Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...