Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...