Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...