Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್...

ಫ್ಯಾಕ್ಟ್‌ಚೆಕ್: ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

- Advertisement -
- Advertisement -

ಚಾಮರಾಜನಗರ ಜಿಲ್ಲೆಯ SP ದಿವ್ಯಾ ಸಾರಾ ಥಾಮಸ್ ಕೊಳ್ಳೇಗಾಲದ ಆಂಜನೇಯ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ಅರ್ಚಕರಿಂದ ಏಸುವಿನ ಫೋಟೊ ಇಡಿಸಿ ಪೂಜೆ ಮಾಡಿಸಿದ್ದಾರೆ. ನಮ್ಮ ದೇವಸ್ಥಾನಗಳು ಎಂದರೆ ಅಷ್ಟೊಂದು ಸಸಾರವೇ? ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಟ್ವಿಟ್ಟರ್‌ನಲ್ಲಿಯೂ ಅದೇ ರೀತಿಯ ಆರೋಪವೊರಿಸಲಾಗಿದ್ದು, ಆ ಟ್ವೀಟ್‌ 6 ಸಾವಿರಕ್ಕೂ ಹೆಚ್ಚು ಜನ ರೀಟ್ವಿಟ್ ಮಾಡಿದ್ದಾರೆ.

 

ಆಗಸ್ಟ್ 5 ರಂದು ರಾಮಂದಿರ ಶಿಲಾನ್ಯಾಸ ನಡೆಯುತ್ತಿರುವಾಗ ರಾಜ್ಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿದ್ದರಿಂದ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌ ರವರು ಪರೀಶೀಲನೆ ನಡೆಸಲು ಕೊಳ್ಳೇಗಾಲಕ್ಕೆ ತೆರಳಿದ್ದರು. ಆ ವೇಳೆ ಕೊಳ್ಳೇಗಾಲದ ಜ್ಯೋತಿಷಿ ಮತ್ತು ಅರ್ಚಕ ಟಿವಿಎಸ್ ರಾಘವನ್‌ರವರು ಎಸ್ ಪಿಯವರನ್ನು ತಮ್ಮ ಸ್ವಗೃಹದಲ್ಲಿರುವ ದೇವಸ್ಥಾನಕ್ಕೆ ಆಹ್ವಾನಿಸಿದ್ದರು. ಎಸ್‌ಪಿಯವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರಾಗಿದ್ದರಿಂದ ಏಸು ಮತ್ತು ಮೇರಿಯ ಚಿತ್ರವುಳ್ಳ ಫೋಟೊವನ್ನು ಗರ್ಭಗುಡಿಯಲ್ಲಿಟ್ಟು ಪೂಜೆ ಮಾಡಿದ ಅರ್ಚಕರು ಎಸ್‌ಪಿಯವರಿಗೆ ಸನ್ಮಾನ ಮಾಡಿ ಆ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು. ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಬಹುದು. ನಂತರ ಆ ಫೋಟೊ ವೈರಲ್ ಆಗಿದ್ದು ಎಸ್‌ಪಿಯವರೇ ಒತ್ತಾಯಪೂರ್ವಕವಾಗಿ ಏಸುವಿನ ಫೋಟೊ ಇರಿಸಿ ಪೂಜೆ ಮಾಡಿಸಿದ್ದಾರೆ ಎಂದು ದೂರಲಾಗಿತ್ತು.

ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂಬ ಆರೋಪ ಬಂದಾಗ ಅರ್ಚಕ ಟಿವಿಎಸ್ ರಾಘವನ್‌ರವರು “ಯಾರೋ ಬಂದರೂ, ಏನೇ ತಂದರೂ ಅದನ್ನು ದೇವರ ಮುಂದಿಟ್ಟು ಪೂಜೆ ಮಾಡಿಕೊಡುವುದು ನಮ್ಮ ಸಂಪ್ರದಾಯ. ಒಳ್ಳೆಯದಾಗಲಿ ಎಂಬ ಭಾವನೆಯಷ್ಟೆ ಹೊರತು ಯಾವುದೇ ಕೆಟ್ಟ ದೃಷ್ಟಿಯಿಂದ  ಆ ಫೋಟೊ ಇಟ್ಟಿಲ್ಲ. ಹಿಂದೂ ಸಮುದಾಯಕ್ಕೆ ಇದರಿಂದ ನೋವಾಗಿದ್ದಾರೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ. ಅಲ್ಲದೇ ತಾನು ಹಿಂದೂಗಳಾಗಿಯೇ ಉಳಿಯುತ್ತೇನೆ, ಹಿಂದೂವಾಗಿಯೇ ಕೊನೆಯಾಗುತ್ತೇನೆ ಎಂದು ಅವರು ಹೇಳಿದ್ದಾರೆ. ಅವರ ವಿಡಿಯೋ ಇಲ್ಲಿದೆ.

ಇನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಫ್ಯಾಕ್ಟ್‌ಚೆಕ್ ನಡೆಸಿದ್ದು, ಪೊಲೀಸರು ಸ್ವತಂತ್ರವಾಗಿ ಅಲ್ಲಿನ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರಂತೆ ಎಸ್‌ಪಿ ದಿವ್ಯಾ ಸಾರಾ ಥಾಮಸ್‌ರವರು ದೇವಾಸ್ಥಾನಕ್ಕೆ ಯಾವುದೇ ಫೋಟೊ ತೆಗೆದುಕೊಂಡು ಹೋಗಿಲ್ಲ ಮತ್ತು ಏಸು ಫೋಟೊಗೆ ಪೂಜೆ ಮಾಡುವಂತೆ ಒತ್ತಾಯಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅದರ ವರದಿ ಇಲ್ಲಿದೆ.

ದಿ ನ್ಯೂಸ್‌ಮಿನಿಟ್‌ ಜೊತೆ ಮಾತನಾಡಿದ ಎಸ್‌ಪಿ ದಿವ್ಯಾ ಸಾರಾ ಥಾಮಸ್‌ “ಫೇಕ್‌ ಪೋಸ್ಟ್‌ ಮೂಲಕ ನನ್ನ ಖ್ಯಾತಿ ಕೆಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಕೆಲ ಕಿಡಿಗೇಡಿಗಳು ಫೇಕ್‌ ಪೊಸ್ಟ್‌ ಹರಡುತ್ತಿದ್ದಾರೆ. ನಾನು ಕ್ರಿಶ್ಚಿಯನ್, ನನ್ನ ಪತಿ ಹಿಂದೂ ಆಗಿದ್ದಾರೆ. ನಾನು ದೇವಸ್ಥಾನಕ್ಕೆ ಹೋಗಿದ್ದೇ ಆದರೆ ಏಸುವಿನ ಫೋಟೊಗೆ ಪೂಜೆ ಮಾಡುವಂತೆ ಒತ್ತಾಯಿಸಿಲ್ಲ. ಅರ್ಚಕರೇ ಹಾಗೆ ಮಾಡಿ ನನ್ನನ್ನು ಸನ್ಮಾನಿಸಿದರು ಅಷ್ಟೇ” ಎಂದಿದ್ದಾರೆ. ಇದರ ವರದಿ ಇಲ್ಲಿದೆ.

ಒಟ್ಟಿನಲ್ಲಿ ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ ಎಂಬುವು ಸ್ಪಷ್ಟವಾಗಿದೆ.

ಕೃಪೆ: FAQTLY


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಶ್ರೀನಗರದ ಲಾಲ್ ಚೌಕದಲ್ಲಿ ರಾಷ್ಟ್ರಧ್ವಜ ಹಾರಿಸಿರುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...