Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್...

ಫ್ಯಾಕ್ಟ್‌ಚೆಕ್: ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

- Advertisement -
- Advertisement -

ಚಾಮರಾಜನಗರ ಜಿಲ್ಲೆಯ SP ದಿವ್ಯಾ ಸಾರಾ ಥಾಮಸ್ ಕೊಳ್ಳೇಗಾಲದ ಆಂಜನೇಯ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ಅರ್ಚಕರಿಂದ ಏಸುವಿನ ಫೋಟೊ ಇಡಿಸಿ ಪೂಜೆ ಮಾಡಿಸಿದ್ದಾರೆ. ನಮ್ಮ ದೇವಸ್ಥಾನಗಳು ಎಂದರೆ ಅಷ್ಟೊಂದು ಸಸಾರವೇ? ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಟ್ವಿಟ್ಟರ್‌ನಲ್ಲಿಯೂ ಅದೇ ರೀತಿಯ ಆರೋಪವೊರಿಸಲಾಗಿದ್ದು, ಆ ಟ್ವೀಟ್‌ 6 ಸಾವಿರಕ್ಕೂ ಹೆಚ್ಚು ಜನ ರೀಟ್ವಿಟ್ ಮಾಡಿದ್ದಾರೆ.

 

ಆಗಸ್ಟ್ 5 ರಂದು ರಾಮಂದಿರ ಶಿಲಾನ್ಯಾಸ ನಡೆಯುತ್ತಿರುವಾಗ ರಾಜ್ಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿದ್ದರಿಂದ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌ ರವರು ಪರೀಶೀಲನೆ ನಡೆಸಲು ಕೊಳ್ಳೇಗಾಲಕ್ಕೆ ತೆರಳಿದ್ದರು. ಆ ವೇಳೆ ಕೊಳ್ಳೇಗಾಲದ ಜ್ಯೋತಿಷಿ ಮತ್ತು ಅರ್ಚಕ ಟಿವಿಎಸ್ ರಾಘವನ್‌ರವರು ಎಸ್ ಪಿಯವರನ್ನು ತಮ್ಮ ಸ್ವಗೃಹದಲ್ಲಿರುವ ದೇವಸ್ಥಾನಕ್ಕೆ ಆಹ್ವಾನಿಸಿದ್ದರು. ಎಸ್‌ಪಿಯವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರಾಗಿದ್ದರಿಂದ ಏಸು ಮತ್ತು ಮೇರಿಯ ಚಿತ್ರವುಳ್ಳ ಫೋಟೊವನ್ನು ಗರ್ಭಗುಡಿಯಲ್ಲಿಟ್ಟು ಪೂಜೆ ಮಾಡಿದ ಅರ್ಚಕರು ಎಸ್‌ಪಿಯವರಿಗೆ ಸನ್ಮಾನ ಮಾಡಿ ಆ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು. ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಬಹುದು. ನಂತರ ಆ ಫೋಟೊ ವೈರಲ್ ಆಗಿದ್ದು ಎಸ್‌ಪಿಯವರೇ ಒತ್ತಾಯಪೂರ್ವಕವಾಗಿ ಏಸುವಿನ ಫೋಟೊ ಇರಿಸಿ ಪೂಜೆ ಮಾಡಿಸಿದ್ದಾರೆ ಎಂದು ದೂರಲಾಗಿತ್ತು.

ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂಬ ಆರೋಪ ಬಂದಾಗ ಅರ್ಚಕ ಟಿವಿಎಸ್ ರಾಘವನ್‌ರವರು “ಯಾರೋ ಬಂದರೂ, ಏನೇ ತಂದರೂ ಅದನ್ನು ದೇವರ ಮುಂದಿಟ್ಟು ಪೂಜೆ ಮಾಡಿಕೊಡುವುದು ನಮ್ಮ ಸಂಪ್ರದಾಯ. ಒಳ್ಳೆಯದಾಗಲಿ ಎಂಬ ಭಾವನೆಯಷ್ಟೆ ಹೊರತು ಯಾವುದೇ ಕೆಟ್ಟ ದೃಷ್ಟಿಯಿಂದ  ಆ ಫೋಟೊ ಇಟ್ಟಿಲ್ಲ. ಹಿಂದೂ ಸಮುದಾಯಕ್ಕೆ ಇದರಿಂದ ನೋವಾಗಿದ್ದಾರೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ. ಅಲ್ಲದೇ ತಾನು ಹಿಂದೂಗಳಾಗಿಯೇ ಉಳಿಯುತ್ತೇನೆ, ಹಿಂದೂವಾಗಿಯೇ ಕೊನೆಯಾಗುತ್ತೇನೆ ಎಂದು ಅವರು ಹೇಳಿದ್ದಾರೆ. ಅವರ ವಿಡಿಯೋ ಇಲ್ಲಿದೆ.

ಇನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಫ್ಯಾಕ್ಟ್‌ಚೆಕ್ ನಡೆಸಿದ್ದು, ಪೊಲೀಸರು ಸ್ವತಂತ್ರವಾಗಿ ಅಲ್ಲಿನ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರಂತೆ ಎಸ್‌ಪಿ ದಿವ್ಯಾ ಸಾರಾ ಥಾಮಸ್‌ರವರು ದೇವಾಸ್ಥಾನಕ್ಕೆ ಯಾವುದೇ ಫೋಟೊ ತೆಗೆದುಕೊಂಡು ಹೋಗಿಲ್ಲ ಮತ್ತು ಏಸು ಫೋಟೊಗೆ ಪೂಜೆ ಮಾಡುವಂತೆ ಒತ್ತಾಯಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅದರ ವರದಿ ಇಲ್ಲಿದೆ.

ದಿ ನ್ಯೂಸ್‌ಮಿನಿಟ್‌ ಜೊತೆ ಮಾತನಾಡಿದ ಎಸ್‌ಪಿ ದಿವ್ಯಾ ಸಾರಾ ಥಾಮಸ್‌ “ಫೇಕ್‌ ಪೋಸ್ಟ್‌ ಮೂಲಕ ನನ್ನ ಖ್ಯಾತಿ ಕೆಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಕೆಲ ಕಿಡಿಗೇಡಿಗಳು ಫೇಕ್‌ ಪೊಸ್ಟ್‌ ಹರಡುತ್ತಿದ್ದಾರೆ. ನಾನು ಕ್ರಿಶ್ಚಿಯನ್, ನನ್ನ ಪತಿ ಹಿಂದೂ ಆಗಿದ್ದಾರೆ. ನಾನು ದೇವಸ್ಥಾನಕ್ಕೆ ಹೋಗಿದ್ದೇ ಆದರೆ ಏಸುವಿನ ಫೋಟೊಗೆ ಪೂಜೆ ಮಾಡುವಂತೆ ಒತ್ತಾಯಿಸಿಲ್ಲ. ಅರ್ಚಕರೇ ಹಾಗೆ ಮಾಡಿ ನನ್ನನ್ನು ಸನ್ಮಾನಿಸಿದರು ಅಷ್ಟೇ” ಎಂದಿದ್ದಾರೆ. ಇದರ ವರದಿ ಇಲ್ಲಿದೆ.

ಒಟ್ಟಿನಲ್ಲಿ ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ ಎಂಬುವು ಸ್ಪಷ್ಟವಾಗಿದೆ.

ಕೃಪೆ: FAQTLY


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಶ್ರೀನಗರದ ಲಾಲ್ ಚೌಕದಲ್ಲಿ ರಾಷ್ಟ್ರಧ್ವಜ ಹಾರಿಸಿರುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...