Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...