Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...