸ್ಮೃತಿ ಇರಾನಿ ಅವರು ಬಡವರ ಬೇಡಿಕೆಗಳಿಗೆ ಕಿವುಡರಾಗಿದ್ದಾರೆ ಎಂದು ಹೇಳುವ ಮೂಲಕ ಬಿ.ವಿ.ಶ್ರೀನಿವಾಸ್ ಅವರು ಟಾರ್ಗೆಟ್ ಆಗಿರುವುದು ನಿಜವಾದರೂ, ಅವರು ಮೇಲಿನ ಹೇಳಿಕೆಯನ್ನು ಕೇವಲ ರೂಪಕವಾಗಿ ಬಳಸಿರುವುದು ಸ್ಪಷ್ಟವಾಗುತ್ತದೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಬಿ.ವಿ.ಶ್ರೀನಿವಾಸ್ ಅವರು, “ಮನಮೋಹನ್ ಸಿಂಗ್ ಅವರು ಪ್ರಧಾನಿ ಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ಮಾತನ್ನು ಹೇಳಿದ್ದರು. ಗ್ಯಾಸ್ ಸಿಲಿಂಡರ್ ಬೆಲೆ 400 ರೂ ಇದ್ದಾಗ ‘ಮೆಹಂಗಾಯಿ ದಾಯನ್’ ಎಂದು ಹೇಳುತ್ತಿದ್ದ ಅವರು, ಈಗ ಬೆಲೆ 1100 ರೂ.ಗೆ ತಲುಪಿದಾಗ ಮಾತನಾಡುತ್ತಿಲ್ಲ. ಈ ‘ದಾಯನ್‌’ (ದೆವ್ವ) ಈಗ ಪ್ರಿಯತಮೆಯಾಗಿದೆ. ಇದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

“ಅವರಿಗೆ ಹಳೆಯ ದಿನಗಳನ್ನು ನೆನಪಿಸಿದೆ. ಅವರಿಗೆ ಕಿವಿ ಕೇಳಿಸುವುದಿಲ್ಲ. ಬೆಲೆ ಏರಿಕೆಯೆಂದು ರಸ್ತೆಯಲ್ಲಿ ಕುಣಿಯುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ? ಸ್ಮೃತಿ ಇರಾನಿಯವರು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾಗಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರಗಳಾದಾಗ ಇವರು ಮಾತನಾಡುವುದಿಲ್ಲ. ಹತ್ರಾಸ್‌ ಪ್ರಕರಣ ಇರಬಹುದು, ಉನ್ನಾವೋ ಪ್ರಕರಣ ಇರಬಹುದು- ಇದ್ಯಾವುಕ್ಕೂ ಪ್ರತಿಕ್ರಿಯಿಸಲಿಲ್ಲ. ಕಾನ್ಫುರದಲ್ಲಿ ತಾಯಿ ಮತ್ತು ಮಗಳನ್ನು ಬೆಂಕಿಯಲ್ಲಿ ಹಾಕಿ ಸುಡಲಾಯಿತು. ನಿಶಿಕಾಂತ್ ದುಬೆ ಎಂಬಾತ ಬಿಜೆಪಿಯ ಸಂಸದ. ಮತ್ತೊಬ್ಬ ಮಹಿಳಾ ಜನಪ್ರತಿನಿಧಿಗೆ ಹೀನಾಯವಾಗಿ ನಿಂದಿಸಿ, ಇವರೆಲ್ಲ ರೆಡ್‌ಲೈಟ್‌ ಪ್ರದೇಶದವರು ಎಂದನು. ಅದ್ಯಾವುದಕ್ಕೂ ಸ್ಮೃತಿಯವರು ಪ್ರತಿಕ್ರಿಯಿಸಲಿಲ್ಲ. ಮಹಿಳಾ ಇಲಾಖೆಗೆ ಅವರು ರಾಜೀನಾಮೆ ಕೊಡಬೇಕು” ಎಂದು ಒತ್ತಾಯಿಸಿದರು.

ಕಾನೂನು ಕ್ರಮಕ್ಕೆ ಚಿಂತನೆ

“ಯುವ ಕಾಂಗ್ರೆಸ್‌ ಅಧ್ಯಕ್ಷರ ಪ್ರತಿಷ್ಠೆಗೆ ಕಳಂಕ ತರುವ ಶೋಚನೀಯ ಪ್ರಯತ್ನವನ್ನು ನಾವು ಖಂಡಿಸುತ್ತೇವೆ. ಅಧಿಕಾರದಲ್ಲಿರುವ ಕೆಲವರು ಆರೋಪಿಸಿರುವ ಇಂತಹ ಯಾವುದೇ ಆಲೋಚನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಕ್ರಮ ಜರುಗಿಸುತ್ತೇವೆ” ಎಂದು ಯುವ ಕಾಂಗ್ರೆಸ್‌ ಕಾನೂನು ಕೋಶದ ಅಧ್ಯಕ್ಷ ರೂಪೇಶ್ ಭದೌರಿಯಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....