Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

- Advertisement -
- Advertisement -

ಅಫ್ಘಾನ್‌ 20 ವರ್ಷಗಳ ನಂತರ ಮತ್ತೆ ತಾಲಿಬಾನಿಗಳ ವಶವಾಗಿದೆ. ಈ ಬೆಳವಣಿಗೆಯಾಗುತ್ತಿದ್ದಂತೆ ಅಫ್ಘಾನಿಸ್ತಾನದ ಮಹಿಳೆ ಮತ್ತು ಮಕ್ಕಳ ಬಗ್ಗೆ ಮರುಗಿ ಇಡೀ ವಿಶ್ವವೆ ಅವರ ಸ್ವಾತಂತ್ಯ್ರದ ಬಗ್ಗೆ ಆತಂಕ  ವ್ಯಕ್ತಪಡಿಸಿದ್ದವು. ಇಪ್ಪತ್ತು ವರ್ಷಗಳ ಹಿಂದೆ ತಾಲಿಬಾನ್ ನಡೆಸಿದ್ದ ಅಮಾನವೀಯ ಕೃತ್ಯಗಳ ಬಗ್ಗೆ ಹಲವಾರು ಚಿತ್ರಗಳು, ವರದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ, ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಂಕೋಲೆಗಳಿಂದ ಕಟ್ಟಿ ಹಾಕಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರದ ಜೊತೆಗೆ ‘ತಾಲಿಬಾನ್ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳಿ ಮಾರಾಟ ಮಾಡುತ್ತಿದೆ’ ಎಂಬ ಸಂದೇಶ ಕೂಡಾ ಹರಿದಾಡುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ಹಲವಾರು ಫೇಸ್‌ಬುಕ್ ಬಳಕೆದಾರರು ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮಹಿಳೆಯರನ್ನು ಹರಾಜು ಹಾಕುತ್ತಿದ್ದಾರೆ ಎಂದು ಪ್ರತಿಪಾದಿಸಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪೋಸ್ಟ್‌ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು.

ಬಲಪಂಥೀಯ ಬೆಂಬಲಿಗರಾದ ಶೆಫಾಲಿ ವೈದ್ಯ ಅವರು ಕೂಡಾ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇವರು ಈ ಹಿಂದೆ ಕೂಡಾ ಹಲವಾರು ಬಾರಿ ತಪ್ಪು ಮಾಹಿತಿಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಉದಾಹರಣೆಗಳಿಗೆ. ಅವರ ಟ್ವೀಟ್‌ನ ಆರ್ಕೈವ್‌ ಅನ್ನು ಇಲ್ಲಿ ನೋಡಬಹುದು. ಇನ್ನೂ ಹಲವಾರು ಜನರು ಇದನ್ನು ಹಂಚಿಕೊಂಡಿದ್ದು ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು 2014 ರ ಸಮಯದ್ದಾಗಿದ್ದು, ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ‘ಇಸ್ಲಾಮಿಕ್ ಸ್ಟೇಟ್ ಸೆಕ್ಸ್ ಸ್ಲೇವ್ ಮಾರ್ಕೆಟ್’ ಎಂಬ ಬೀದಿ ನಾಟಕವನ್ನು ಐಸಿಸ್‌‌ ಭಯೋತ್ಪಾದಕರ ವಿರುದ್ದ ಜಾಗೃತಿಗಾಗಿ ಪ್ರದರ್ಶಿಸಿತು. ಆಗ ಈ ಚಿತ್ರವನ್ನು ಕ್ಲಿಕ್ಕಿಸಲಾಗಿತ್ತು ಎಂದು ದಿ ಕ್ವಿಂಟ್‌ ಫ್ಯಾಕ್ಟ್‌ಚೆಕ್ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವಲ್ಲ

ಯಾಂಡೆಕ್ಸ್ ಎಂಬ ಸರ್ಚ್ ಇಂಜಿನ್ ಬಳಸಿ, ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಈ ಚಿತ್ರವು ಟೆಲಿಗ್ರಾಫ್ ಎಂಬ ವೆಬ್‌ಸೈಟ್‌ನಲ್ಲಿ ಬಳಸಿರುವುದನ್ನು ದಿ ಕ್ವಿಂಟ್‌‌‌ ಪತ್ತೆ ಹಚ್ಚಿದೆ. ಟರ್ಕಿಶ್‌ ಬಾಷೆಯಲ್ಲಿ ‘ಲಂಡನ್‌ನಲ್ಲಿ ಐಸಿಸ್ ಗ್ಯಾಂಗ್‌ಗಳ ವಿರುದ್ಧ ಅರ್ಥಪೂರ್ಣ ಕ್ರಮ’ ಎಂಬ ಶಿರ್ಷಿಕೆಯ ಅಡಿಯಲ್ಲಿ ಈ ಚಿತ್ರವಿರುವ ಲೇಖನವನ್ನು ಬರೆಯಲಾಗಿದೆ.

ಟೆಲಿಗ್ರಾಫ್‌ ಈ ವರದಿಯನ್ನು 2014 ರ ಅಕ್ಟೋಬರ್ 17 ರಂದು ಪ್ರಕಟಿಸಿದ್ದು, ಫೋಟೊ ಕೃಪೆಯನ್ನು ‘ಅರಿ ಮುರಾದ್’ ಎಂಬವರಿಗೆ ನೀಡಿದೆ.

ಅರಿ ಮುರಾದ್’ ಅವರ ಅಧೀಕೃತ ಫೇಸ್‌ಬುಕ್ ಖಾತೆಯಲ್ಲೂ ಇದೇ ದೃಶ್ಯಗಳನ್ನು ತೋರಿಸುವ ವಿಡಿಯೊ 2016 ರ ಮಾರ್ಚ್ 1 ರಂದು ಪ್ರಕಟಿಸಲಾಗಿದೆ. ವೀಡಿಯೊದಲ್ಲಿ, “ಐಸಿಸ್ ಮತ್ತು ಅವರ ಕ್ರೌರ್ಯವನ್ನು ತೋರಿಸುವ ಬೆಚ್ಚಿಬೀಳಿಸುವ ಪ್ರದರ್ಶನ” ಎಂದು ಉಲ್ಲೇಖಿಸಲಾಗಿದೆ.

ಈ ಬೀದಿ ನಾಟಕವನ್ನು ಕುರ್ದಿಶ್ ವಲಸೆಗಾರರ ​​ಗುಂಪಾದ ‘ಕಂಪೇಷನ್‌ 4 ಕುರ್ದಿಸ್ತಾನ್’ ಎಂಬ ಗುಂಪು ಲಂಡನ್‌ನಲ್ಲಿ ನಡೆಸಿತ್ತು. ಇರಾಕ್‌ನಲ್ಲಿ ಐಸಿಸ್‌ನ ಕೃತ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಈ ಬೀದಿ ನಾಟಕವನ್ನು ಪ್ರದರ್ಶನ ಮಾಡಲಾಯಿತು.

ಈ ಮೊದಲು ಕೂಡಾ ಈ ಬೀದಿ ನಾಟಕದ ದೃಶ್ಯವನ್ನು ಅಫ್ಘಾನಿಸ್ತಾನದ ಬೀದಿಯಲ್ಲಿ ಮಹಿಳೆಯರನ್ನು ಹರಾಜು ಹಾಕಲಾಗುತ್ತಿದೆ ಎಂಬ ಪ್ರತಿಪಾದನೆಯೊಂದಿಗೆ ವೈರಲ್‌ ಮಾಡಲಾಗಿತ್ತು.

ಆದಾಗ್ಯೂ, ಅಫ್ಘಾನಿಸ್ತಾನ ಮತ್ತೆ ತಾಲಿಬಾನ್ ವಶಕ್ಕೆ ಹೋಗಿರುವುದರಿಂದ ಮಹಿಳೆಯರು ತಮ್ಮ ಹಕ್ಕುಗಳು, ಸುರಕ್ಷತೆ, ಜೀವನ ಮತ್ತು ಭವಿಷ್ಯದ ಬಗ್ಗೆ ಭಯಪಡುತ್ತಿದ್ದಾರೆ ಎಂಬುವುದು ವರದಿಯಾಗಿದೆ. ಈ ಹಿಂದೆ ಕೂಡಾ ತಾಲಿಬಾನ್‌ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದಮನಕಾರಿ ನೀತಿಗಳನ್ನು ಪ್ರತಿಪಾದಿಸುತ್ತಲೆ ಬಂದಿದೆ. ಹಾಗಾಗಿ ಇಡಿ ವಿಶ್ವ ಅದೇ ಭಯದಿಂದ ಅಫ್ಘಾನಿಸ್ತಾನವನ್ನು ನೋಡುತ್ತಿದೆ.

ಆದರೆ ಪ್ರಸ್ತುತ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರವು ಅಫ್ಘಾನಿಸ್ತಾದ ದೃಶ್ಯವಲ್ಲ.

ಕೃಪೆ: ದಿ ಕ್ವಿಂಟ್‌

ಇದನ್ನೂ ಓದಿ: Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....