Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...